Homeಮುಖಪುಟಶ್ರಾವಸ್ತಿ| 2 ಮದರಸಾಗಳು ಬುಲ್ಡೋಜರ್‌ ನಿಂದ ನೆಲಸಮ: 18 ಮದರಸಾಗಳಿಗೆ ಸೀಲ್

ಶ್ರಾವಸ್ತಿ| 2 ಮದರಸಾಗಳು ಬುಲ್ಡೋಜರ್‌ ನಿಂದ ನೆಲಸಮ: 18 ಮದರಸಾಗಳಿಗೆ ಸೀಲ್

- Advertisement -
- Advertisement -

ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಅಡಿಯಲ್ಲಿ ಉತ್ತರಪ್ರದೇಶದ ಶ್ರಾವಸ್ತಿ ಜಿಲ್ಲಾಡಳಿತವು ನೇಪಾಳದ ಪಕ್ಕದ ಗಡಿ ಜಿಲ್ಲೆಗಳಲ್ಲಿರುವ ಮಸೀದಿಗಳು, ಮದರಸಾಗಳು ಮತ್ತು ಗೋರಿಗಳ ವಿರುದ್ಧ ಬುಲ್ಡೋಜರ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಆಡಳಿತವು “ಅಕ್ರಮ, ಅತಿಕ್ರಮಣ” ನಿರ್ಮಾಣಗಳು ಎಂದು ಕರೆಯುವ ಕಟ್ಟಡಗಳ ವಿರುದ್ಧದ ನಿರಂತರ ಕಾರ್ಯಾಚರಣೆಯ ಭಾಗವಾಗಿ ಇದು ಬಂದಿದೆ.

ಮಂಗಳವಾರ (ಮೇ 6), ಶ್ರಾವಸ್ತಿ ಆಡಳಿತವು ಎರಡು ಮದರಸಾಗಳನ್ನು ಕೆಡವುವ ಮೂಲಕ ತನ್ನ ಕಾರ್ಯಾಚರಣೆಯನ್ನು ಹೆಚ್ಚಿಸಿದೆ. ಕುಂಡಾ ಗ್ರಾಮದಲ್ಲಿರುವ ಇಸ್ಲಾಮಿಯಾ ಅರೇಬಿಯಾ ತಲೀಮುಲ್ ಕುರಾನ್ ಮತ್ತು ಬಂಥಿಹಾವಾದ ದಾರುಲ್ ಉಲೂಮ್ ಅಹ್ಲೆ ಸುನ್ನತ್ ಗೌಸ್ ಅಜಮ್ ಎಂಬು ಎರಡೂ ಮದರಸಾಗಳು ಸರಿಯಾದ ಮಾನ್ಯತೆ ಇಲ್ಲದೆ ಸರ್ಕಾರಿ ಭೂಮಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದವು ಎಂದು ಆರೋಪಿಸಲಾಗಿದೆ. ಕ್ರಮವನ್ನು ಮೇಲ್ವಿಚಾರಣೆ ಮಾಡುವ ಹಿರಿಯ ಅಧಿಕಾರಿಗಳು ಸೇರಿದಂತೆ ಭಾರೀ ಪೊಲೀಸ್ ಉಪಸ್ಥಿತಿಯ ನಡುವೆ ತೆರವು ಕಾರ್ಯಾಚರಣೆಗಳು ನಡೆದವು.

“ಸರ್ಕಾರಿ ಭೂಮಿಯಲ್ಲಿ ಈ ಅಕ್ರಮ ನಿರ್ಮಾಣಗಳ ವಿರುದ್ಧದ ಕ್ರಮವು ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ” ಎಂದು ಹಿರಿಯ ಜಿಲ್ಲಾ ಅಧಿಕಾರಿಯೊಬ್ಬರು ಹೇಳಿದರು. ಅತಿಕ್ರಮಣಗಳನ್ನು ನಿರ್ಮೂಲನೆ ಮಾಡುವ ಸರ್ಕಾರದ ವಿಶಾಲ ಕಾರ್ಯತಂತ್ರಕ್ಕೆ ಅನುಗುಣವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಒತ್ತಿ ಹೇಳಿದರು.

ಈ ಧ್ವಂಸವು ಮುಸ್ಲಿಂ ಸಮುದಾಯದೊಳಗೆ ತೀವ್ರ ಕೋಪ ಮತ್ತು ಪ್ರತಿಭಟನೆಗಳನ್ನು ಹುಟ್ಟುಹಾಕಿದೆ. ಸ್ಥಳೀಯರು ತಮ್ಮ ಧಾರ್ಮಿಕ ಸಂಸ್ಥೆಗಳ ಮೇಲಿನ ದಾಳಿ ಎಂದು ಭಾವಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಹಲವರು ಈ ನಡೆಯನ್ನು ರಾಜಕೀಯ ಪ್ರೇರಿತ ಮತ್ತು ಮುಸ್ಲಿಮರನ್ನು ಅಸಮಾನವಾಗಿ ಗುರಿಯಾಗಿಸಿಕೊಂಡಿವೆ ಎಂದು ಹೇಳಿದ್ದಾರೆ. “ಇದು ಕೇವಲ ಮದರಸಾಗಳ ಮೇಲಿನ ದಾಳಿಯಲ್ಲ; ಇದು ನಮ್ಮ ಗುರುತು, ನಮ್ಮ ನಂಬಿಕೆ ಮತ್ತು ನಮ್ಮ ಸಮುದಾಯದ ಮೇಲಿನ ದಾಳಿಯಾಗಿದೆ” ಎಂದು ಆಕ್ರೋಶಗೊಂಡ ಸ್ಥಳೀಯ ಮುಸ್ಲಿಂ ಮುಖಂಡರು ಹೇಳಿದರು. ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು, ಸರ್ಕಾರದ ಕ್ರಮಗಳ ಬಗ್ಗೆ ವ್ಯಕ್ತಿಗಳು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದರು.

ಬುಲ್ಡೋಜರ್ ಕ್ರಮದ ಜೊತೆಗೆ, ಜಿಲ್ಲಾಡಳಿತವು “ಗುರುತಿಸದ” ಮದರಸಾಗಳ ವಿರುದ್ಧವೂ ಕಠಿಣ ಕ್ರಮಗಳನ್ನು ತೆಗೆದುಕೊಂಡಿತು. ಶ್ರಾವಸ್ತಿ ಜಿಲ್ಲೆಯಾದ್ಯಂತ ಒಟ್ಟು 18 ಮದರಸಾಗಳನ್ನು ಸೀಲ್ ಮಾಡಲಾಯಿತು, ಏಕೆಂದರೆ ಅವು ಸರ್ಕಾರಿ ನಿಯಮಗಳನ್ನು ಪಾಲಿಸಲು ವಿಫಲವಾಗಿವೆ ಮತ್ತು ಕಾರ್ಯಾಚರಣೆಗೆ ಸರಿಯಾದ ದಾಖಲೆಗಳನ್ನು ಹೊಂದಿಲ್ಲ ಎಂದು ಆರೋಪಿಸಲಾಗಿದೆ.

ಶಿಕ್ಷಣ ಮತ್ತು ಧಾರ್ಮಿಕ ಮಂಡಳಿಗಳಿಂದ ಅಗತ್ಯ ಅನುಮೋದನೆ ಇಲ್ಲದೆ ಈ ಮದರಸಾಗಳು ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. “ಈ ಮದರಸಾಗಳನ್ನು ಸೀಲ್ ಮಾಡುವುದು ಜಿಲ್ಲೆಯಲ್ಲಿ ಕಾನೂನುಬದ್ಧವಾಗಿ ಮಾನ್ಯತೆ ಪಡೆದ ಸಂಸ್ಥೆಗಳು ಮಾತ್ರ ಕಾರ್ಯನಿರ್ವಹಿಸಲು ಅವಕಾಶ ನೀಡುವುದನ್ನು ಖಚಿತಪಡಿಸಿಕೊಳ್ಳಲು ನಡೆಯುತ್ತಿರುವ ಪ್ರಯತ್ನದ ಭಾಗವಾಗಿದೆ” ಎಂದು ಆಡಳಿತ ವಕ್ತಾರರು ಹೇಳಿದರು.

ಆದಾಗ್ಯೂ, ಈ ಕ್ರಮಗಳು ಮುಸ್ಲಿಂ ಸಮುದಾಯದಿಂದ ತೀವ್ರ ಅಸಮಾಧಾನಕ್ಕೆ ಕಾರಣವಾಯಿತು. ಮದರಸಾಗಳ ಸೀಲ್ ಮಾಡುವಿಕೆಯನ್ನು ಧಾರ್ಮಿಕ ತಾರತಮ್ಯದ ಮತ್ತೊಂದು ನಿದರ್ಶನವೆಂದು ಹಲವರು ಅಭಿಪ್ರಾಯಿಸಿದ್ದಾರೆ. ಮುಸ್ಲಿಮೇತರ ಸಂಸ್ಥೆಗಳಿಗೆ ಆಡಳಿತವು ಇದೇ ರೀತಿಯ ಕ್ರಮವನ್ನು ತಗೆದುಕೊಂಡಿಲ್ಲ ಎಂದು ಉಲ್ಲೇಖಿಸಿದ್ದಾರೆ. “ಸರ್ಕಾರವು ನಮ್ಮನ್ನು ಬೆದರಿಸಲು ಮತ್ತು ನಮ್ಮ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಬುಲ್ಡೋಜರ್‌ಗಳನ್ನು ಬಳಸುತ್ತಿದೆ” ಎಂದು ಸಮುದಾಯದ ಸದಸ್ಯರೊಬ್ಬರು ಹೇಳಿದ್ದಾರೆ. ಸರಿಯಾದ ಸೂಚನೆ ಇಲ್ಲದೆ 18 ಮದರಸಾಗಳನ್ನು ಸೀಲ್ ಮಾಡಿರುವುದು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಈ ಪ್ರದೇಶದಲ್ಲಿ ಮುಸ್ಲಿಮರ ವಿರುದ್ಧ ಅನ್ಯಾಯದ ವರ್ತನೆ ಮತ್ತು ಪಕ್ಷಪಾತದ ಧೋರಣೆ ಎಂದು ಅವರು ಆರೋಪಿಸಿದ್ದಾರೆ.

ಜಿಲ್ಲಾಡಳಿತವು ಐದು ಮದರಸಾಗಳು ಮತ್ತು ಒಂದು ಈದ್ಗಾವನ್ನು ನೆಲಸಮಗೊಳಿಸಿದಾಗ ಸೋಮವಾರ ಬುಲ್ಡೋಜರ್ ಕ್ರಮ ಪ್ರಾರಂಭವಾಯಿತು. ಧ್ವಂಸಗೊಂಡವುಗಳಲ್ಲಿ ಇಕೌನಾದ ಅಲಿನಗರದಲ್ಲಿರುವ ಮದರಸಾ ಇಸ್ಲಾಮಿಯಾ ಚಿಂತಾಯೊ ಗರೀಬ್ ನವಾಜ್ ಮತ್ತು ಖಾನ್ವಾ ಪೋಖರ್‌ನಲ್ಲಿರುವ ಈದ್ಗಾ ಸೇರಿವೆ.

ಬುಲ್ಡೋಜರ್ ಕಾರ್ಯಾಚರಣೆಯು ಯೋಗಿ ಸರ್ಕಾರವು ಸರ್ಕಾರಿ ಭೂಮಿಯನ್ನು ಅತಿಕ್ರಮಿಸುತ್ತಿದೆ ಎಂದು ಹೇಳಲಾದ ಧಾರ್ಮಿಕ ಮತ್ತು ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದೊಡ್ಡ ಅಭಿಯಾನದ ಭಾಗವಾಗಿದೆ, ಮುಖ್ಯವಾಗಿ ಭಾರತ-ನೇಪಾಳ ಗಡಿಯ ಸಮೀಪವಿರುವ  ಬಹ್ರೈಚ್, ಸಿದ್ಧಾರ್ಥನಗರ, ಮಹಾರಾಜ್‌ಗಂಜ್ ಮತ್ತು ಬಸ್ತಿ ಜಿಲ್ಲೆಗಳಲ್ಲಿ ಈ ಅಭಿಯಾನವನ್ನು ನಡೆಸಲಾಗುತ್ತಿದೆ.

ಮುಸ್ಲಿಮ್ ಯುವಕನ ಜೊತೆ ಹಿಂದೂ ಯುವತಿಯ ವೀಡಿಯೋ: ಮುಸ್ಲಿಮರ ಮನೆಗಳಿಗೆ ಬೆಂಕಿ ಹಚ್ಚಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...