Homeಮುಖಪುಟಶ್ರಾವಸ್ತಿ| 2 ಮದರಸಾಗಳು ಬುಲ್ಡೋಜರ್‌ ನಿಂದ ನೆಲಸಮ: 18 ಮದರಸಾಗಳಿಗೆ ಸೀಲ್

ಶ್ರಾವಸ್ತಿ| 2 ಮದರಸಾಗಳು ಬುಲ್ಡೋಜರ್‌ ನಿಂದ ನೆಲಸಮ: 18 ಮದರಸಾಗಳಿಗೆ ಸೀಲ್

- Advertisement -
- Advertisement -

ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಅಡಿಯಲ್ಲಿ ಉತ್ತರಪ್ರದೇಶದ ಶ್ರಾವಸ್ತಿ ಜಿಲ್ಲಾಡಳಿತವು ನೇಪಾಳದ ಪಕ್ಕದ ಗಡಿ ಜಿಲ್ಲೆಗಳಲ್ಲಿರುವ ಮಸೀದಿಗಳು, ಮದರಸಾಗಳು ಮತ್ತು ಗೋರಿಗಳ ವಿರುದ್ಧ ಬುಲ್ಡೋಜರ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಆಡಳಿತವು “ಅಕ್ರಮ, ಅತಿಕ್ರಮಣ” ನಿರ್ಮಾಣಗಳು ಎಂದು ಕರೆಯುವ ಕಟ್ಟಡಗಳ ವಿರುದ್ಧದ ನಿರಂತರ ಕಾರ್ಯಾಚರಣೆಯ ಭಾಗವಾಗಿ ಇದು ಬಂದಿದೆ.

ಮಂಗಳವಾರ (ಮೇ 6), ಶ್ರಾವಸ್ತಿ ಆಡಳಿತವು ಎರಡು ಮದರಸಾಗಳನ್ನು ಕೆಡವುವ ಮೂಲಕ ತನ್ನ ಕಾರ್ಯಾಚರಣೆಯನ್ನು ಹೆಚ್ಚಿಸಿದೆ. ಕುಂಡಾ ಗ್ರಾಮದಲ್ಲಿರುವ ಇಸ್ಲಾಮಿಯಾ ಅರೇಬಿಯಾ ತಲೀಮುಲ್ ಕುರಾನ್ ಮತ್ತು ಬಂಥಿಹಾವಾದ ದಾರುಲ್ ಉಲೂಮ್ ಅಹ್ಲೆ ಸುನ್ನತ್ ಗೌಸ್ ಅಜಮ್ ಎಂಬು ಎರಡೂ ಮದರಸಾಗಳು ಸರಿಯಾದ ಮಾನ್ಯತೆ ಇಲ್ಲದೆ ಸರ್ಕಾರಿ ಭೂಮಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದವು ಎಂದು ಆರೋಪಿಸಲಾಗಿದೆ. ಕ್ರಮವನ್ನು ಮೇಲ್ವಿಚಾರಣೆ ಮಾಡುವ ಹಿರಿಯ ಅಧಿಕಾರಿಗಳು ಸೇರಿದಂತೆ ಭಾರೀ ಪೊಲೀಸ್ ಉಪಸ್ಥಿತಿಯ ನಡುವೆ ತೆರವು ಕಾರ್ಯಾಚರಣೆಗಳು ನಡೆದವು.

“ಸರ್ಕಾರಿ ಭೂಮಿಯಲ್ಲಿ ಈ ಅಕ್ರಮ ನಿರ್ಮಾಣಗಳ ವಿರುದ್ಧದ ಕ್ರಮವು ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ” ಎಂದು ಹಿರಿಯ ಜಿಲ್ಲಾ ಅಧಿಕಾರಿಯೊಬ್ಬರು ಹೇಳಿದರು. ಅತಿಕ್ರಮಣಗಳನ್ನು ನಿರ್ಮೂಲನೆ ಮಾಡುವ ಸರ್ಕಾರದ ವಿಶಾಲ ಕಾರ್ಯತಂತ್ರಕ್ಕೆ ಅನುಗುಣವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಒತ್ತಿ ಹೇಳಿದರು.

ಈ ಧ್ವಂಸವು ಮುಸ್ಲಿಂ ಸಮುದಾಯದೊಳಗೆ ತೀವ್ರ ಕೋಪ ಮತ್ತು ಪ್ರತಿಭಟನೆಗಳನ್ನು ಹುಟ್ಟುಹಾಕಿದೆ. ಸ್ಥಳೀಯರು ತಮ್ಮ ಧಾರ್ಮಿಕ ಸಂಸ್ಥೆಗಳ ಮೇಲಿನ ದಾಳಿ ಎಂದು ಭಾವಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಹಲವರು ಈ ನಡೆಯನ್ನು ರಾಜಕೀಯ ಪ್ರೇರಿತ ಮತ್ತು ಮುಸ್ಲಿಮರನ್ನು ಅಸಮಾನವಾಗಿ ಗುರಿಯಾಗಿಸಿಕೊಂಡಿವೆ ಎಂದು ಹೇಳಿದ್ದಾರೆ. “ಇದು ಕೇವಲ ಮದರಸಾಗಳ ಮೇಲಿನ ದಾಳಿಯಲ್ಲ; ಇದು ನಮ್ಮ ಗುರುತು, ನಮ್ಮ ನಂಬಿಕೆ ಮತ್ತು ನಮ್ಮ ಸಮುದಾಯದ ಮೇಲಿನ ದಾಳಿಯಾಗಿದೆ” ಎಂದು ಆಕ್ರೋಶಗೊಂಡ ಸ್ಥಳೀಯ ಮುಸ್ಲಿಂ ಮುಖಂಡರು ಹೇಳಿದರು. ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು, ಸರ್ಕಾರದ ಕ್ರಮಗಳ ಬಗ್ಗೆ ವ್ಯಕ್ತಿಗಳು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದರು.

ಬುಲ್ಡೋಜರ್ ಕ್ರಮದ ಜೊತೆಗೆ, ಜಿಲ್ಲಾಡಳಿತವು “ಗುರುತಿಸದ” ಮದರಸಾಗಳ ವಿರುದ್ಧವೂ ಕಠಿಣ ಕ್ರಮಗಳನ್ನು ತೆಗೆದುಕೊಂಡಿತು. ಶ್ರಾವಸ್ತಿ ಜಿಲ್ಲೆಯಾದ್ಯಂತ ಒಟ್ಟು 18 ಮದರಸಾಗಳನ್ನು ಸೀಲ್ ಮಾಡಲಾಯಿತು, ಏಕೆಂದರೆ ಅವು ಸರ್ಕಾರಿ ನಿಯಮಗಳನ್ನು ಪಾಲಿಸಲು ವಿಫಲವಾಗಿವೆ ಮತ್ತು ಕಾರ್ಯಾಚರಣೆಗೆ ಸರಿಯಾದ ದಾಖಲೆಗಳನ್ನು ಹೊಂದಿಲ್ಲ ಎಂದು ಆರೋಪಿಸಲಾಗಿದೆ.

ಶಿಕ್ಷಣ ಮತ್ತು ಧಾರ್ಮಿಕ ಮಂಡಳಿಗಳಿಂದ ಅಗತ್ಯ ಅನುಮೋದನೆ ಇಲ್ಲದೆ ಈ ಮದರಸಾಗಳು ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. “ಈ ಮದರಸಾಗಳನ್ನು ಸೀಲ್ ಮಾಡುವುದು ಜಿಲ್ಲೆಯಲ್ಲಿ ಕಾನೂನುಬದ್ಧವಾಗಿ ಮಾನ್ಯತೆ ಪಡೆದ ಸಂಸ್ಥೆಗಳು ಮಾತ್ರ ಕಾರ್ಯನಿರ್ವಹಿಸಲು ಅವಕಾಶ ನೀಡುವುದನ್ನು ಖಚಿತಪಡಿಸಿಕೊಳ್ಳಲು ನಡೆಯುತ್ತಿರುವ ಪ್ರಯತ್ನದ ಭಾಗವಾಗಿದೆ” ಎಂದು ಆಡಳಿತ ವಕ್ತಾರರು ಹೇಳಿದರು.

ಆದಾಗ್ಯೂ, ಈ ಕ್ರಮಗಳು ಮುಸ್ಲಿಂ ಸಮುದಾಯದಿಂದ ತೀವ್ರ ಅಸಮಾಧಾನಕ್ಕೆ ಕಾರಣವಾಯಿತು. ಮದರಸಾಗಳ ಸೀಲ್ ಮಾಡುವಿಕೆಯನ್ನು ಧಾರ್ಮಿಕ ತಾರತಮ್ಯದ ಮತ್ತೊಂದು ನಿದರ್ಶನವೆಂದು ಹಲವರು ಅಭಿಪ್ರಾಯಿಸಿದ್ದಾರೆ. ಮುಸ್ಲಿಮೇತರ ಸಂಸ್ಥೆಗಳಿಗೆ ಆಡಳಿತವು ಇದೇ ರೀತಿಯ ಕ್ರಮವನ್ನು ತಗೆದುಕೊಂಡಿಲ್ಲ ಎಂದು ಉಲ್ಲೇಖಿಸಿದ್ದಾರೆ. “ಸರ್ಕಾರವು ನಮ್ಮನ್ನು ಬೆದರಿಸಲು ಮತ್ತು ನಮ್ಮ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಬುಲ್ಡೋಜರ್‌ಗಳನ್ನು ಬಳಸುತ್ತಿದೆ” ಎಂದು ಸಮುದಾಯದ ಸದಸ್ಯರೊಬ್ಬರು ಹೇಳಿದ್ದಾರೆ. ಸರಿಯಾದ ಸೂಚನೆ ಇಲ್ಲದೆ 18 ಮದರಸಾಗಳನ್ನು ಸೀಲ್ ಮಾಡಿರುವುದು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಈ ಪ್ರದೇಶದಲ್ಲಿ ಮುಸ್ಲಿಮರ ವಿರುದ್ಧ ಅನ್ಯಾಯದ ವರ್ತನೆ ಮತ್ತು ಪಕ್ಷಪಾತದ ಧೋರಣೆ ಎಂದು ಅವರು ಆರೋಪಿಸಿದ್ದಾರೆ.

ಜಿಲ್ಲಾಡಳಿತವು ಐದು ಮದರಸಾಗಳು ಮತ್ತು ಒಂದು ಈದ್ಗಾವನ್ನು ನೆಲಸಮಗೊಳಿಸಿದಾಗ ಸೋಮವಾರ ಬುಲ್ಡೋಜರ್ ಕ್ರಮ ಪ್ರಾರಂಭವಾಯಿತು. ಧ್ವಂಸಗೊಂಡವುಗಳಲ್ಲಿ ಇಕೌನಾದ ಅಲಿನಗರದಲ್ಲಿರುವ ಮದರಸಾ ಇಸ್ಲಾಮಿಯಾ ಚಿಂತಾಯೊ ಗರೀಬ್ ನವಾಜ್ ಮತ್ತು ಖಾನ್ವಾ ಪೋಖರ್‌ನಲ್ಲಿರುವ ಈದ್ಗಾ ಸೇರಿವೆ.

ಬುಲ್ಡೋಜರ್ ಕಾರ್ಯಾಚರಣೆಯು ಯೋಗಿ ಸರ್ಕಾರವು ಸರ್ಕಾರಿ ಭೂಮಿಯನ್ನು ಅತಿಕ್ರಮಿಸುತ್ತಿದೆ ಎಂದು ಹೇಳಲಾದ ಧಾರ್ಮಿಕ ಮತ್ತು ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದೊಡ್ಡ ಅಭಿಯಾನದ ಭಾಗವಾಗಿದೆ, ಮುಖ್ಯವಾಗಿ ಭಾರತ-ನೇಪಾಳ ಗಡಿಯ ಸಮೀಪವಿರುವ  ಬಹ್ರೈಚ್, ಸಿದ್ಧಾರ್ಥನಗರ, ಮಹಾರಾಜ್‌ಗಂಜ್ ಮತ್ತು ಬಸ್ತಿ ಜಿಲ್ಲೆಗಳಲ್ಲಿ ಈ ಅಭಿಯಾನವನ್ನು ನಡೆಸಲಾಗುತ್ತಿದೆ.

ಮುಸ್ಲಿಮ್ ಯುವಕನ ಜೊತೆ ಹಿಂದೂ ಯುವತಿಯ ವೀಡಿಯೋ: ಮುಸ್ಲಿಮರ ಮನೆಗಳಿಗೆ ಬೆಂಕಿ ಹಚ್ಚಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...