Homeಮುಖಪುಟಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ನೆಲಸಮ ಮಾಡಿದರೇ, ಬೇರೆಡೆ ಭೂಮಿ ನೀಡುತ್ತೇವೆ ಎಂದ ಹಿಂದೂ ಸಂಘಟನೆ

- Advertisement -
- Advertisement -

ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಮಥುರಾದಲ್ಲಿನ ಈದ್ಗಾ ಮಸೀದಿ ತೆರವುಗೊಳಿಸಬೇಕು ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಮಸೀದಿಯ ನಿರ್ವಹಣಾ ಸಮಿತಿಯು ತಾವೇ ಈದ್ಗಾ ಮಸೀದಿಯನ್ನು ನೆಲಸಮ ಮಾಡಲು ಒಪ್ಪಿದರೇ ದೇವಾಲಯದ ಆವರಣದಲ್ಲಿರುವ ಭೂಮಿಗಿಂತ ಬೇರೆ ಕಡೆ ಹೆಚ್ಚಿನ ಭೂಮಿಯನ್ನು ನೀಡುತ್ತೇವೆ ಎಂದು ಹಿಂದೂ ಸಂಘಟನೆಯೊಂದು ಮಥುರಾ ನ್ಯಾಯಾಲಯಕ್ಕೆ ತಿಳಿಸಿದೆ.

ಮಥುರಾ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯಕ್ಕೆ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ಆಂದೋಲನ ಸಮಿತಿ ಸಲ್ಲಿಸಿರುವ ಅರ್ಜಿಯಲ್ಲಿ ಮಸೀದಿಯನ್ನು ಕೆಡವಿದರೇ, ನೆಲಸಮ  ಮಾಡಿದರೇ, ಮಸೀದಿ ನಿರ್ವಹಣಾ ಸಮಿತಿಗೆ ದೇವಾಲಯ ಇರುವ ಪಟ್ಟಣ ಬಿಟ್ಟು, ಹೊರ ಭಾಗದಲ್ಲಿ ಮಸೀದಿ ನಿರ್ಮಿಸಲು ಹೆಚ್ಚಿನ ಭೂಮಿ ನೀಡುವುದಾಗಿ ತಿಳಿಸಿದೆ.

ಮಸೀದಿಯ ನಿರ್ವಹಣಾ ಸಮಿತಿಯು ಅಸ್ತಿತ್ವದಲ್ಲಿರುವ ಶಾಹಿ ಮಸೀದಿ ಈದ್ಗಾವನ್ನು ಸ್ವಯಂಪ್ರೇರಣೆಯಿಂದ ನೆಲಸಮಗೊಳಿಸಿ, ಭೂಮಿಯನ್ನು ಕೃಷ್ಣ ಜನ್ಮಭೂಮಿ ಮುಕ್ತಿ ಆಂದೋಲನ ಸಮಿತಿಗೆ ಒಪ್ಪಿಸಿದರೆ, ಮಸೀದಿ ಇರುವ ಜಾಗಕ್ಕಿಂತ ದೊಡ್ಡದಾದ ಭೂಮಿಯನ್ನು ನೀಡಲಾಗುವುದು ಎಂದು ಸಮಿತಿ ಅಧ್ಯಕ್ಷ ವಕೀಲ ಮಹೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಹಿರಿಯ ಸಿವಿಲ್ ನ್ಯಾಯಾಧೀಶರು ರಜೆಯಲ್ಲಿದ್ದ ಕಾರಣ ಅರ್ಜಿಯನ್ನು ಸಿವಿಲ್ ನ್ಯಾಯಾಧೀಶ II ಅನುಪಮ್ ಸಿಂಗ್ ಅವರಿಗೆ ಸಲ್ಲಿಸಲಾಗಿದೆ.

ದೇವಾಲಯದ ಸಮೀಪದಿಂದ ಮಸೀದಿಯನ್ನು ತೆರವುಗೊಳಿಸುವಂತೆ ನ್ಯಾಯಾಲಯವನ್ನು ಕೋರಿ ಹಿಂದೂ ಸಂಘಟನೆಯ ಪರ ವಕೀಲರು ಸಲ್ಲಿಸಿದ್ದ ಅರ್ಜಿ 2020 ರ ಡಿಸೆಂಬರ್‌ನಿಂದ ನ್ಯಾಯಾಲಯದಲ್ಲಿ ಬಾಕಿ ಇದೆ. ಈಗ ಸಮಿತಿಯು ಸಂಧಾನಕ್ಕೆ ಪ್ರಯತ್ನಿಸುತ್ತಿದೆ.

ಭಗವಾನ್ ಶ್ರೀ ಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದಲ್ಲಿ 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. ಮಸೀದಿಯನ್ನು ತೆರವುಗೊಳಿಸಬೇಕೆಂದು ಕೋರಿ ಮಥುರಾದಲ್ಲಿ ವಿವಿಧ ಸಿವಿಲ್ ನ್ಯಾಯಾಲಯಗಳಲ್ಲಿ ಹಲವಾರು ಅರ್ಜಿಗಳು ಮತ್ತು ಮನವಿಗಳು ಬಾಕಿ ಉಳಿದಿವೆ. ಮಥುರಾದ ಸಿವಿಲ್ ನ್ಯಾಯಾಲಯ ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಕೆಲವು ಅರ್ಜಿಗಳನ್ನು ವಜಾಗೊಳಿಸಿತ್ತು.


ಇದನ್ನೂ ಓದಿ: ಮಾನನಷ್ಟ ಪ್ರಕರಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ 2 ಕೋಟಿ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...