Homeಅಂತರಾಷ್ಟ್ರೀಯಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

- Advertisement -
- Advertisement -

ನಾರ್ವೆ, ಇರಾಕ್ ಮತ್ತು ಆಸ್ಟ್ರೇಲಿಯಾದಲ್ಲಿರುವ ಮೂರು ವಿದೇಶಿ ರಾಯಭಾರ ಕಚೇರಿಗಳನ್ನು ಶ್ರೀಲಂಕಾ ತಾತ್ಕಾಲಿಕವಾಗಿ ಮುಚ್ಚಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ ಬೆಳೆಯುತ್ತಿರುವ ಅಶಾಂತಿಯ ನಡುವೆ ಕನಿಷ್ಠ 41 ಸಂಸದರು ಮೈತ್ರಿ ಸರ್ಕಾರದಿಂದ ಸೋಮವಾರದಂದು ಹೊರನಡೆದಿದ್ದು, ದೇಶದ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಆಡಳಿತ ಒಕ್ಕೂಟವು ಮಂಗಳವಾರ ಸಂಸತ್ತಿನಲ್ಲಿ ಬಹುಮತವನ್ನು ಕಳೆದುಕೊಂಡಿದೆ.

ಶ್ರೀಲಂಕಾದ ವಿರೋಧ ಪಕ್ಷವು ಅಧ್ಯಕ್ಷ ರಾಜಪಕ್ಸೆ ಅವರ ಮೈತ್ರಿ ಸರ್ಕಾರಕ್ಕೆ ಸೇರುವಂತೆ ನೀಡಿದ್ದ ಆಹ್ವಾನವನ್ನು “ಅಸಂಬದ್ಧ” ಎಂದು ತಳ್ಳಿಹಾಕಿದೆ. ಬದಲಿಗೆ ದೇಶದಲ್ಲಿ ಆಹಾರ, ಇಂಧನ ಮತ್ತು ಔಷಧಿಗಳ ಕೊರತೆಯಿಂದಾಗಿ ಹದಗೆಟ್ಟ ಪರಿಸ್ಥಿತಿಯ ಹೊಣೆಹೊತ್ತು ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಮತ್ತು ಅವರ ಹಿರಿಯ ಸಹೋದರ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಸಂಪುಟದಲ್ಲಿರುವ ಎಲ್ಲಾ 26 ಸಚಿವರು ತಡರಾತ್ರಿ ನಡೆದ ಸಭೆಯಲ್ಲಿ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಶಿಕ್ಷಣ ಸಚಿವ ದಿನೇಶ್ ಗುಣವರ್ದನಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಶ್ರೀಲಂಕಾದಾದ್ಯಂತ ಕರ್ಫ್ಯೂಗಳನ್ನು ಹೇರಿರುವುದರ ಹೊರತಾಗಿಯೂ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಉಲ್ಬಣಗೊಂಡಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ಕಾರ್ಯಕಾರಿ ಅಧ್ಯಕ್ಷೀಯ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಕರೆ ನೀಡಿದ್ದಾರೆ. “ಸುಮಾರು 20 ವರ್ಷಗಳ ಕಾಲ ಪ್ರತಿಯೊಬ್ಬ ನಾಯಕರೂ ಕಾರ್ಯಕಾರಿ ಅಧ್ಯಕ್ಷ ಸ್ಥಾನವನ್ನು ರದ್ದುಪಡಿಸುವುದಾಗಿ ಭರವಸೆ ನೀಡಿದ್ದಾರೆ, ಆದರೆ ಅದನ್ನು ಬಲಪಡಿಸಲಾಗಿದೆ” ಎಂದು ಪ್ರೇಮದಾಸ ಮಂಗಳವಾರ ಸಂಸತ್ತಿನಲ್ಲಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಅವರು ಮಾಡಿದ ಭಾಷಣದಲ್ಲಿ ದೇಶಕ್ಕೆ ಹೊಸ ಚುನಾವಣಾ ವ್ಯವಸ್ಥೆಯನ್ನು ಪರಿಚಯಿಸುವ ಅಗತ್ಯತೆಯ ಬಗ್ಗೆ ಸಂಸದರಿಗೆ ನೆನಪಿಸಿದ್ದಾರೆ. ಇದರ ಮಧ್ಯೆ ಶ್ರೀಲಂಕಾದ ಹಣಕಾಸು ಸಚಿವ ಅಲಿ ಸಬ್ರಿ ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದಲ್ಲೆ ಇಂದು ರಾಜೀನಾಮೆ ನೀಡಿದ್ದಾರೆ.

ಅಧ್ಯಕ್ಷ ಗೋಟಬಯ ರಾಜಪಕ್ಸೆ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರ್ಕಾರ ಶನಿವಾರ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಯೂಟ್ಯೂಬ್ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸಿದೆ. ಭಾನುವಾರ ಮಧ್ಯಾಹ್ನ ಪ್ರಧಾನಿಯ ಪುತ್ರ ನಮಲ್ ರಾಜಪಕ್ಸೆ ವಿರುದ್ಧವಾಗಿ ಮಾತನಾಡಿದ ನಂತರ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...