Homeಅಂತರಾಷ್ಟ್ರೀಯಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

- Advertisement -
- Advertisement -

ನಾರ್ವೆ, ಇರಾಕ್ ಮತ್ತು ಆಸ್ಟ್ರೇಲಿಯಾದಲ್ಲಿರುವ ಮೂರು ವಿದೇಶಿ ರಾಯಭಾರ ಕಚೇರಿಗಳನ್ನು ಶ್ರೀಲಂಕಾ ತಾತ್ಕಾಲಿಕವಾಗಿ ಮುಚ್ಚಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ ಬೆಳೆಯುತ್ತಿರುವ ಅಶಾಂತಿಯ ನಡುವೆ ಕನಿಷ್ಠ 41 ಸಂಸದರು ಮೈತ್ರಿ ಸರ್ಕಾರದಿಂದ ಸೋಮವಾರದಂದು ಹೊರನಡೆದಿದ್ದು, ದೇಶದ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಆಡಳಿತ ಒಕ್ಕೂಟವು ಮಂಗಳವಾರ ಸಂಸತ್ತಿನಲ್ಲಿ ಬಹುಮತವನ್ನು ಕಳೆದುಕೊಂಡಿದೆ.

ಶ್ರೀಲಂಕಾದ ವಿರೋಧ ಪಕ್ಷವು ಅಧ್ಯಕ್ಷ ರಾಜಪಕ್ಸೆ ಅವರ ಮೈತ್ರಿ ಸರ್ಕಾರಕ್ಕೆ ಸೇರುವಂತೆ ನೀಡಿದ್ದ ಆಹ್ವಾನವನ್ನು “ಅಸಂಬದ್ಧ” ಎಂದು ತಳ್ಳಿಹಾಕಿದೆ. ಬದಲಿಗೆ ದೇಶದಲ್ಲಿ ಆಹಾರ, ಇಂಧನ ಮತ್ತು ಔಷಧಿಗಳ ಕೊರತೆಯಿಂದಾಗಿ ಹದಗೆಟ್ಟ ಪರಿಸ್ಥಿತಿಯ ಹೊಣೆಹೊತ್ತು ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಮತ್ತು ಅವರ ಹಿರಿಯ ಸಹೋದರ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಸಂಪುಟದಲ್ಲಿರುವ ಎಲ್ಲಾ 26 ಸಚಿವರು ತಡರಾತ್ರಿ ನಡೆದ ಸಭೆಯಲ್ಲಿ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಶಿಕ್ಷಣ ಸಚಿವ ದಿನೇಶ್ ಗುಣವರ್ದನಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಶ್ರೀಲಂಕಾದಾದ್ಯಂತ ಕರ್ಫ್ಯೂಗಳನ್ನು ಹೇರಿರುವುದರ ಹೊರತಾಗಿಯೂ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಉಲ್ಬಣಗೊಂಡಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ಕಾರ್ಯಕಾರಿ ಅಧ್ಯಕ್ಷೀಯ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಕರೆ ನೀಡಿದ್ದಾರೆ. “ಸುಮಾರು 20 ವರ್ಷಗಳ ಕಾಲ ಪ್ರತಿಯೊಬ್ಬ ನಾಯಕರೂ ಕಾರ್ಯಕಾರಿ ಅಧ್ಯಕ್ಷ ಸ್ಥಾನವನ್ನು ರದ್ದುಪಡಿಸುವುದಾಗಿ ಭರವಸೆ ನೀಡಿದ್ದಾರೆ, ಆದರೆ ಅದನ್ನು ಬಲಪಡಿಸಲಾಗಿದೆ” ಎಂದು ಪ್ರೇಮದಾಸ ಮಂಗಳವಾರ ಸಂಸತ್ತಿನಲ್ಲಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಅವರು ಮಾಡಿದ ಭಾಷಣದಲ್ಲಿ ದೇಶಕ್ಕೆ ಹೊಸ ಚುನಾವಣಾ ವ್ಯವಸ್ಥೆಯನ್ನು ಪರಿಚಯಿಸುವ ಅಗತ್ಯತೆಯ ಬಗ್ಗೆ ಸಂಸದರಿಗೆ ನೆನಪಿಸಿದ್ದಾರೆ. ಇದರ ಮಧ್ಯೆ ಶ್ರೀಲಂಕಾದ ಹಣಕಾಸು ಸಚಿವ ಅಲಿ ಸಬ್ರಿ ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದಲ್ಲೆ ಇಂದು ರಾಜೀನಾಮೆ ನೀಡಿದ್ದಾರೆ.

ಅಧ್ಯಕ್ಷ ಗೋಟಬಯ ರಾಜಪಕ್ಸೆ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರ್ಕಾರ ಶನಿವಾರ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಯೂಟ್ಯೂಬ್ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸಿದೆ. ಭಾನುವಾರ ಮಧ್ಯಾಹ್ನ ಪ್ರಧಾನಿಯ ಪುತ್ರ ನಮಲ್ ರಾಜಪಕ್ಸೆ ವಿರುದ್ಧವಾಗಿ ಮಾತನಾಡಿದ ನಂತರ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....