Homeಅಂತರಾಷ್ಟ್ರೀಯಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

- Advertisement -
- Advertisement -

ನಾರ್ವೆ, ಇರಾಕ್ ಮತ್ತು ಆಸ್ಟ್ರೇಲಿಯಾದಲ್ಲಿರುವ ಮೂರು ವಿದೇಶಿ ರಾಯಭಾರ ಕಚೇರಿಗಳನ್ನು ಶ್ರೀಲಂಕಾ ತಾತ್ಕಾಲಿಕವಾಗಿ ಮುಚ್ಚಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ ಬೆಳೆಯುತ್ತಿರುವ ಅಶಾಂತಿಯ ನಡುವೆ ಕನಿಷ್ಠ 41 ಸಂಸದರು ಮೈತ್ರಿ ಸರ್ಕಾರದಿಂದ ಸೋಮವಾರದಂದು ಹೊರನಡೆದಿದ್ದು, ದೇಶದ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಆಡಳಿತ ಒಕ್ಕೂಟವು ಮಂಗಳವಾರ ಸಂಸತ್ತಿನಲ್ಲಿ ಬಹುಮತವನ್ನು ಕಳೆದುಕೊಂಡಿದೆ.

ಶ್ರೀಲಂಕಾದ ವಿರೋಧ ಪಕ್ಷವು ಅಧ್ಯಕ್ಷ ರಾಜಪಕ್ಸೆ ಅವರ ಮೈತ್ರಿ ಸರ್ಕಾರಕ್ಕೆ ಸೇರುವಂತೆ ನೀಡಿದ್ದ ಆಹ್ವಾನವನ್ನು “ಅಸಂಬದ್ಧ” ಎಂದು ತಳ್ಳಿಹಾಕಿದೆ. ಬದಲಿಗೆ ದೇಶದಲ್ಲಿ ಆಹಾರ, ಇಂಧನ ಮತ್ತು ಔಷಧಿಗಳ ಕೊರತೆಯಿಂದಾಗಿ ಹದಗೆಟ್ಟ ಪರಿಸ್ಥಿತಿಯ ಹೊಣೆಹೊತ್ತು ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಮತ್ತು ಅವರ ಹಿರಿಯ ಸಹೋದರ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಸಂಪುಟದಲ್ಲಿರುವ ಎಲ್ಲಾ 26 ಸಚಿವರು ತಡರಾತ್ರಿ ನಡೆದ ಸಭೆಯಲ್ಲಿ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಶಿಕ್ಷಣ ಸಚಿವ ದಿನೇಶ್ ಗುಣವರ್ದನಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಶ್ರೀಲಂಕಾದಾದ್ಯಂತ ಕರ್ಫ್ಯೂಗಳನ್ನು ಹೇರಿರುವುದರ ಹೊರತಾಗಿಯೂ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಉಲ್ಬಣಗೊಂಡಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ಕಾರ್ಯಕಾರಿ ಅಧ್ಯಕ್ಷೀಯ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಕರೆ ನೀಡಿದ್ದಾರೆ. “ಸುಮಾರು 20 ವರ್ಷಗಳ ಕಾಲ ಪ್ರತಿಯೊಬ್ಬ ನಾಯಕರೂ ಕಾರ್ಯಕಾರಿ ಅಧ್ಯಕ್ಷ ಸ್ಥಾನವನ್ನು ರದ್ದುಪಡಿಸುವುದಾಗಿ ಭರವಸೆ ನೀಡಿದ್ದಾರೆ, ಆದರೆ ಅದನ್ನು ಬಲಪಡಿಸಲಾಗಿದೆ” ಎಂದು ಪ್ರೇಮದಾಸ ಮಂಗಳವಾರ ಸಂಸತ್ತಿನಲ್ಲಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಅವರು ಮಾಡಿದ ಭಾಷಣದಲ್ಲಿ ದೇಶಕ್ಕೆ ಹೊಸ ಚುನಾವಣಾ ವ್ಯವಸ್ಥೆಯನ್ನು ಪರಿಚಯಿಸುವ ಅಗತ್ಯತೆಯ ಬಗ್ಗೆ ಸಂಸದರಿಗೆ ನೆನಪಿಸಿದ್ದಾರೆ. ಇದರ ಮಧ್ಯೆ ಶ್ರೀಲಂಕಾದ ಹಣಕಾಸು ಸಚಿವ ಅಲಿ ಸಬ್ರಿ ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದಲ್ಲೆ ಇಂದು ರಾಜೀನಾಮೆ ನೀಡಿದ್ದಾರೆ.

ಅಧ್ಯಕ್ಷ ಗೋಟಬಯ ರಾಜಪಕ್ಸೆ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರ್ಕಾರ ಶನಿವಾರ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಯೂಟ್ಯೂಬ್ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸಿದೆ. ಭಾನುವಾರ ಮಧ್ಯಾಹ್ನ ಪ್ರಧಾನಿಯ ಪುತ್ರ ನಮಲ್ ರಾಜಪಕ್ಸೆ ವಿರುದ್ಧವಾಗಿ ಮಾತನಾಡಿದ ನಂತರ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...