Homeಅಂತರಾಷ್ಟ್ರೀಯಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

- Advertisement -
- Advertisement -

ನಾರ್ವೆ, ಇರಾಕ್ ಮತ್ತು ಆಸ್ಟ್ರೇಲಿಯಾದಲ್ಲಿರುವ ಮೂರು ವಿದೇಶಿ ರಾಯಭಾರ ಕಚೇರಿಗಳನ್ನು ಶ್ರೀಲಂಕಾ ತಾತ್ಕಾಲಿಕವಾಗಿ ಮುಚ್ಚಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ ಬೆಳೆಯುತ್ತಿರುವ ಅಶಾಂತಿಯ ನಡುವೆ ಕನಿಷ್ಠ 41 ಸಂಸದರು ಮೈತ್ರಿ ಸರ್ಕಾರದಿಂದ ಸೋಮವಾರದಂದು ಹೊರನಡೆದಿದ್ದು, ದೇಶದ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಆಡಳಿತ ಒಕ್ಕೂಟವು ಮಂಗಳವಾರ ಸಂಸತ್ತಿನಲ್ಲಿ ಬಹುಮತವನ್ನು ಕಳೆದುಕೊಂಡಿದೆ.

ಶ್ರೀಲಂಕಾದ ವಿರೋಧ ಪಕ್ಷವು ಅಧ್ಯಕ್ಷ ರಾಜಪಕ್ಸೆ ಅವರ ಮೈತ್ರಿ ಸರ್ಕಾರಕ್ಕೆ ಸೇರುವಂತೆ ನೀಡಿದ್ದ ಆಹ್ವಾನವನ್ನು “ಅಸಂಬದ್ಧ” ಎಂದು ತಳ್ಳಿಹಾಕಿದೆ. ಬದಲಿಗೆ ದೇಶದಲ್ಲಿ ಆಹಾರ, ಇಂಧನ ಮತ್ತು ಔಷಧಿಗಳ ಕೊರತೆಯಿಂದಾಗಿ ಹದಗೆಟ್ಟ ಪರಿಸ್ಥಿತಿಯ ಹೊಣೆಹೊತ್ತು ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಮತ್ತು ಅವರ ಹಿರಿಯ ಸಹೋದರ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಸಂಪುಟದಲ್ಲಿರುವ ಎಲ್ಲಾ 26 ಸಚಿವರು ತಡರಾತ್ರಿ ನಡೆದ ಸಭೆಯಲ್ಲಿ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಶಿಕ್ಷಣ ಸಚಿವ ದಿನೇಶ್ ಗುಣವರ್ದನಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಶ್ರೀಲಂಕಾದಾದ್ಯಂತ ಕರ್ಫ್ಯೂಗಳನ್ನು ಹೇರಿರುವುದರ ಹೊರತಾಗಿಯೂ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಉಲ್ಬಣಗೊಂಡಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ಕಾರ್ಯಕಾರಿ ಅಧ್ಯಕ್ಷೀಯ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಕರೆ ನೀಡಿದ್ದಾರೆ. “ಸುಮಾರು 20 ವರ್ಷಗಳ ಕಾಲ ಪ್ರತಿಯೊಬ್ಬ ನಾಯಕರೂ ಕಾರ್ಯಕಾರಿ ಅಧ್ಯಕ್ಷ ಸ್ಥಾನವನ್ನು ರದ್ದುಪಡಿಸುವುದಾಗಿ ಭರವಸೆ ನೀಡಿದ್ದಾರೆ, ಆದರೆ ಅದನ್ನು ಬಲಪಡಿಸಲಾಗಿದೆ” ಎಂದು ಪ್ರೇಮದಾಸ ಮಂಗಳವಾರ ಸಂಸತ್ತಿನಲ್ಲಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಅವರು ಮಾಡಿದ ಭಾಷಣದಲ್ಲಿ ದೇಶಕ್ಕೆ ಹೊಸ ಚುನಾವಣಾ ವ್ಯವಸ್ಥೆಯನ್ನು ಪರಿಚಯಿಸುವ ಅಗತ್ಯತೆಯ ಬಗ್ಗೆ ಸಂಸದರಿಗೆ ನೆನಪಿಸಿದ್ದಾರೆ. ಇದರ ಮಧ್ಯೆ ಶ್ರೀಲಂಕಾದ ಹಣಕಾಸು ಸಚಿವ ಅಲಿ ಸಬ್ರಿ ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದಲ್ಲೆ ಇಂದು ರಾಜೀನಾಮೆ ನೀಡಿದ್ದಾರೆ.

ಅಧ್ಯಕ್ಷ ಗೋಟಬಯ ರಾಜಪಕ್ಸೆ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರ್ಕಾರ ಶನಿವಾರ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಯೂಟ್ಯೂಬ್ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸಿದೆ. ಭಾನುವಾರ ಮಧ್ಯಾಹ್ನ ಪ್ರಧಾನಿಯ ಪುತ್ರ ನಮಲ್ ರಾಜಪಕ್ಸೆ ವಿರುದ್ಧವಾಗಿ ಮಾತನಾಡಿದ ನಂತರ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಪೊಲೀಸರು ಜನರ ಮೊಬೈಲ್ ಪರಿಶೀಲಿಸುವಂತಿಲ್ಲ : ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...