Homeಮುಖಪುಟಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

ಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

- Advertisement -
- Advertisement -

ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧ ಪ್ರತಿಭಟನೆ ತೀವ್ರವಾಗಿದ್ದು, ಮುಂದಿನ ಬುಧವಾರ ಅಧ್ಯಕ್ಷ ರಾಜೀನಾಮೆ ನೀಡಲಿದ್ದಾರೆ. ಸಂಸತ್ತು ನೂತನ ನಾಯಕನನ್ನು ಆಯ್ಕೆ ಮಾಡಿಕೊಳ್ಳುವವರೆಗೆ, ಅಂದರೆ 30 ದಿನಗಳವರೆಗೆ ಸ್ಪೀಕರ್‌‌ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಕೊಲಂಬೊದಲ್ಲಿರುವ ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಪ್ರತಿಭಟನಾಕಾರರು ಇಂದು ಬೆಂಕಿ ಹಚ್ಚಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ‘ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದಾರೆ’ ಎಂದು ಲಂಕಾ ಪ್ರಧಾನಿ ಕಚೇರಿ ಹೇಳಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರೂ, ಅವರು ಪ್ರಧಾನಿ ಗೃಹ ಪ್ರವೇಶಿಸಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿಯವರ ವಾಹನಗಳಿಗೆ ಹಾನಿ ಮಾಡುತ್ತಿರುವುದು ಕಂಡುಬಂದಿದೆ.

ಮೇ ತಿಂಗಳಲ್ಲಿ ಪ್ರಧಾನ ಮಂತ್ರಿಯಾಗಿ ನೇಮಕಗೊಂಡ ವಿಕ್ರಮಸಿಂಘೆ, “ಸರ್ಕಾರದ ಮುಂದುವರಿಕೆ ಮತ್ತು ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ” ಎಂದು ಘೋಷಿಸಿದ್ದಾರೆ.

“ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಇಂದು ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ಸ್ವೀಕರಿಸುತ್ತೇನೆ. ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮಾಜಿ ಕ್ರಿಕೆಟಿಗರಾದ ಸನತ್ ಜಯಸೂರ್ಯ ಮತ್ತು ಮಹೇಲಾ ಜಯವರ್ಧನಾ ಅವರು ಹಿಂಸಾಚಾರವನ್ನು ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮನವಿ ಮಾಡಿದ್ದಾರೆ.

ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಮೊದಲು ರಾಜಪಕ್ಷೆ ಪಲಾಯನ ಮಾಡಿದ್ದರು. ಇದರ ನಡುವೆ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಹೊರಹೊಮ್ಮಿದವು. ಸೂಟ್‌ಕೇಸ್‌ಗಳು ಅಧ್ಯಕ್ಷ ರಾಜಪಕ್ಸೆ ಅವರದ್ದು ಎಂದು ಸ್ಥಳೀಯ ಮಾಧ್ಯಮಗಳು ಹೇಳಿಕೊಂಡಿವೆ.

ಅಧ್ಯಕ್ಷೀಯ ಭವನದ ಗೇಟ್‌ ಮುರಿದು ಒಳ ನಡೆದ ಪ್ರತಿಭಟನಾಕಾರರು, ಈಜುಕೊಳದಲ್ಲಿ ಈಜಾಡಿದ್ದರು. ಕಿಚನ್‌ನಲ್ಲಿರುವ ಊಟವನ್ನು ಸವಿದಿದ್ದರು.

ಇದನ್ನೂ ಓದಿರಿ: ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

22 ಮಿಲಿಯನ್ ಜನರಿರುವ ದ್ವೀಪ ರಾಷ್ಟ್ರವು ತೀವ್ರವಾದ ವಿದೇಶಿ ವಿನಿಮಯದ ಕೊರತೆಯಿಂದ ಬಿಕ್ಕಟ್ಟು ಎದುರಿಸುತ್ತಿದೆ. ಇಂಧನ, ಆಹಾರ ಮತ್ತು ಔಷಧಿಗಳ ಅಗತ್ಯ ಆಮದನ್ನಷ್ಟೇ ಮಾಡಿಕೊಳ್ಳುತ್ತಿದೆ. ಏಳು ದಶಕಗಳಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಪ್ರಕ್ಷುಬ್ಧತೆಯಲ್ಲಿ ಶ್ರೀಲಂಕಾ ಮುಳುಗಿದೆ.

ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರೇ ದೇಶದ ಅವನತಿಗೆ ಕಾರಣ ಎಂದು ಹಲವರು ದೂರುತ್ತಿದ್ದಾರೆ. ಮಾರ್ಚ್‌ನಲ್ಲಿ ಆರಂಭವಾದ ಶಾಂತಿಯುತ ಪ್ರತಿಭಟನೆಗಳು ಈಗ ತೀವ್ರ ಸ್ವರೂಪ ಪಡೆದಿವೆ.

ನಗದು ಕೊರತೆಯಿಂದಾಗಿ ಇಂಧನ ಸಾಗಣೆಯನ್ನು ಪಡೆಯುವುದನ್ನು ನಿಲ್ಲಿಸಿದ್ದರಿಂದ ಇತ್ತೀಚಿನ ವಾರಗಳಲ್ಲಿ ಅಸಮಾಧಾನವು ತೀವ್ರವಾಗಿದೆ. ಅಗತ್ಯ ಸೇವೆಗಳಿಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಪಡಿತರಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈಗಿನ ಸರ್ಕಾರಕ್ಕೆ ಒಂದು ವಿನಂತಿ ದಯವಿಟ್ಟು ಭಾರತೀಯರಿಗೂ ಇಂತಹ ಅವಕಾಶ ಮಾಡಿಕೊಡಬೇಡಿ ಹಾಗೇನಾದ್ರೂ ಆದರೆ ನಿಮಗೆ ಗಂಡಾಂತರ ಎಚ್ಚರಿಕೆ ಅಂತನೂ ಪರಿಗಣಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...