Homeಮುಖಪುಟಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

ಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

- Advertisement -
- Advertisement -

ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧ ಪ್ರತಿಭಟನೆ ತೀವ್ರವಾಗಿದ್ದು, ಮುಂದಿನ ಬುಧವಾರ ಅಧ್ಯಕ್ಷ ರಾಜೀನಾಮೆ ನೀಡಲಿದ್ದಾರೆ. ಸಂಸತ್ತು ನೂತನ ನಾಯಕನನ್ನು ಆಯ್ಕೆ ಮಾಡಿಕೊಳ್ಳುವವರೆಗೆ, ಅಂದರೆ 30 ದಿನಗಳವರೆಗೆ ಸ್ಪೀಕರ್‌‌ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಕೊಲಂಬೊದಲ್ಲಿರುವ ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಪ್ರತಿಭಟನಾಕಾರರು ಇಂದು ಬೆಂಕಿ ಹಚ್ಚಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ‘ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದಾರೆ’ ಎಂದು ಲಂಕಾ ಪ್ರಧಾನಿ ಕಚೇರಿ ಹೇಳಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರೂ, ಅವರು ಪ್ರಧಾನಿ ಗೃಹ ಪ್ರವೇಶಿಸಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿಯವರ ವಾಹನಗಳಿಗೆ ಹಾನಿ ಮಾಡುತ್ತಿರುವುದು ಕಂಡುಬಂದಿದೆ.

ಮೇ ತಿಂಗಳಲ್ಲಿ ಪ್ರಧಾನ ಮಂತ್ರಿಯಾಗಿ ನೇಮಕಗೊಂಡ ವಿಕ್ರಮಸಿಂಘೆ, “ಸರ್ಕಾರದ ಮುಂದುವರಿಕೆ ಮತ್ತು ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ” ಎಂದು ಘೋಷಿಸಿದ್ದಾರೆ.

“ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಇಂದು ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ಸ್ವೀಕರಿಸುತ್ತೇನೆ. ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮಾಜಿ ಕ್ರಿಕೆಟಿಗರಾದ ಸನತ್ ಜಯಸೂರ್ಯ ಮತ್ತು ಮಹೇಲಾ ಜಯವರ್ಧನಾ ಅವರು ಹಿಂಸಾಚಾರವನ್ನು ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮನವಿ ಮಾಡಿದ್ದಾರೆ.

ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಮೊದಲು ರಾಜಪಕ್ಷೆ ಪಲಾಯನ ಮಾಡಿದ್ದರು. ಇದರ ನಡುವೆ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಹೊರಹೊಮ್ಮಿದವು. ಸೂಟ್‌ಕೇಸ್‌ಗಳು ಅಧ್ಯಕ್ಷ ರಾಜಪಕ್ಸೆ ಅವರದ್ದು ಎಂದು ಸ್ಥಳೀಯ ಮಾಧ್ಯಮಗಳು ಹೇಳಿಕೊಂಡಿವೆ.

ಅಧ್ಯಕ್ಷೀಯ ಭವನದ ಗೇಟ್‌ ಮುರಿದು ಒಳ ನಡೆದ ಪ್ರತಿಭಟನಾಕಾರರು, ಈಜುಕೊಳದಲ್ಲಿ ಈಜಾಡಿದ್ದರು. ಕಿಚನ್‌ನಲ್ಲಿರುವ ಊಟವನ್ನು ಸವಿದಿದ್ದರು.

ಇದನ್ನೂ ಓದಿರಿ: ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

22 ಮಿಲಿಯನ್ ಜನರಿರುವ ದ್ವೀಪ ರಾಷ್ಟ್ರವು ತೀವ್ರವಾದ ವಿದೇಶಿ ವಿನಿಮಯದ ಕೊರತೆಯಿಂದ ಬಿಕ್ಕಟ್ಟು ಎದುರಿಸುತ್ತಿದೆ. ಇಂಧನ, ಆಹಾರ ಮತ್ತು ಔಷಧಿಗಳ ಅಗತ್ಯ ಆಮದನ್ನಷ್ಟೇ ಮಾಡಿಕೊಳ್ಳುತ್ತಿದೆ. ಏಳು ದಶಕಗಳಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಪ್ರಕ್ಷುಬ್ಧತೆಯಲ್ಲಿ ಶ್ರೀಲಂಕಾ ಮುಳುಗಿದೆ.

ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರೇ ದೇಶದ ಅವನತಿಗೆ ಕಾರಣ ಎಂದು ಹಲವರು ದೂರುತ್ತಿದ್ದಾರೆ. ಮಾರ್ಚ್‌ನಲ್ಲಿ ಆರಂಭವಾದ ಶಾಂತಿಯುತ ಪ್ರತಿಭಟನೆಗಳು ಈಗ ತೀವ್ರ ಸ್ವರೂಪ ಪಡೆದಿವೆ.

ನಗದು ಕೊರತೆಯಿಂದಾಗಿ ಇಂಧನ ಸಾಗಣೆಯನ್ನು ಪಡೆಯುವುದನ್ನು ನಿಲ್ಲಿಸಿದ್ದರಿಂದ ಇತ್ತೀಚಿನ ವಾರಗಳಲ್ಲಿ ಅಸಮಾಧಾನವು ತೀವ್ರವಾಗಿದೆ. ಅಗತ್ಯ ಸೇವೆಗಳಿಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಪಡಿತರಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈಗಿನ ಸರ್ಕಾರಕ್ಕೆ ಒಂದು ವಿನಂತಿ ದಯವಿಟ್ಟು ಭಾರತೀಯರಿಗೂ ಇಂತಹ ಅವಕಾಶ ಮಾಡಿಕೊಡಬೇಡಿ ಹಾಗೇನಾದ್ರೂ ಆದರೆ ನಿಮಗೆ ಗಂಡಾಂತರ ಎಚ್ಚರಿಕೆ ಅಂತನೂ ಪರಿಗಣಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...