Homeಮುಖಪುಟಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

ಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

- Advertisement -
- Advertisement -

ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧ ಪ್ರತಿಭಟನೆ ತೀವ್ರವಾಗಿದ್ದು, ಮುಂದಿನ ಬುಧವಾರ ಅಧ್ಯಕ್ಷ ರಾಜೀನಾಮೆ ನೀಡಲಿದ್ದಾರೆ. ಸಂಸತ್ತು ನೂತನ ನಾಯಕನನ್ನು ಆಯ್ಕೆ ಮಾಡಿಕೊಳ್ಳುವವರೆಗೆ, ಅಂದರೆ 30 ದಿನಗಳವರೆಗೆ ಸ್ಪೀಕರ್‌‌ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಕೊಲಂಬೊದಲ್ಲಿರುವ ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಪ್ರತಿಭಟನಾಕಾರರು ಇಂದು ಬೆಂಕಿ ಹಚ್ಚಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ‘ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದಾರೆ’ ಎಂದು ಲಂಕಾ ಪ್ರಧಾನಿ ಕಚೇರಿ ಹೇಳಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರೂ, ಅವರು ಪ್ರಧಾನಿ ಗೃಹ ಪ್ರವೇಶಿಸಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿಯವರ ವಾಹನಗಳಿಗೆ ಹಾನಿ ಮಾಡುತ್ತಿರುವುದು ಕಂಡುಬಂದಿದೆ.

ಮೇ ತಿಂಗಳಲ್ಲಿ ಪ್ರಧಾನ ಮಂತ್ರಿಯಾಗಿ ನೇಮಕಗೊಂಡ ವಿಕ್ರಮಸಿಂಘೆ, “ಸರ್ಕಾರದ ಮುಂದುವರಿಕೆ ಮತ್ತು ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ” ಎಂದು ಘೋಷಿಸಿದ್ದಾರೆ.

“ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಇಂದು ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ಸ್ವೀಕರಿಸುತ್ತೇನೆ. ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮಾಜಿ ಕ್ರಿಕೆಟಿಗರಾದ ಸನತ್ ಜಯಸೂರ್ಯ ಮತ್ತು ಮಹೇಲಾ ಜಯವರ್ಧನಾ ಅವರು ಹಿಂಸಾಚಾರವನ್ನು ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮನವಿ ಮಾಡಿದ್ದಾರೆ.

ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಮೊದಲು ರಾಜಪಕ್ಷೆ ಪಲಾಯನ ಮಾಡಿದ್ದರು. ಇದರ ನಡುವೆ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಹೊರಹೊಮ್ಮಿದವು. ಸೂಟ್‌ಕೇಸ್‌ಗಳು ಅಧ್ಯಕ್ಷ ರಾಜಪಕ್ಸೆ ಅವರದ್ದು ಎಂದು ಸ್ಥಳೀಯ ಮಾಧ್ಯಮಗಳು ಹೇಳಿಕೊಂಡಿವೆ.

ಅಧ್ಯಕ್ಷೀಯ ಭವನದ ಗೇಟ್‌ ಮುರಿದು ಒಳ ನಡೆದ ಪ್ರತಿಭಟನಾಕಾರರು, ಈಜುಕೊಳದಲ್ಲಿ ಈಜಾಡಿದ್ದರು. ಕಿಚನ್‌ನಲ್ಲಿರುವ ಊಟವನ್ನು ಸವಿದಿದ್ದರು.

ಇದನ್ನೂ ಓದಿರಿ: ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

22 ಮಿಲಿಯನ್ ಜನರಿರುವ ದ್ವೀಪ ರಾಷ್ಟ್ರವು ತೀವ್ರವಾದ ವಿದೇಶಿ ವಿನಿಮಯದ ಕೊರತೆಯಿಂದ ಬಿಕ್ಕಟ್ಟು ಎದುರಿಸುತ್ತಿದೆ. ಇಂಧನ, ಆಹಾರ ಮತ್ತು ಔಷಧಿಗಳ ಅಗತ್ಯ ಆಮದನ್ನಷ್ಟೇ ಮಾಡಿಕೊಳ್ಳುತ್ತಿದೆ. ಏಳು ದಶಕಗಳಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಪ್ರಕ್ಷುಬ್ಧತೆಯಲ್ಲಿ ಶ್ರೀಲಂಕಾ ಮುಳುಗಿದೆ.

ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರೇ ದೇಶದ ಅವನತಿಗೆ ಕಾರಣ ಎಂದು ಹಲವರು ದೂರುತ್ತಿದ್ದಾರೆ. ಮಾರ್ಚ್‌ನಲ್ಲಿ ಆರಂಭವಾದ ಶಾಂತಿಯುತ ಪ್ರತಿಭಟನೆಗಳು ಈಗ ತೀವ್ರ ಸ್ವರೂಪ ಪಡೆದಿವೆ.

ನಗದು ಕೊರತೆಯಿಂದಾಗಿ ಇಂಧನ ಸಾಗಣೆಯನ್ನು ಪಡೆಯುವುದನ್ನು ನಿಲ್ಲಿಸಿದ್ದರಿಂದ ಇತ್ತೀಚಿನ ವಾರಗಳಲ್ಲಿ ಅಸಮಾಧಾನವು ತೀವ್ರವಾಗಿದೆ. ಅಗತ್ಯ ಸೇವೆಗಳಿಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಪಡಿತರಗೊಳಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಈಗಿನ ಸರ್ಕಾರಕ್ಕೆ ಒಂದು ವಿನಂತಿ ದಯವಿಟ್ಟು ಭಾರತೀಯರಿಗೂ ಇಂತಹ ಅವಕಾಶ ಮಾಡಿಕೊಡಬೇಡಿ ಹಾಗೇನಾದ್ರೂ ಆದರೆ ನಿಮಗೆ ಗಂಡಾಂತರ ಎಚ್ಚರಿಕೆ ಅಂತನೂ ಪರಿಗಣಿಸಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...