Homeಮುಖಪುಟಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

ಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

- Advertisement -
- Advertisement -

ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧ ಪ್ರತಿಭಟನೆ ತೀವ್ರವಾಗಿದ್ದು, ಮುಂದಿನ ಬುಧವಾರ ಅಧ್ಯಕ್ಷ ರಾಜೀನಾಮೆ ನೀಡಲಿದ್ದಾರೆ. ಸಂಸತ್ತು ನೂತನ ನಾಯಕನನ್ನು ಆಯ್ಕೆ ಮಾಡಿಕೊಳ್ಳುವವರೆಗೆ, ಅಂದರೆ 30 ದಿನಗಳವರೆಗೆ ಸ್ಪೀಕರ್‌‌ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಕೊಲಂಬೊದಲ್ಲಿರುವ ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಪ್ರತಿಭಟನಾಕಾರರು ಇಂದು ಬೆಂಕಿ ಹಚ್ಚಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ‘ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದಾರೆ’ ಎಂದು ಲಂಕಾ ಪ್ರಧಾನಿ ಕಚೇರಿ ಹೇಳಿಕೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರೂ, ಅವರು ಪ್ರಧಾನಿ ಗೃಹ ಪ್ರವೇಶಿಸಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿಯವರ ವಾಹನಗಳಿಗೆ ಹಾನಿ ಮಾಡುತ್ತಿರುವುದು ಕಂಡುಬಂದಿದೆ.

ಮೇ ತಿಂಗಳಲ್ಲಿ ಪ್ರಧಾನ ಮಂತ್ರಿಯಾಗಿ ನೇಮಕಗೊಂಡ ವಿಕ್ರಮಸಿಂಘೆ, “ಸರ್ಕಾರದ ಮುಂದುವರಿಕೆ ಮತ್ತು ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ” ಎಂದು ಘೋಷಿಸಿದ್ದಾರೆ.

“ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಇಂದು ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ಸ್ವೀಕರಿಸುತ್ತೇನೆ. ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮಾಜಿ ಕ್ರಿಕೆಟಿಗರಾದ ಸನತ್ ಜಯಸೂರ್ಯ ಮತ್ತು ಮಹೇಲಾ ಜಯವರ್ಧನಾ ಅವರು ಹಿಂಸಾಚಾರವನ್ನು ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮನವಿ ಮಾಡಿದ್ದಾರೆ.

ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಮೊದಲು ರಾಜಪಕ್ಷೆ ಪಲಾಯನ ಮಾಡಿದ್ದರು. ಇದರ ನಡುವೆ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಹೊರಹೊಮ್ಮಿದವು. ಸೂಟ್‌ಕೇಸ್‌ಗಳು ಅಧ್ಯಕ್ಷ ರಾಜಪಕ್ಸೆ ಅವರದ್ದು ಎಂದು ಸ್ಥಳೀಯ ಮಾಧ್ಯಮಗಳು ಹೇಳಿಕೊಂಡಿವೆ.

ಅಧ್ಯಕ್ಷೀಯ ಭವನದ ಗೇಟ್‌ ಮುರಿದು ಒಳ ನಡೆದ ಪ್ರತಿಭಟನಾಕಾರರು, ಈಜುಕೊಳದಲ್ಲಿ ಈಜಾಡಿದ್ದರು. ಕಿಚನ್‌ನಲ್ಲಿರುವ ಊಟವನ್ನು ಸವಿದಿದ್ದರು.

ಇದನ್ನೂ ಓದಿರಿ: ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

22 ಮಿಲಿಯನ್ ಜನರಿರುವ ದ್ವೀಪ ರಾಷ್ಟ್ರವು ತೀವ್ರವಾದ ವಿದೇಶಿ ವಿನಿಮಯದ ಕೊರತೆಯಿಂದ ಬಿಕ್ಕಟ್ಟು ಎದುರಿಸುತ್ತಿದೆ. ಇಂಧನ, ಆಹಾರ ಮತ್ತು ಔಷಧಿಗಳ ಅಗತ್ಯ ಆಮದನ್ನಷ್ಟೇ ಮಾಡಿಕೊಳ್ಳುತ್ತಿದೆ. ಏಳು ದಶಕಗಳಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಪ್ರಕ್ಷುಬ್ಧತೆಯಲ್ಲಿ ಶ್ರೀಲಂಕಾ ಮುಳುಗಿದೆ.

ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರೇ ದೇಶದ ಅವನತಿಗೆ ಕಾರಣ ಎಂದು ಹಲವರು ದೂರುತ್ತಿದ್ದಾರೆ. ಮಾರ್ಚ್‌ನಲ್ಲಿ ಆರಂಭವಾದ ಶಾಂತಿಯುತ ಪ್ರತಿಭಟನೆಗಳು ಈಗ ತೀವ್ರ ಸ್ವರೂಪ ಪಡೆದಿವೆ.

ನಗದು ಕೊರತೆಯಿಂದಾಗಿ ಇಂಧನ ಸಾಗಣೆಯನ್ನು ಪಡೆಯುವುದನ್ನು ನಿಲ್ಲಿಸಿದ್ದರಿಂದ ಇತ್ತೀಚಿನ ವಾರಗಳಲ್ಲಿ ಅಸಮಾಧಾನವು ತೀವ್ರವಾಗಿದೆ. ಅಗತ್ಯ ಸೇವೆಗಳಿಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಪಡಿತರಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈಗಿನ ಸರ್ಕಾರಕ್ಕೆ ಒಂದು ವಿನಂತಿ ದಯವಿಟ್ಟು ಭಾರತೀಯರಿಗೂ ಇಂತಹ ಅವಕಾಶ ಮಾಡಿಕೊಡಬೇಡಿ ಹಾಗೇನಾದ್ರೂ ಆದರೆ ನಿಮಗೆ ಗಂಡಾಂತರ ಎಚ್ಚರಿಕೆ ಅಂತನೂ ಪರಿಗಣಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...