Homeಮುಖಪುಟಶ್ರೀಲಂಕಾ ಬಂಧಿಸಿರುವ ಮೀನುಗಾರರ ಬಿಡುಗಡೆಗೆ ಆಗ್ರಹ; ವಿದೇಶಾಂಗ ಸಚಿವರಿಗೆ ಎಂಕೆ ಸ್ಟಾಲಿನ್ ಪತ್ರ

ಶ್ರೀಲಂಕಾ ಬಂಧಿಸಿರುವ ಮೀನುಗಾರರ ಬಿಡುಗಡೆಗೆ ಆಗ್ರಹ; ವಿದೇಶಾಂಗ ಸಚಿವರಿಗೆ ಎಂಕೆ ಸ್ಟಾಲಿನ್ ಪತ್ರ

- Advertisement -
- Advertisement -

ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿರುವ ಮೀನುಗಾರರನ್ನು ಬಿಡುಗಡೆಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪತ್ರ ಬರೆದಿದ್ದಾರೆ.

ಪದೇಪದೆ ಇಂಥ ಬಂಧನಗಳು ಆತಂಕಕಾರಿ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ದೋಣಿಗಳನ್ನು ಬಿಡುಗಡೆ ಮಾಡುವಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಮೀನುಗಾರರಿಗೆ ವಿಧಿಸಲಾದ ದಂಡವನ್ನು ತಪ್ಪಿಸುವಂತೆ ಜೈಶಂಕರ್ ಅವರನ್ನು ವಿನಂತಿಸಿದರು.

“ಸೆಪ್ಟೆಂಬರ್ 7 ರಂದು, ಶ್ರೀಲಂಕಾ ನೌಕಾಪಡೆಯು ನಮ್ಮ ಮೂರು ಯಾಂತ್ರೀಕೃತ ಮೀನುಗಾರಿಕೆ ದೋಣಿಗಳೊಂದಿಗೆ ಪುದುಕೊಟ್ಟೈನಿಂದ ಬರೋಬ್ಬರಿ 14 ಮೀನುಗಾರರನ್ನು ವಶಕ್ಕೆ ತೆಗೆದುಕೊಂಡಿತು. 2024 ರಲ್ಲಿ 350 ಮೀನುಗಾರರು ಮತ್ತು 49 ಮೀನುಗಾರಿಕಾ ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ, ಇದು ಕಳೆದ ಆರು ವರ್ಷಗಳಲ್ಲಿ ಅತಿ ಹೆಚ್ಚು. ಶ್ರೀಲಂಕಾ ನ್ಯಾಯಾಲಯಗಳು ನಮ್ಮ ಮೀನುಗಾರರಿಗೆ ಸಾಮರ್ಥ್ಯ ಮೀರಿದ ಭಾರಿ ದಂಡವನ್ನು ವಿಧಿಸುತ್ತಿವೆ” ಎಂದು ಮುಖ್ಯಮಂತ್ರಿ ಹೇಳಿದರು.

ಅಂತಹ ಬಂಧನಗಳು ದೀರ್ಘಾವಧಿಯ ಸೆರೆವಾಸಕ್ಕೆ ಕಾರಣವಾಗುತ್ತವೆ ಮತ್ತು ಅವರ ಕುಟುಂಬಗಳಿಗೆ ಸಂಕಟವನ್ನು ಉಂಟುಮಾಡುತ್ತವೆ ಎಂದು ಅವರು ಹೇಳಿದ್ದಾರೆ.

ಶ್ರೀಲಂಕಾ ಅಧಿಕಾರಿಗಳ ವಶದಲ್ಲಿರುವ ಎಲ್ಲ ಮೀನುಗಾರರು ಮತ್ತು ದೋಣಿಗಳನ್ನು ಬಿಡುಗಡೆ ಮಾಡಲು ತಕ್ಷಣ ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡುವಂತೆ ಜೈಶಂಕರ್ ಅವರನ್ನು ಸ್ಟಾಲಿನ್ ಒತ್ತಾಯಿಸಿದರು. ಯಾವುದೇ ವಿಳಂಬವಿಲ್ಲದೆ ಅವರ ಜಂಟಿ ಕಾರ್ಯ ಸಮೂಹವನ್ನು ಪುನರುಜ್ಜೀವನಗೊಳಿಸುವ ಕ್ರಮಗಳನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ನಡುವೆ, ಆಗಸ್ಟ್ 5 ರಂದು 12 ಮೀನುಗಾರರನ್ನು ಬಂಧಿಸಿದ ನಂತರ ತರುವೈಕುಲಂನಲ್ಲಿ ಮೀನುಗಾರರ ಕುಟುಂಬಗಳು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಕಾನೂನು ಪ್ರಕ್ರಿಯೆ ಅನುಸರಿಸಿ, 12 ಮೀನುಗಾರರಿಗೆ 42 ಲಕ್ಷ ರೂಪಾಯಿ ದಂಡ ಅಥವಾ ಆರು ತಿಂಗಳು ಜೈಲು ಶಿಕ್ಷೆ ವಿಧಿಸಲು ಆದೇಶಿಸಲಾಗಿದೆ.

“ಕಳೆದ 35 ದಿನಗಳಿಂದ ಅವರ ಸ್ಥಿತಿಯ ಬಗ್ಗೆ ನಮಗೆ ತಿಳಿದಿಲ್ಲ. ತಲಾ 42 ಲಕ್ಷ ಜಾಮೀನು ಮೊತ್ತವನ್ನು ವಿಧಿಸಿರುವುದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ನಾವು ಅಷ್ಟೊಂದು ಶ್ರೀಮಂತರಲ್ಲ, ಹಲವು ಮನವಿಗಳನ್ನು ನೀಡಿದರೂ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರೂ ಪರಿಹಾರ ಸಿಗದ ಕಾರಣ ಉಪವಾಸ ಸತ್ಯಾಗ್ರಹ ಆರಂಭಿಸಿದ್ದೇವೆ” ಎಂದು ಬಂಧಿತ ಮೀನುಗಾರರಲ್ಲಿ ಒಬ್ಬರಾದ ಅಂಥೋಣಿ ರಾಜ್ ಅವರ ಪತ್ನಿ ಝಾನ್ಸಿ ರಾಣಿ ಹೇಳಿದ್ದಾರೆ. “ಯಾವುದೇ ದಂಡವಿಲ್ಲದೆ ಮೀನುಗಾರರನ್ನು ಮರಳಿ ಕರೆತರುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಅವರು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ; ಯಡಿಯೂರಪ್ಪ, ಪ್ರಜ್ವಲ್ ರೇವಣ್ಣ, ರಮೇಶ್ ಜಾರಕಿಹೊಳಿ ಪ್ರಕರಣಗಳ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...