Homeಮುಖಪುಟಕಿಕ್ಕಿರಿದು ತುಂಬಿದ ಶ್ರೀಲಂಕಾದ ಜೈಲುಗಳು: ಕ್ರಿಸ್ಮಸ್ ಪ್ರಯುಕ್ತ 1 ಸಾವಿರ ಖೈದಿಗಳಿಗೆ ಕ್ಷಮಾದಾನ

ಕಿಕ್ಕಿರಿದು ತುಂಬಿದ ಶ್ರೀಲಂಕಾದ ಜೈಲುಗಳು: ಕ್ರಿಸ್ಮಸ್ ಪ್ರಯುಕ್ತ 1 ಸಾವಿರ ಖೈದಿಗಳಿಗೆ ಕ್ಷಮಾದಾನ

- Advertisement -
- Advertisement -

ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಕ್ರಿಸ್ಮಸ್ ಪ್ರಯುಕ್ತ ದೇಶದಾದ್ಯಂತ ಜೈಲುಗಳಲ್ಲಿದ್ದ ಒಂದು ಸಾವಿರಕ್ಕೂ ಅಧಿಕ ಖೈದಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡಿಸಿದ್ದಾರೆ ಎಂದು ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಅಲ್‌-ಜಝೀರಾ ವರದಿ ಮಾಡಿದೆ.

ಕ್ರಿಸ್ಮಸ್‌ ದಿನವಾದ ಇಂದು (ಡಿ.25) 1,004 ಜನರನ್ನು ದೇಶದ ವಿವಿಧ ಜೈಲುಗಳಿಂದ ಬಿಡುಗಡೆ ಮಾಡಲಾಗಿದೆ. ಇವರೆಲ್ಲ ಶಿಕ್ಷೆ ಅವಧಿ ಮುಗಿದರೂ ದಂಡ ಪಾವತಿಸಲಾಗದೆ ಜೈಲಿನಲ್ಲೇ ಉಳಿದಿದ್ದರು ಎಂದು ಜೈಲು ಆಯುಕ್ತ ಗಾಮಿನಿ ಡಿಸಾನಾಯಕೆ ತಿಳಿಸಿದ್ದಾರೆ.

ಶ್ರೀಲಂಕವು ಬೌದ್ಧ ಬಹುಸಂಖ್ಯಾತ ರಾಷ್ಟ್ರವಾಗಿದೆ. ಬುದ್ಧನ ಜನನ, ಜ್ಞಾನೋದಯ ಮತ್ತು ಮರಣವನ್ನು ಆಚರಿಸುವ ವೆಸಕ್ ದಿನದ ಪ್ರಯುಕ್ತ ಕಳೆದ ಮೇ ತಿಂಗಳಲ್ಲಿ ಇದೇ ರೀತಿ ಹಲವು ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.

ಕ್ರಿಸ್‌ಮಸ್ ಮುನ್ನಾದಿನದಂದು ಕೊನೆಗೊಂಡ ಒಂದು ವಾರದ ಮಿಲಿಟರಿ-ಬೆಂಬಲಿತ ಮಾದಕ ದ್ರವ್ಯ-ವಿರೋಧಿ ಡ್ರೈವ್‌ನಲ್ಲಿ ಪೊಲೀಸರು ಸುಮಾರು 15,000ದಷ್ಟು ಜನರನ್ನು ಬಂಧಿಸಿದ ಬೆನ್ನಲ್ಲೇ ಖೈದಿಗಳಿಗೆ ಕ್ಷಮಾದಾನ ನೀಡಲಾಗಿದೆ.

ಮಾದಕ ದ್ರವ್ಯ-ವಿರೋಧಿ ಡ್ರೈವ್‌ನಲ್ಲಿ 13,666 ಶಂಕಿತರನ್ನು ಬಂಧಿಸಲಾಗಿದ್ದು, ಈ ಪೈಕಿ ಸುಮಾರು 1,100 ಖಚಿತ ಮಾದಕ ವ್ಯಸನಿಗಳನ್ನು ಮಿಲಿಟರಿ ನಡೆಸುವ ಕಡ್ಡಾಯ ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ಮಾದಕ ದ್ರವ್ಯ-ವಿರೋಧಿ ಡ್ರೈವ್‌ನ ಬಳಿಕ ದ್ವೀಪ ರಾಷ್ಟ್ರದ ಜೈಲುಗಳು ಕಿಕ್ಕಿರಿದು ತುಂಬಿವೆ. ಹಾಗಾಗಿ ಕ್ರಿಸ್ಮಸ್ ನೆಪದಲ್ಲಿ ಶಿಕ್ಷೆ ಪೂರ್ತಿಗೊಳಿಸಿದ ಖೈದಿಗಳಿಗೆ ಕ್ಷಮಾದಾನ ನೀಡಲಾಗಿದೆ.

ಕಳೆದ ಶುಕ್ರವಾರದ ಹೊತ್ತಿಗೆ, ಸುಮಾರು 11 ಸಾವಿರ ಖೈದಿಗಳನ್ನು ಇಡಲು ಸಾಮರ್ಥ್ಯವಿರು ಶ್ರೀಲಾಂಕದ ಒಟ್ಟು ಜೈಲು ವ್ಯವಸ್ಥೆಯಲ್ಲಿ 30 ಸಾವಿರಕ್ಕೂ ಅಧಿಕ ಖೈದಿಗಳು ತುಂಬಿದ್ದರು. ಇದು ಸರ್ಕಾರಕ್ಕೆ ತಲೆ ನೋವಾಗಿ ಮಾರ್ಪಟ್ಟಿತ್ತು ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...