Homeಮುಖಪುಟಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

- Advertisement -
- Advertisement -

ಲಂಚ, ವಂಚನೆ ಪ್ರಕರಣದಲ್ಲಿ ಗೌತಮ್ ಅದಾನಿ ವಿರುದ್ದ ಅಮೆರಿಕ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದ ಬೆನ್ನಲ್ಲೇ, ತನ್ನ ನೆಲದಲ್ಲಿ ಅದಾನಿ ಸಂಸ್ಥೆ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರ ಹೊಸ ಸರ್ಕಾರದ ಮೊದಲ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರದ ವಕ್ತಾರ ನಳಿಂದಾ ಜಯತಿಸ್ಸಾ, “ಭಾರತ ಮೂಲದ ಅದಾನಿ ನಿರ್ಮಾಣ ಸಂಸ್ಥೆಯು ಶ್ರೀಲಂಕಾದಲ್ಲಿ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಹಣಕಾಸು ಹಾಗೂ ವಿದೇಶಾಂಗ ಸಚಿವರು ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು” ಎಂದಿದ್ದಾರೆ.

“ಅದಾನಿ ಹೂಡಿಕೆ ಕುರಿತು ಎರಡು ತನಿಖೆಗಳು ನಡೆಯಲಿವೆ. ಇವುಗಳು ನೀಡುವ ವರದಿಯನ್ನು ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ” ಎಂದು ಜಯತಿಸ್ಸಾ ಹೇಳಿದ್ದಾಗಿ ವರದಿಯಾಗಿದೆ.

ದಿಸ್ಸನಾಯಕೆ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ, ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ, ಶ್ರೀಲಂಕಾದಿಂದ ದೋಚಿ ವಿದೇಶದಲ್ಲಿ ಬಚ್ಚಿಟ್ಟಿರುವ ದೇಶದ ಆಸ್ತಿಗಳನ್ನು ಮರಳಿ ತರಲಾಗುವುದು ಎಂದು ಭರವಸೆ ನೀಡಿದ್ದರು.

ಪವನ ವಿದ್ಯುತ್ ಯೋಜನೆಗಾಗಿ ಅದಾನಿ ಸಮೂಹವು ದ್ವೀಪರಾಷ್ಟ್ರವಾದ ಶ್ರೀಲಂಕಾದಲ್ಲಿ 44.2 ಕೋಟಿ ಅಮೆರಿಕನ್ ಡಾಲರ್‌ನಷ್ಟು ಹೂಡಿಕೆ ಮಾಡಿದೆ. ಆದರೆ, ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಯೋಜನೆ ಕೈಗೊಳ್ಳದಂತೆ ನ್ಯಾಯಾಲಯ ತಡೆ ನೀಡಿದೆ.

ಮತ್ತೊಂದೆಡೆ ಕೊಲೊಂಬೊದಲ್ಲಿ ಸಮುದ್ರದಾಳದ ಬಂದರು ಟರ್ಮಿನಲ್ ನಿರ್ಮಾಣಕ್ಕಾಗಿ ಅದಾನಿ ಕಂಪನಿಗೆ ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಹಣಕಾಸು ನಿಗಮವು 55.3 ಕೋಟಿ ಅಮೆರಿಕನ್ ಡಾಲರ್‌ ಆರ್ಥಿಕ ನೆರವು ನೀಡಿತ್ತು.

ದಿಸ್ಸನಾಯಕೆ ಅವರ ನ್ಯಾಷನಲ್ ಪೀಪಲ್ಸ್ ಆಡಳಿತವು ತಮ್ಮ ಅನುಮೋದನೆಯಲ್ಲಿ ಭ್ರಷ್ಟಾಚಾರವನ್ನು ಒಳಗೊಂಡಿರುವ ಯಾವುದೇ ವಿದೇಶಿ ಹೂಡಿಕೆ ಯೋಜನೆಗಳಿದ್ದರೆ ರದ್ದುಗೊಳಿಸುವುದಾಗಿ ಹೇಳಿದೆ.

ಅಮೆರಿಕದಲ್ಲಿ ಅದಾನಿ ಸಮೂಹದ ವಿರುದ್ಧ ನಡೆಯುತ್ತಿರುವ ವಿಚಾರಣೆ ನಂತರ, ನೈರೋಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಒಳಗೊಂಡಂತೆ ಕೀನ್ಯಾದಲ್ಲಿ ಅದಾನಿ ಸಮೂಹ ಕೈಗೊಂಡಿರುವ 2.5 ಶತಕೋಟಿ ಅಮೆರಿಕನ್ ಡಾಲರ್‌ ಹೂಡಿಕೆಯನ್ನು ಅಲ್ಲಿನ ಸರ್ಕಾರ ರದ್ದುಪಡಿಸಿದೆ.

ಪ್ರೆಂಚ್ ಮೂಲದ ಟೋಟಲ್ ಎನರ್ಜಿ ಅದಾನಿ ಸಮೂಹದ ಹೂಡಿಕೆಗಳನ್ನು ತಾತ್ಕಾಲಿಕ ಸ್ಥಗಿತ ಮಾಡಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಆಂಧ್ರ ಸರ್ಕಾರ ಕೂಡ ಅದಾನಿ ಜೊತೆಗಿನ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಯೋಚಿಸುತ್ತಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...