Homeಮುಖಪುಟಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

- Advertisement -
- Advertisement -

ಲಂಚ, ವಂಚನೆ ಪ್ರಕರಣದಲ್ಲಿ ಗೌತಮ್ ಅದಾನಿ ವಿರುದ್ದ ಅಮೆರಿಕ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದ ಬೆನ್ನಲ್ಲೇ, ತನ್ನ ನೆಲದಲ್ಲಿ ಅದಾನಿ ಸಂಸ್ಥೆ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರ ಹೊಸ ಸರ್ಕಾರದ ಮೊದಲ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರದ ವಕ್ತಾರ ನಳಿಂದಾ ಜಯತಿಸ್ಸಾ, “ಭಾರತ ಮೂಲದ ಅದಾನಿ ನಿರ್ಮಾಣ ಸಂಸ್ಥೆಯು ಶ್ರೀಲಂಕಾದಲ್ಲಿ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಹಣಕಾಸು ಹಾಗೂ ವಿದೇಶಾಂಗ ಸಚಿವರು ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು” ಎಂದಿದ್ದಾರೆ.

“ಅದಾನಿ ಹೂಡಿಕೆ ಕುರಿತು ಎರಡು ತನಿಖೆಗಳು ನಡೆಯಲಿವೆ. ಇವುಗಳು ನೀಡುವ ವರದಿಯನ್ನು ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ” ಎಂದು ಜಯತಿಸ್ಸಾ ಹೇಳಿದ್ದಾಗಿ ವರದಿಯಾಗಿದೆ.

ದಿಸ್ಸನಾಯಕೆ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ, ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ, ಶ್ರೀಲಂಕಾದಿಂದ ದೋಚಿ ವಿದೇಶದಲ್ಲಿ ಬಚ್ಚಿಟ್ಟಿರುವ ದೇಶದ ಆಸ್ತಿಗಳನ್ನು ಮರಳಿ ತರಲಾಗುವುದು ಎಂದು ಭರವಸೆ ನೀಡಿದ್ದರು.

ಪವನ ವಿದ್ಯುತ್ ಯೋಜನೆಗಾಗಿ ಅದಾನಿ ಸಮೂಹವು ದ್ವೀಪರಾಷ್ಟ್ರವಾದ ಶ್ರೀಲಂಕಾದಲ್ಲಿ 44.2 ಕೋಟಿ ಅಮೆರಿಕನ್ ಡಾಲರ್‌ನಷ್ಟು ಹೂಡಿಕೆ ಮಾಡಿದೆ. ಆದರೆ, ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಯೋಜನೆ ಕೈಗೊಳ್ಳದಂತೆ ನ್ಯಾಯಾಲಯ ತಡೆ ನೀಡಿದೆ.

ಮತ್ತೊಂದೆಡೆ ಕೊಲೊಂಬೊದಲ್ಲಿ ಸಮುದ್ರದಾಳದ ಬಂದರು ಟರ್ಮಿನಲ್ ನಿರ್ಮಾಣಕ್ಕಾಗಿ ಅದಾನಿ ಕಂಪನಿಗೆ ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಹಣಕಾಸು ನಿಗಮವು 55.3 ಕೋಟಿ ಅಮೆರಿಕನ್ ಡಾಲರ್‌ ಆರ್ಥಿಕ ನೆರವು ನೀಡಿತ್ತು.

ದಿಸ್ಸನಾಯಕೆ ಅವರ ನ್ಯಾಷನಲ್ ಪೀಪಲ್ಸ್ ಆಡಳಿತವು ತಮ್ಮ ಅನುಮೋದನೆಯಲ್ಲಿ ಭ್ರಷ್ಟಾಚಾರವನ್ನು ಒಳಗೊಂಡಿರುವ ಯಾವುದೇ ವಿದೇಶಿ ಹೂಡಿಕೆ ಯೋಜನೆಗಳಿದ್ದರೆ ರದ್ದುಗೊಳಿಸುವುದಾಗಿ ಹೇಳಿದೆ.

ಅಮೆರಿಕದಲ್ಲಿ ಅದಾನಿ ಸಮೂಹದ ವಿರುದ್ಧ ನಡೆಯುತ್ತಿರುವ ವಿಚಾರಣೆ ನಂತರ, ನೈರೋಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಒಳಗೊಂಡಂತೆ ಕೀನ್ಯಾದಲ್ಲಿ ಅದಾನಿ ಸಮೂಹ ಕೈಗೊಂಡಿರುವ 2.5 ಶತಕೋಟಿ ಅಮೆರಿಕನ್ ಡಾಲರ್‌ ಹೂಡಿಕೆಯನ್ನು ಅಲ್ಲಿನ ಸರ್ಕಾರ ರದ್ದುಪಡಿಸಿದೆ.

ಪ್ರೆಂಚ್ ಮೂಲದ ಟೋಟಲ್ ಎನರ್ಜಿ ಅದಾನಿ ಸಮೂಹದ ಹೂಡಿಕೆಗಳನ್ನು ತಾತ್ಕಾಲಿಕ ಸ್ಥಗಿತ ಮಾಡಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಆಂಧ್ರ ಸರ್ಕಾರ ಕೂಡ ಅದಾನಿ ಜೊತೆಗಿನ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಯೋಚಿಸುತ್ತಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...