Homeಮುಖಪುಟಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

- Advertisement -
- Advertisement -

ಲಂಚ, ವಂಚನೆ ಪ್ರಕರಣದಲ್ಲಿ ಗೌತಮ್ ಅದಾನಿ ವಿರುದ್ದ ಅಮೆರಿಕ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದ ಬೆನ್ನಲ್ಲೇ, ತನ್ನ ನೆಲದಲ್ಲಿ ಅದಾನಿ ಸಂಸ್ಥೆ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರ ಹೊಸ ಸರ್ಕಾರದ ಮೊದಲ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರದ ವಕ್ತಾರ ನಳಿಂದಾ ಜಯತಿಸ್ಸಾ, “ಭಾರತ ಮೂಲದ ಅದಾನಿ ನಿರ್ಮಾಣ ಸಂಸ್ಥೆಯು ಶ್ರೀಲಂಕಾದಲ್ಲಿ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಹಣಕಾಸು ಹಾಗೂ ವಿದೇಶಾಂಗ ಸಚಿವರು ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು” ಎಂದಿದ್ದಾರೆ.

“ಅದಾನಿ ಹೂಡಿಕೆ ಕುರಿತು ಎರಡು ತನಿಖೆಗಳು ನಡೆಯಲಿವೆ. ಇವುಗಳು ನೀಡುವ ವರದಿಯನ್ನು ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ” ಎಂದು ಜಯತಿಸ್ಸಾ ಹೇಳಿದ್ದಾಗಿ ವರದಿಯಾಗಿದೆ.

ದಿಸ್ಸನಾಯಕೆ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ, ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ, ಶ್ರೀಲಂಕಾದಿಂದ ದೋಚಿ ವಿದೇಶದಲ್ಲಿ ಬಚ್ಚಿಟ್ಟಿರುವ ದೇಶದ ಆಸ್ತಿಗಳನ್ನು ಮರಳಿ ತರಲಾಗುವುದು ಎಂದು ಭರವಸೆ ನೀಡಿದ್ದರು.

ಪವನ ವಿದ್ಯುತ್ ಯೋಜನೆಗಾಗಿ ಅದಾನಿ ಸಮೂಹವು ದ್ವೀಪರಾಷ್ಟ್ರವಾದ ಶ್ರೀಲಂಕಾದಲ್ಲಿ 44.2 ಕೋಟಿ ಅಮೆರಿಕನ್ ಡಾಲರ್‌ನಷ್ಟು ಹೂಡಿಕೆ ಮಾಡಿದೆ. ಆದರೆ, ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಯೋಜನೆ ಕೈಗೊಳ್ಳದಂತೆ ನ್ಯಾಯಾಲಯ ತಡೆ ನೀಡಿದೆ.

ಮತ್ತೊಂದೆಡೆ ಕೊಲೊಂಬೊದಲ್ಲಿ ಸಮುದ್ರದಾಳದ ಬಂದರು ಟರ್ಮಿನಲ್ ನಿರ್ಮಾಣಕ್ಕಾಗಿ ಅದಾನಿ ಕಂಪನಿಗೆ ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಹಣಕಾಸು ನಿಗಮವು 55.3 ಕೋಟಿ ಅಮೆರಿಕನ್ ಡಾಲರ್‌ ಆರ್ಥಿಕ ನೆರವು ನೀಡಿತ್ತು.

ದಿಸ್ಸನಾಯಕೆ ಅವರ ನ್ಯಾಷನಲ್ ಪೀಪಲ್ಸ್ ಆಡಳಿತವು ತಮ್ಮ ಅನುಮೋದನೆಯಲ್ಲಿ ಭ್ರಷ್ಟಾಚಾರವನ್ನು ಒಳಗೊಂಡಿರುವ ಯಾವುದೇ ವಿದೇಶಿ ಹೂಡಿಕೆ ಯೋಜನೆಗಳಿದ್ದರೆ ರದ್ದುಗೊಳಿಸುವುದಾಗಿ ಹೇಳಿದೆ.

ಅಮೆರಿಕದಲ್ಲಿ ಅದಾನಿ ಸಮೂಹದ ವಿರುದ್ಧ ನಡೆಯುತ್ತಿರುವ ವಿಚಾರಣೆ ನಂತರ, ನೈರೋಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಒಳಗೊಂಡಂತೆ ಕೀನ್ಯಾದಲ್ಲಿ ಅದಾನಿ ಸಮೂಹ ಕೈಗೊಂಡಿರುವ 2.5 ಶತಕೋಟಿ ಅಮೆರಿಕನ್ ಡಾಲರ್‌ ಹೂಡಿಕೆಯನ್ನು ಅಲ್ಲಿನ ಸರ್ಕಾರ ರದ್ದುಪಡಿಸಿದೆ.

ಪ್ರೆಂಚ್ ಮೂಲದ ಟೋಟಲ್ ಎನರ್ಜಿ ಅದಾನಿ ಸಮೂಹದ ಹೂಡಿಕೆಗಳನ್ನು ತಾತ್ಕಾಲಿಕ ಸ್ಥಗಿತ ಮಾಡಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಆಂಧ್ರ ಸರ್ಕಾರ ಕೂಡ ಅದಾನಿ ಜೊತೆಗಿನ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಯೋಚಿಸುತ್ತಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...