Homeಮುಖಪುಟಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

- Advertisement -
- Advertisement -

ಲಂಚ, ವಂಚನೆ ಪ್ರಕರಣದಲ್ಲಿ ಗೌತಮ್ ಅದಾನಿ ವಿರುದ್ದ ಅಮೆರಿಕ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದ ಬೆನ್ನಲ್ಲೇ, ತನ್ನ ನೆಲದಲ್ಲಿ ಅದಾನಿ ಸಂಸ್ಥೆ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರ ಹೊಸ ಸರ್ಕಾರದ ಮೊದಲ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರದ ವಕ್ತಾರ ನಳಿಂದಾ ಜಯತಿಸ್ಸಾ, “ಭಾರತ ಮೂಲದ ಅದಾನಿ ನಿರ್ಮಾಣ ಸಂಸ್ಥೆಯು ಶ್ರೀಲಂಕಾದಲ್ಲಿ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಹಣಕಾಸು ಹಾಗೂ ವಿದೇಶಾಂಗ ಸಚಿವರು ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು” ಎಂದಿದ್ದಾರೆ.

“ಅದಾನಿ ಹೂಡಿಕೆ ಕುರಿತು ಎರಡು ತನಿಖೆಗಳು ನಡೆಯಲಿವೆ. ಇವುಗಳು ನೀಡುವ ವರದಿಯನ್ನು ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ” ಎಂದು ಜಯತಿಸ್ಸಾ ಹೇಳಿದ್ದಾಗಿ ವರದಿಯಾಗಿದೆ.

ದಿಸ್ಸನಾಯಕೆ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ, ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ, ಶ್ರೀಲಂಕಾದಿಂದ ದೋಚಿ ವಿದೇಶದಲ್ಲಿ ಬಚ್ಚಿಟ್ಟಿರುವ ದೇಶದ ಆಸ್ತಿಗಳನ್ನು ಮರಳಿ ತರಲಾಗುವುದು ಎಂದು ಭರವಸೆ ನೀಡಿದ್ದರು.

ಪವನ ವಿದ್ಯುತ್ ಯೋಜನೆಗಾಗಿ ಅದಾನಿ ಸಮೂಹವು ದ್ವೀಪರಾಷ್ಟ್ರವಾದ ಶ್ರೀಲಂಕಾದಲ್ಲಿ 44.2 ಕೋಟಿ ಅಮೆರಿಕನ್ ಡಾಲರ್‌ನಷ್ಟು ಹೂಡಿಕೆ ಮಾಡಿದೆ. ಆದರೆ, ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಯೋಜನೆ ಕೈಗೊಳ್ಳದಂತೆ ನ್ಯಾಯಾಲಯ ತಡೆ ನೀಡಿದೆ.

ಮತ್ತೊಂದೆಡೆ ಕೊಲೊಂಬೊದಲ್ಲಿ ಸಮುದ್ರದಾಳದ ಬಂದರು ಟರ್ಮಿನಲ್ ನಿರ್ಮಾಣಕ್ಕಾಗಿ ಅದಾನಿ ಕಂಪನಿಗೆ ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಹಣಕಾಸು ನಿಗಮವು 55.3 ಕೋಟಿ ಅಮೆರಿಕನ್ ಡಾಲರ್‌ ಆರ್ಥಿಕ ನೆರವು ನೀಡಿತ್ತು.

ದಿಸ್ಸನಾಯಕೆ ಅವರ ನ್ಯಾಷನಲ್ ಪೀಪಲ್ಸ್ ಆಡಳಿತವು ತಮ್ಮ ಅನುಮೋದನೆಯಲ್ಲಿ ಭ್ರಷ್ಟಾಚಾರವನ್ನು ಒಳಗೊಂಡಿರುವ ಯಾವುದೇ ವಿದೇಶಿ ಹೂಡಿಕೆ ಯೋಜನೆಗಳಿದ್ದರೆ ರದ್ದುಗೊಳಿಸುವುದಾಗಿ ಹೇಳಿದೆ.

ಅಮೆರಿಕದಲ್ಲಿ ಅದಾನಿ ಸಮೂಹದ ವಿರುದ್ಧ ನಡೆಯುತ್ತಿರುವ ವಿಚಾರಣೆ ನಂತರ, ನೈರೋಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಒಳಗೊಂಡಂತೆ ಕೀನ್ಯಾದಲ್ಲಿ ಅದಾನಿ ಸಮೂಹ ಕೈಗೊಂಡಿರುವ 2.5 ಶತಕೋಟಿ ಅಮೆರಿಕನ್ ಡಾಲರ್‌ ಹೂಡಿಕೆಯನ್ನು ಅಲ್ಲಿನ ಸರ್ಕಾರ ರದ್ದುಪಡಿಸಿದೆ.

ಪ್ರೆಂಚ್ ಮೂಲದ ಟೋಟಲ್ ಎನರ್ಜಿ ಅದಾನಿ ಸಮೂಹದ ಹೂಡಿಕೆಗಳನ್ನು ತಾತ್ಕಾಲಿಕ ಸ್ಥಗಿತ ಮಾಡಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಆಂಧ್ರ ಸರ್ಕಾರ ಕೂಡ ಅದಾನಿ ಜೊತೆಗಿನ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಯೋಚಿಸುತ್ತಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...