Homeಅಂತರಾಷ್ಟ್ರೀಯತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ...

ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

- Advertisement -
- Advertisement -

ಸ್ಥಳೀಯರ ತೀವ್ರ ವಿರೋಧ ಮತ್ತು ಈ ಹಿಂದಿನ ಸರ್ಕಾರವು ಯೋಜನೆಗಳಿಗೆ ಹೇಗೆ ಅನುಮೋದನೆ ನೀಡಿತು ಎಂಬ ವಿಚಾರದಲ್ಲಿ ಹೆಚ್ಚಿದ ಪರಿಶೀಲನೆಯ ನಂತರ, ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಗ್ರೀನ್ ಎನರ್ಜಿ ಸಂಸ್ಥೆಯು ಶ್ರೀಲಂಕಾದಲ್ಲಿನ ತನ್ನ ಪವನ ಶಕ್ತಿ ಯೋಜನೆ ಮತ್ತು ಎರಡು ಪ್ರಸರಣ ಯೋಜನೆಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ವರದಿಯಾಗಿದೆ. ತೀವ್ರ ಪ್ರತಿಭಟನೆ ಹಿನ್ನಲೆ

ಈ ಕ್ರಮವನ್ನು ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರಿಗೆ ರಾಜಕೀಯ ವಿಜಯವೆಂದು ಪರಿಗಣಿಸಲಾಗಿದ್ದು, ಅವರು ತಮ್ಮ ಚುನಾವಣಾ ಪ್ರಚಾರದ ಸಮಯದಲ್ಲಿ ಒಪ್ಪಂದವನ್ನು ರದ್ದುಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ತೀವ್ರ ಪ್ರತಿಭಟನೆ ಹಿನ್ನಲೆ

“ಶ್ರೀಲಂಕಾದಲ್ಲಿ ಆರ್‌ಇ ಪವನ ಶಕ್ತಿ ಯೋಜನೆ ಮತ್ತು ಎರಡು ಪ್ರಸರಣ ಯೋಜನೆಗಳಲ್ಲಿ ಮತ್ತಷ್ಟು ತೊಡಗಿಸಿಕೊಳ್ಳುವಿಕೆಯಿಂದ ಗೌರವಯುತವಾಗಿ ಹಿಂದೆ ಸರಿಯುವ ತನ್ನ ಮಂಡಳಿಯ ನಿರ್ಧಾರವನ್ನು ಅದಾನಿ ಗ್ರೀನ್ ಎನರ್ಜಿ ತಿಳಿಸಿದೆ. ಆದಾಗ್ಯೂ, ನಾವು ಶ್ರೀಲಂಕಾಕ್ಕೆ ಬದ್ಧರಾಗಿದ್ದು, ಶ್ರೀಲಂಕಾ ಸರ್ಕಾರ ಬಯಸಿದರೆ ಭವಿಷ್ಯದ ಸಹಯೋಗಕ್ಕೆ ಮುಕ್ತರಾಗಿದ್ದೇವೆ” ಎಂದು ಅದಾನಿ ಗ್ರೂಪ್ ವಕ್ತಾರರು ಗುರುವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಧ್ಯಕ್ಷ ದಿಸಾನಾಯಕೆ ನೇತೃತ್ವದ ಶ್ರೀಲಂಕಾದ ಸಚಿವ ಸಂಪುಟವು ಅದಾನಿ ಗ್ರೂಪ್‌ನೊಂದಿಗಿನ ವಿದ್ಯುತ್ ಖರೀದಿ ಒಪ್ಪಂದವನ್ನು ರದ್ದುಗೊಳಿಸಲು ನಿರ್ಧರಿಸಿದೆ. ಸರ್ಕಾರವು ಒಪ್ಪಂದವನ್ನು ರದ್ದುಗೊಳಿಸಿದ್ದು, ಸಂಪೂರ್ಣ ಯೋಜನೆಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿದೆ ಎಂದು ಶ್ರೀಲಂಕಾದ ಇಂಧನ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಶ್ರೀಲಂಕಾದ ಮನ್ನಾರ್ ಮತ್ತು ಪೂನೆರಿನ್ ಕರಾವಳಿ ಪ್ರದೇಶಗಳಲ್ಲಿ 484 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಯೋಜಿಸಲಾದ ಪವನ ವಿದ್ಯುತ್ ಯೋಜನೆಗೆ ಮೇ 2024 ರಲ್ಲಿ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಆಡಳಿತದಲ್ಲಿ ಸಹಿ ಹಾಕಲಾಗಿತ್ತು.

ಈ ಒಪ್ಪಂದವು ಪ್ರತಿ kWh ಗೆ USD 0.0826 ವಿದ್ಯುತ್ ಖರೀದಿ ದರವನ್ನು ನಿಗದಿಪಡಿಸಿತು. ಈ ದರವು ಸ್ಥಳೀಯ ಬಿಡ್ಡರ್‌ಗಳು ನೀಡುವ ದರಗಳಿಗಿಂತ ಭಾರಿ ಹೆಚ್ಚಿನ ದರವಾಗಿದೆ. ಈ ಬೆಲೆ ವ್ಯತ್ಯಾಸವು ಸ್ಥಳೀಯ ಬಿಡ್ಡರುಗಳು ಮತ್ತು ಜನರಿಂದ ಭಾರಿ ಟೀಕೆ ಮತ್ತು ಪ್ರತಿರೋಧ ಉಂಟಾಗಿತ್ತು.

ವನ್ಯಜೀವಿ, ಪ್ರಕೃತಿ ಸಂರಕ್ಷಣಾ ಸೊಸೈಟಿ ಮತ್ತು ಪರಿಸರ ಪ್ರತಿಷ್ಠಾನ ಸೇರಿದಂತ ಹಲವಾರು ಪರಿಸರ ಸಂಘಟನೆಗಳು ಈ ಯೋಜನೆಯನ್ನು ತೀವ್ರವಾಗಿ ಆಕ್ಷೇಪಿಸಿದ್ದವು. ಈ ಯೋಜನೆಯಿಂದ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅಸಮರ್ಪಕ ಪರಿಸರ ಪರಿಣಾಮ ಮೌಲ್ಯಮಾಪನ (EIA) ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು. ಮನ್ನಾರ್‌ನ ಬಿಷಪ್ ನೇತೃತ್ವದ ಸ್ಥಳೀಯ ಸಮುದಾಯಗಳು ಸಹ ಯೋಜನೆಯನ್ನು ಪ್ರತಿಭಟಿಸಿ, ಯೋಜನೆಯು ಕೈಗಾರಿಕೆಗಳನ್ನು ಅಡ್ಡಿಪಡಿಸಲಿದ್ದು, ಜನರ ಜೀವನೋಪಾಯಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ಎಚ್ಚರಿಸಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತು ಇತರ ಏಳು ಜನರ ವಿರುದ್ಧ ಲಂಚದ ಆರೋಪದ ಮೇಲೆ ಅಮೆರಿಕದ ಇಲಾಖೆಯೊಂದು ದೋಷಾರೋಪಣೆ ಮಾಡಿತ್ತು. ಇದರ ನಂತರ, ಶ್ರೀಲಂಕಾದಲ್ಲಿ ಕಂಪನಿಯ ಕಾರ್ಯಾಚರಣೆಗಳನ್ನು ಪರಿಶೀಲಿಸಲಾಗುತ್ತಿತ್ತು. ಈ ವೇಳೆ ಅದಾನಿ ಗ್ರೂಪ್‌ನ ಪವನ ಶಕ್ತಿ ಯೋಜನೆಯ ಭ್ರಷ್ಟಾಚಾರ ಹೊರಬಂದಿತ್ತು. ಅದಾಗ್ಯೂ, ಅಮೆರಿಕದ ಆರೋಪವನ್ನು ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದ್ದು, ಅವುಗಳನ್ನು ಆಧಾರರಹಿತ ಎಂದು ಕರೆದಿದೆ.

ಪವನ ಶಕ್ತಿ ಮತ್ತು ಪ್ರಸರಣ ಯೋಜನೆಗಳಿಂದ ಹಿಂದೆ ಸರಿದಿದ್ದರೂ, ಅದಾನಿ ಗ್ರೂಪ್ ಶ್ರೀಲಂಕಾ ಬಂದರು ಪ್ರಾಧಿಕಾರ (SLPA) ಮತ್ತು ಜಾನ್ ಕೀಲ್ಸ್ ಹೋಲ್ಡಿಂಗ್ಸ್‌ನ ಸಹಭಾಗಿತ್ವದಲ್ಲಿ ಕೊಲಂಬೊ ಬಂದರಿನಲ್ಲಿ ವೆಸ್ಟ್ ಕಂಟೇನರ್ ಟರ್ಮಿನಲ್ ನಿರ್ಮಾಣವನ್ನು ಮುಂದುವರೆಸಿದೆ.

ಯೋಜನೆಯನ್ನು ಔಪಚಾರಿಕವಾಗಿ ರದ್ದುಗೊಳಿಸಲಾಗಿಲ್ಲ ಮತ್ತು ಸರ್ಕಾರದ ನಿರ್ಧಾರವು “ಪ್ರಮಾಣಿತ ಪರಿಶೀಲನಾ ಪ್ರಕ್ರಿಯೆಯ” ಭಾಗವಾಗಿದೆ ಎಂದು ಅದಾನಿ ಗ್ರೂಪ್ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಶ್ರೀಲಂಕಾದ ಹಸಿರು ಇಂಧನ ವಲಯದಲ್ಲಿ 1 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಮಾಡುವ ಬದ್ಧತೆಯನ್ನು ಕಂಪನಿಯು ಉಳಿಸಿಕೊಂಡಿದೆ.

ಇದನ್ನೂಓದಿ:  ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ – ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್

ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ – ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...