Homeಅಂತರಾಷ್ಟ್ರೀಯತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ...

ತೀವ್ರ ಪ್ರತಿಭಟನೆ ಹಿನ್ನಲೆ | ಶ್ರೀಲಂಕಾ ವಿದ್ಯುತ್ ಯೋಜನೆ ಹಿಂಪಡೆದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಅದಾನಿ

- Advertisement -
- Advertisement -

ಸ್ಥಳೀಯರ ತೀವ್ರ ವಿರೋಧ ಮತ್ತು ಈ ಹಿಂದಿನ ಸರ್ಕಾರವು ಯೋಜನೆಗಳಿಗೆ ಹೇಗೆ ಅನುಮೋದನೆ ನೀಡಿತು ಎಂಬ ವಿಚಾರದಲ್ಲಿ ಹೆಚ್ಚಿದ ಪರಿಶೀಲನೆಯ ನಂತರ, ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಗ್ರೀನ್ ಎನರ್ಜಿ ಸಂಸ್ಥೆಯು ಶ್ರೀಲಂಕಾದಲ್ಲಿನ ತನ್ನ ಪವನ ಶಕ್ತಿ ಯೋಜನೆ ಮತ್ತು ಎರಡು ಪ್ರಸರಣ ಯೋಜನೆಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ವರದಿಯಾಗಿದೆ. ತೀವ್ರ ಪ್ರತಿಭಟನೆ ಹಿನ್ನಲೆ

ಈ ಕ್ರಮವನ್ನು ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರಿಗೆ ರಾಜಕೀಯ ವಿಜಯವೆಂದು ಪರಿಗಣಿಸಲಾಗಿದ್ದು, ಅವರು ತಮ್ಮ ಚುನಾವಣಾ ಪ್ರಚಾರದ ಸಮಯದಲ್ಲಿ ಒಪ್ಪಂದವನ್ನು ರದ್ದುಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ತೀವ್ರ ಪ್ರತಿಭಟನೆ ಹಿನ್ನಲೆ

“ಶ್ರೀಲಂಕಾದಲ್ಲಿ ಆರ್‌ಇ ಪವನ ಶಕ್ತಿ ಯೋಜನೆ ಮತ್ತು ಎರಡು ಪ್ರಸರಣ ಯೋಜನೆಗಳಲ್ಲಿ ಮತ್ತಷ್ಟು ತೊಡಗಿಸಿಕೊಳ್ಳುವಿಕೆಯಿಂದ ಗೌರವಯುತವಾಗಿ ಹಿಂದೆ ಸರಿಯುವ ತನ್ನ ಮಂಡಳಿಯ ನಿರ್ಧಾರವನ್ನು ಅದಾನಿ ಗ್ರೀನ್ ಎನರ್ಜಿ ತಿಳಿಸಿದೆ. ಆದಾಗ್ಯೂ, ನಾವು ಶ್ರೀಲಂಕಾಕ್ಕೆ ಬದ್ಧರಾಗಿದ್ದು, ಶ್ರೀಲಂಕಾ ಸರ್ಕಾರ ಬಯಸಿದರೆ ಭವಿಷ್ಯದ ಸಹಯೋಗಕ್ಕೆ ಮುಕ್ತರಾಗಿದ್ದೇವೆ” ಎಂದು ಅದಾನಿ ಗ್ರೂಪ್ ವಕ್ತಾರರು ಗುರುವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಧ್ಯಕ್ಷ ದಿಸಾನಾಯಕೆ ನೇತೃತ್ವದ ಶ್ರೀಲಂಕಾದ ಸಚಿವ ಸಂಪುಟವು ಅದಾನಿ ಗ್ರೂಪ್‌ನೊಂದಿಗಿನ ವಿದ್ಯುತ್ ಖರೀದಿ ಒಪ್ಪಂದವನ್ನು ರದ್ದುಗೊಳಿಸಲು ನಿರ್ಧರಿಸಿದೆ. ಸರ್ಕಾರವು ಒಪ್ಪಂದವನ್ನು ರದ್ದುಗೊಳಿಸಿದ್ದು, ಸಂಪೂರ್ಣ ಯೋಜನೆಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿದೆ ಎಂದು ಶ್ರೀಲಂಕಾದ ಇಂಧನ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಶ್ರೀಲಂಕಾದ ಮನ್ನಾರ್ ಮತ್ತು ಪೂನೆರಿನ್ ಕರಾವಳಿ ಪ್ರದೇಶಗಳಲ್ಲಿ 484 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಯೋಜಿಸಲಾದ ಪವನ ವಿದ್ಯುತ್ ಯೋಜನೆಗೆ ಮೇ 2024 ರಲ್ಲಿ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಆಡಳಿತದಲ್ಲಿ ಸಹಿ ಹಾಕಲಾಗಿತ್ತು.

ಈ ಒಪ್ಪಂದವು ಪ್ರತಿ kWh ಗೆ USD 0.0826 ವಿದ್ಯುತ್ ಖರೀದಿ ದರವನ್ನು ನಿಗದಿಪಡಿಸಿತು. ಈ ದರವು ಸ್ಥಳೀಯ ಬಿಡ್ಡರ್‌ಗಳು ನೀಡುವ ದರಗಳಿಗಿಂತ ಭಾರಿ ಹೆಚ್ಚಿನ ದರವಾಗಿದೆ. ಈ ಬೆಲೆ ವ್ಯತ್ಯಾಸವು ಸ್ಥಳೀಯ ಬಿಡ್ಡರುಗಳು ಮತ್ತು ಜನರಿಂದ ಭಾರಿ ಟೀಕೆ ಮತ್ತು ಪ್ರತಿರೋಧ ಉಂಟಾಗಿತ್ತು.

ವನ್ಯಜೀವಿ, ಪ್ರಕೃತಿ ಸಂರಕ್ಷಣಾ ಸೊಸೈಟಿ ಮತ್ತು ಪರಿಸರ ಪ್ರತಿಷ್ಠಾನ ಸೇರಿದಂತ ಹಲವಾರು ಪರಿಸರ ಸಂಘಟನೆಗಳು ಈ ಯೋಜನೆಯನ್ನು ತೀವ್ರವಾಗಿ ಆಕ್ಷೇಪಿಸಿದ್ದವು. ಈ ಯೋಜನೆಯಿಂದ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅಸಮರ್ಪಕ ಪರಿಸರ ಪರಿಣಾಮ ಮೌಲ್ಯಮಾಪನ (EIA) ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು. ಮನ್ನಾರ್‌ನ ಬಿಷಪ್ ನೇತೃತ್ವದ ಸ್ಥಳೀಯ ಸಮುದಾಯಗಳು ಸಹ ಯೋಜನೆಯನ್ನು ಪ್ರತಿಭಟಿಸಿ, ಯೋಜನೆಯು ಕೈಗಾರಿಕೆಗಳನ್ನು ಅಡ್ಡಿಪಡಿಸಲಿದ್ದು, ಜನರ ಜೀವನೋಪಾಯಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ಎಚ್ಚರಿಸಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತು ಇತರ ಏಳು ಜನರ ವಿರುದ್ಧ ಲಂಚದ ಆರೋಪದ ಮೇಲೆ ಅಮೆರಿಕದ ಇಲಾಖೆಯೊಂದು ದೋಷಾರೋಪಣೆ ಮಾಡಿತ್ತು. ಇದರ ನಂತರ, ಶ್ರೀಲಂಕಾದಲ್ಲಿ ಕಂಪನಿಯ ಕಾರ್ಯಾಚರಣೆಗಳನ್ನು ಪರಿಶೀಲಿಸಲಾಗುತ್ತಿತ್ತು. ಈ ವೇಳೆ ಅದಾನಿ ಗ್ರೂಪ್‌ನ ಪವನ ಶಕ್ತಿ ಯೋಜನೆಯ ಭ್ರಷ್ಟಾಚಾರ ಹೊರಬಂದಿತ್ತು. ಅದಾಗ್ಯೂ, ಅಮೆರಿಕದ ಆರೋಪವನ್ನು ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದ್ದು, ಅವುಗಳನ್ನು ಆಧಾರರಹಿತ ಎಂದು ಕರೆದಿದೆ.

ಪವನ ಶಕ್ತಿ ಮತ್ತು ಪ್ರಸರಣ ಯೋಜನೆಗಳಿಂದ ಹಿಂದೆ ಸರಿದಿದ್ದರೂ, ಅದಾನಿ ಗ್ರೂಪ್ ಶ್ರೀಲಂಕಾ ಬಂದರು ಪ್ರಾಧಿಕಾರ (SLPA) ಮತ್ತು ಜಾನ್ ಕೀಲ್ಸ್ ಹೋಲ್ಡಿಂಗ್ಸ್‌ನ ಸಹಭಾಗಿತ್ವದಲ್ಲಿ ಕೊಲಂಬೊ ಬಂದರಿನಲ್ಲಿ ವೆಸ್ಟ್ ಕಂಟೇನರ್ ಟರ್ಮಿನಲ್ ನಿರ್ಮಾಣವನ್ನು ಮುಂದುವರೆಸಿದೆ.

ಯೋಜನೆಯನ್ನು ಔಪಚಾರಿಕವಾಗಿ ರದ್ದುಗೊಳಿಸಲಾಗಿಲ್ಲ ಮತ್ತು ಸರ್ಕಾರದ ನಿರ್ಧಾರವು “ಪ್ರಮಾಣಿತ ಪರಿಶೀಲನಾ ಪ್ರಕ್ರಿಯೆಯ” ಭಾಗವಾಗಿದೆ ಎಂದು ಅದಾನಿ ಗ್ರೂಪ್ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಶ್ರೀಲಂಕಾದ ಹಸಿರು ಇಂಧನ ವಲಯದಲ್ಲಿ 1 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಮಾಡುವ ಬದ್ಧತೆಯನ್ನು ಕಂಪನಿಯು ಉಳಿಸಿಕೊಂಡಿದೆ.

ಇದನ್ನೂಓದಿ:  ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ – ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್

ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ – ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...