Homeಅಂತರಾಷ್ಟ್ರೀಯಶ್ರೀಲಂಕಾ: ನೂತನ ಅಧ್ಯಕ್ಷರಾಗಿ ರಾನಿಲ್‌ ವಿಕ್ರಮಸಿಂಘೆ ಆಯ್ಕೆ

ಶ್ರೀಲಂಕಾ: ನೂತನ ಅಧ್ಯಕ್ಷರಾಗಿ ರಾನಿಲ್‌ ವಿಕ್ರಮಸಿಂಘೆ ಆಯ್ಕೆ

- Advertisement -
- Advertisement -

ಭಾರೀ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ರಾನಿಲ್ ವಿಕ್ರಮಸಿಂಘೆ ಅವರು ಬುಧವಾರ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗೋಟಾಬಯ ರಾಜಪಕ್ಸೆ ಅವರು ರಾಜೀನಾಮೆ ನೀಡಿದ ನಂತರ ವಿಕ್ರಮಸಿಂಘೆ ಅವರು ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ಆರು ಬಾರಿ ಪ್ರಧಾನಿಯಾಗಿರುವ ವಿಕ್ರಮಸಿಂಘೆ ಅವರು 225 ಸದಸ್ಯರ ಸಂಸತ್ತಿನ ಅತಿದೊಡ್ಡ ಬಣವಾದ ರಾಜಪಕ್ಸೆಗಳ ಎಸ್‌ಎಲ್‌ಪಿಪಿಯಿಂದ ಬೆಂಬಲಿತರಾಗಿರುವುದರಿಂದ ಅವರನ್ನು ಮುಂಚೂಣಿಯಲ್ಲಿ ಪರಿಗಣಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಅವರನ್ನು ಪ್ರತಿಭಟನಾಕಾರರು ತಿರಸ್ಕಾರ ಮಾಡುತ್ತಿದ್ದು, ಅವರು ರಾಜಪಕ್ಸೆ ಕುಟುಂಬದ ಮಿತ್ರರಾಗಿರುವುದರಿಂದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ವಿಕ್ರಮಸಿಂಘೆ ಅವರು ಪ್ರತಿಭಟನೆಗೆ ಕಡಿವಾಣ ಹಾಕಲಿದ್ದಾರೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಇಂಧನ ಮತ್ತು ನಗದು ಬಿಕ್ಕಟ್ಟು: ಶಾಲೆಗಳಿಗೆ ರಜೆ ಘೋಷಿಸಿದ ಶ್ರೀಲಂಕಾ

ಈ ಹಿಂದೆ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ವಿಸ್ತರಿಸಿದ್ದರು. ತುರ್ತು ಪರಿಸ್ಥಿತಿಯೂ ಪೊಲೀಸ್ ಮತ್ತು ಭದ್ರತಾ ಪಡೆಗಳಿಗೆ ವ್ಯಾಪಕ ಅಧಿಕಾರವನ್ನು ನೀಡುತ್ತದೆ. ಕಳೆದ ಬಾರಿ ಪ್ರತಿಭಟನಾಕಾರರು ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ನುಗ್ಗಿದ ನಂತರ ಹಂಗಾಮಿ ಅಧ್ಯಕ್ಷರಾದ ಅವರು ಇದನ್ನು ಜಾರಿಗೆ ತಂದಿದ್ದರು.

ವಿಕ್ರಮಸಿಂಘೆ ಅವರ ಪ್ರಮುಖ ಎದುರಾಳಿ ಎಸ್‌ಎಲ್‌ಪಿಪಿ ಭಿನ್ನಮತೀಯ ಮತ್ತು ಮಾಜಿ ಶಿಕ್ಷಣ ಸಚಿವ ಡಲ್ಲಾಸ್ ಅಲಹಪ್ಪೆರುಮ ಅವರು ವಿರೋಧ ಪಕ್ಷ ಬೆಂಬಲಿತ ಅಭ್ಯರ್ಥಿಯಾಗಿದ್ದರು. ಮೂರನೇ ಅಭ್ಯರ್ಥಿಯಾಗಿ ಎಡಪಂಥೀಯ ಪೀಪಲ್ಸ್ ಲಿಬರೇಷನ್ ಫ್ರಂಟ್‌ನ ನಾಯಕ ಅನುರ ಡಿಸ್ಸಾನಾಯಕ್ ಆಯ್ಕೆಯಾಗಿದ್ದರು.

ವಿಕ್ರಮಸಿಂಘೆ ಪರವಾಗಿ ಒಟ್ಟು 134 ಮತಗಳು ಚಲಾವಣೆಯಾಗಿದ್ದು, ಒಟ್ಟು 223 ಸಂಸದರು ಮತ ಚಲಾಯಿಸಿದ್ದರು. 4 ಮತಗಳು ಅಸಿಂಧುವಾಗಿದ್ದವು.

ಇದನ್ನೂ ಓದಿ: ಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಮನೆಗೆ ಬೆಂಕಿ, ಬುಧವಾರ ಅಧ್ಯಕ್ಷ ರಾಜೀನಾಮೆ

ಭೀಕರ ಆರ್ಥಿಕ ಹಿನ್ನಡೆಯಿಂದ ಭಾರಿ ಪ್ರತಿಭಟನೆಯಿಂದಾಗಿ ಶ್ರೀಲಂಕಾದ ಮಹಿಂದಾ ರಾಜಪಕ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ವಿಕ್ರಮಸಿಂಘೆ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿದ್ದರು. ಆದರೆ ಕೆಲವೇ ದಿನಗಳಲ್ಲಿ ಅವರು ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...