Homeಮುಖಪುಟಶ್ರೀಲಂಕಾ: ಹಂಗಾಮಿ ಅಧ್ಯಕ್ಷರಾಗಿ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ

ಶ್ರೀಲಂಕಾ: ಹಂಗಾಮಿ ಅಧ್ಯಕ್ಷರಾಗಿ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ

- Advertisement -
- Advertisement -

ಶ್ರೀಲಂಕಾದ ಮಾಜಿ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಸಲ್ಲಿಸಿದ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ ಕೆಲವೇ ಗಂಟೆಗಳ ನಂತರ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಂಸತ್ತು ಶನಿವಾರ ಸಭೆ ಸೇರಲಿದ್ದು, ಸಂವಿಧಾನದ ನಿಬಂಧನೆಗಳ ಪ್ರಕಾರ ಏಳು ದಿನಗಳಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಹೇಳಿರುವುದಾಗಿ ‘ಡೈಲಿ ಮಿರರ್ ಲಂಕಾ’ ವರದಿ ಮಾಡಿದೆ.

ಹೊಸದಾಗಿ ಚುನಾಯಿತರಾದ ಅಧ್ಯಕ್ಷರು ಹೊಸ ಪ್ರಧಾನ ಮಂತ್ರಿಯನ್ನು ನೇಮಿಸುವ ಸಾಧ್ಯತೆಯಿದೆ. ನಂತರ ಅವರು ಸಂಸತ್ತಿನಲ್ಲಿ ಅನುಮೋದನೆ ಪಡೆಯಬೇಕಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ವಾರ ರಾಷ್ಟ್ರಪತಿ ನಿವಾಸ, ಪ್ರಧಾನಿ ಕಚೇರಿ ಸೇರಿದಂತೆ ಸರ್ಕಾರಿ ಕಟ್ಟಡಗಳಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಲು ಬಯಸುವುದಿಲ್ಲ ಎಂದು ಗುರುವಾರ ತೆರವು ಮಾಡಿದ್ದಾರೆ. ಇದರ ಬೆನ್ನಲ್ಲೇ ಶ್ರೀಲಂಕಾ ಸೇನಾ ಪಡೆಗಳು ಭದ್ರತೆಯತ್ತ ಗಮನ ಹರಿಸಿವೆ.

ಸುಮಾರು ಒಂದು ತಿಂಗಳಿಂದ ಶ್ರೀಲಂಕಾ ಪ್ರಜೆಗಳು ನಡೆಸುತ್ತಿರುವ ಹೋರಾಟಕ್ಕೆ ಮಣಿದಿರುವ ಗೋತಬಯ ರಾಜಪಕ್ಸೆ ಗುರುವಾರ ರಾತ್ರಿ ಇಮೇಲ್ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಸಿಂಗಾಪುರದಲ್ಲಿರುವ ಗೋತಬಯ, ತಮ್ಮ ಪತ್ನಿಯೊಂದಿಗೆ ಶ್ರೀಲಂಕಾದಿಂದ ಪಲಾಯನ ಮಾಡಿದ್ದಾರೆ. ಸಿಂಗಾಪುರಕ್ಕೆ ಪ್ರಯಾಣಿಸುವ ಮೊದಲು ಮಾಲ್ಡೀವ್ಸ್‌ನಲ್ಲಿ ಒಂದು ದಿನ ತಂಗಿದ್ದರು.

ಶ್ರೀಲಂಕಾ ಪೊದುಜನ ಪೆರಮುನಾ (ಎಸ್‌ಎಲ್‌ಪಿಪಿ) ಪಕ್ಷದ ಸಂಸದ ಗೆವಿಂದು ಕುಮಾರತುಂಗ ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ಪ್ರತಿಕ್ರಿಯೆ ನೀಡಿದ್ದು, “ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ಪ್ರತಿಪಕ್ಷಗಳು ವೇಳಾಪಟ್ಟಿಯನ್ನು ಸಿದ್ಧಪಡಿಸಿವೆ” ಎಂದಿದ್ದಾರೆ.

ಭಾರತ ನೆರವು

“ಬಿಕ್ಕಟ್ಟಿನ ಸಮಯದಲ್ಲಿ ನೆರೆಯ ಶ್ರೀಲಂಕಾಕ್ಕೆ ಸಾಧ್ಯವಾದಷ್ಟು ಸಹಾಯವನ್ನು ಭಾರತ ಮಾಡುತ್ತಿದೆ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೋಲ್ಕತ್ತಾದಲ್ಲಿ ಹೇಳಿದ್ದಾರೆ.

ತುರ್ತು ಪರಿಸ್ಥಿತಿ

ಗೊಟಾಬಯ ರಾಜಪಕ್ಸೆ ದೇಶದಿಂದ ಪಲಾಯನಗೈದು ಮಾಲ್ಡೀವ್ಸ್‌ನಲ್ಲಿ ಆಶ್ರಯ ಪಡೆದ ಕೂಡಲೇ ಜುಲೈ 13 ರಂದು ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.

ಇದನ್ನೂ ಓದಿರಿ: ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್ ಜುಬೇರ್‌ಗೆ ಜಾಮೀನು

ಪ್ರಸ್ತುತ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಅನಿರ್ದಿಷ್ಟ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಯನ್ನು ಹೇರಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಅಧ್ಯಕ್ಷ ರಾಜಪಕ್ಸೆ ಪಲಾಯನ ಮಾಡುವ ಸುದ್ದಿ ಹೊರಬಿದ್ದ ಕೂಡಲೇ ರಾಜಧಾನಿ ಕೊಲಂಬೊದಲ್ಲಿ ಮತ್ತೆ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದವು, ಪ್ರತಿಭಟನಾಕಾರರು ಶ್ರೀಲಂಕಾದ ಪ್ರಧಾನಿ ಕಚೇರಿಯತ್ತ ಸಾಗಿದ್ದರು.

ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಕಚೇರಿ ಬಳಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿರುವ ದೃಶ್ಯಗಳು ಕಂಡುಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...