Homeಮುಖಪುಟಶ್ರೀಲಂಕಾ: ಹಂಗಾಮಿ ಅಧ್ಯಕ್ಷರಾಗಿ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ

ಶ್ರೀಲಂಕಾ: ಹಂಗಾಮಿ ಅಧ್ಯಕ್ಷರಾಗಿ ವಿಕ್ರಮಸಿಂಘೆ ಅಧಿಕಾರ ಸ್ವೀಕಾರ

- Advertisement -
- Advertisement -

ಶ್ರೀಲಂಕಾದ ಮಾಜಿ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಸಲ್ಲಿಸಿದ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ ಕೆಲವೇ ಗಂಟೆಗಳ ನಂತರ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಂಸತ್ತು ಶನಿವಾರ ಸಭೆ ಸೇರಲಿದ್ದು, ಸಂವಿಧಾನದ ನಿಬಂಧನೆಗಳ ಪ್ರಕಾರ ಏಳು ದಿನಗಳಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಹೇಳಿರುವುದಾಗಿ ‘ಡೈಲಿ ಮಿರರ್ ಲಂಕಾ’ ವರದಿ ಮಾಡಿದೆ.

ಹೊಸದಾಗಿ ಚುನಾಯಿತರಾದ ಅಧ್ಯಕ್ಷರು ಹೊಸ ಪ್ರಧಾನ ಮಂತ್ರಿಯನ್ನು ನೇಮಿಸುವ ಸಾಧ್ಯತೆಯಿದೆ. ನಂತರ ಅವರು ಸಂಸತ್ತಿನಲ್ಲಿ ಅನುಮೋದನೆ ಪಡೆಯಬೇಕಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ವಾರ ರಾಷ್ಟ್ರಪತಿ ನಿವಾಸ, ಪ್ರಧಾನಿ ಕಚೇರಿ ಸೇರಿದಂತೆ ಸರ್ಕಾರಿ ಕಟ್ಟಡಗಳಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಲು ಬಯಸುವುದಿಲ್ಲ ಎಂದು ಗುರುವಾರ ತೆರವು ಮಾಡಿದ್ದಾರೆ. ಇದರ ಬೆನ್ನಲ್ಲೇ ಶ್ರೀಲಂಕಾ ಸೇನಾ ಪಡೆಗಳು ಭದ್ರತೆಯತ್ತ ಗಮನ ಹರಿಸಿವೆ.

ಸುಮಾರು ಒಂದು ತಿಂಗಳಿಂದ ಶ್ರೀಲಂಕಾ ಪ್ರಜೆಗಳು ನಡೆಸುತ್ತಿರುವ ಹೋರಾಟಕ್ಕೆ ಮಣಿದಿರುವ ಗೋತಬಯ ರಾಜಪಕ್ಸೆ ಗುರುವಾರ ರಾತ್ರಿ ಇಮೇಲ್ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಸಿಂಗಾಪುರದಲ್ಲಿರುವ ಗೋತಬಯ, ತಮ್ಮ ಪತ್ನಿಯೊಂದಿಗೆ ಶ್ರೀಲಂಕಾದಿಂದ ಪಲಾಯನ ಮಾಡಿದ್ದಾರೆ. ಸಿಂಗಾಪುರಕ್ಕೆ ಪ್ರಯಾಣಿಸುವ ಮೊದಲು ಮಾಲ್ಡೀವ್ಸ್‌ನಲ್ಲಿ ಒಂದು ದಿನ ತಂಗಿದ್ದರು.

ಶ್ರೀಲಂಕಾ ಪೊದುಜನ ಪೆರಮುನಾ (ಎಸ್‌ಎಲ್‌ಪಿಪಿ) ಪಕ್ಷದ ಸಂಸದ ಗೆವಿಂದು ಕುಮಾರತುಂಗ ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ಪ್ರತಿಕ್ರಿಯೆ ನೀಡಿದ್ದು, “ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ಪ್ರತಿಪಕ್ಷಗಳು ವೇಳಾಪಟ್ಟಿಯನ್ನು ಸಿದ್ಧಪಡಿಸಿವೆ” ಎಂದಿದ್ದಾರೆ.

ಭಾರತ ನೆರವು

“ಬಿಕ್ಕಟ್ಟಿನ ಸಮಯದಲ್ಲಿ ನೆರೆಯ ಶ್ರೀಲಂಕಾಕ್ಕೆ ಸಾಧ್ಯವಾದಷ್ಟು ಸಹಾಯವನ್ನು ಭಾರತ ಮಾಡುತ್ತಿದೆ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೋಲ್ಕತ್ತಾದಲ್ಲಿ ಹೇಳಿದ್ದಾರೆ.

ತುರ್ತು ಪರಿಸ್ಥಿತಿ

ಗೊಟಾಬಯ ರಾಜಪಕ್ಸೆ ದೇಶದಿಂದ ಪಲಾಯನಗೈದು ಮಾಲ್ಡೀವ್ಸ್‌ನಲ್ಲಿ ಆಶ್ರಯ ಪಡೆದ ಕೂಡಲೇ ಜುಲೈ 13 ರಂದು ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.

ಇದನ್ನೂ ಓದಿರಿ: ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್ ಜುಬೇರ್‌ಗೆ ಜಾಮೀನು

ಪ್ರಸ್ತುತ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಅನಿರ್ದಿಷ್ಟ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಯನ್ನು ಹೇರಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಅಧ್ಯಕ್ಷ ರಾಜಪಕ್ಸೆ ಪಲಾಯನ ಮಾಡುವ ಸುದ್ದಿ ಹೊರಬಿದ್ದ ಕೂಡಲೇ ರಾಜಧಾನಿ ಕೊಲಂಬೊದಲ್ಲಿ ಮತ್ತೆ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದವು, ಪ್ರತಿಭಟನಾಕಾರರು ಶ್ರೀಲಂಕಾದ ಪ್ರಧಾನಿ ಕಚೇರಿಯತ್ತ ಸಾಗಿದ್ದರು.

ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಕಚೇರಿ ಬಳಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿರುವ ದೃಶ್ಯಗಳು ಕಂಡುಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...