Homeಅಂತರಾಷ್ಟ್ರೀಯಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

- Advertisement -
- Advertisement -

ಆರ್ಥಿಕ ಬಿಕ್ಕಟ್ಟಿಗೆ ಸಿಲುಕುವುದರ ಜೊತೆಗೆ, ಶ್ರೀಲಂಕಾ ರಾಷ್ಟ್ರದಾದ್ಯಂತ ನಾಗರಿಕರ ಪ್ರತಿಭಟನೆಗಳು ಭುಗಿಲೆದ್ದಿವೆ. ಆಹಾರ ಮತ್ತು ಮೂಲಭೂತ ಅಗತ್ಯಗಳ ಕೊರತೆಯಿಂದಾಗಿ ಸರ್ಕಾರದ ವಿರುದ್ಧದ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಹೆಣಗಾಡುತ್ತಿದ್ದಾರೆ. ಈ ಮಧ್ಯೆ ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರು ಶ್ರೀಲಂಕಾ ಪ್ರವೇಶಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಊಹಾಪೋಹಗಳು ಹರಡಿದಾಡುತ್ತಿವೆ.

ಆದರೆ ಇದನ್ನು ನಿರಾಕರಿಸಿರುವ ಶ್ರೀಲಂಕಾ ಸೇನೆ ಮತ್ತು ಭಾರತೀಯ ಹೈಕಮಿಷನ್‌, “ಭಾರತದಿಂದ ಯಾವುದೇ ಮಿಲಿಟರಿ ಹಸ್ತಕ್ಷೇಪ ನಡೆದಿಲ್ಲ” ಎಂದು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ರಕ್ಷಣಾ ಕಾರ್ಯದರ್ಶಿ ಕಮಲ್ ಗುಣರತ್ನೆ ಶನಿವಾರದಂದು ಭಾರತೀಯ ಸೈನಿಕರ ಆಗಮನದ ವರದಿಗಳನ್ನು ತಳ್ಳಿಹಾಕಿದ್ದಾರೆ. 2021ರಲ್ಲಿ ನಡೆದ ಭಾರತ-ಶ್ರೀಲಂಕಾ ಜಂಟಿ ಮಿಲಿಟರಿ ಸಮರಭ್ಯಾಸದ ಅಧಿಕೃತ ಚಿತ್ರಗಳನ್ನು ಹೊಂದಿರುವ ನಕಲಿ ಸುದ್ದಿಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

ಭದ್ರತೆಯನ್ನು ಖಾತ್ರಿಪಡಿಸುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಶ್ರೀಲಂಕಾದ ಪಡೆಗಳ ಸನ್ನದ್ಧವಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ವಿಶ್ವಾಸ ವ್ಯಕ್ತಪಡಿಸಿದ್ದು, ತಪ್ಪು ಮಾಹಿತಿಯಿಂದ ಎಚ್ಚರಿಕೆಯಿಂದ ಇರಲು ಜನರನ್ನು ಕೇಳಿದ್ದಾರೆ.

ಈ ಬಗ್ಗೆ ಭಾರತೀಯ ಹೈಕಮಿಷನ್‌ ನೀಡಿದ ಹೇಳಿಕೆಯಲ್ಲಿ, “ಶ್ರೀಲಂಕಾಕ್ಕೆ ಭಾರತೀಯ ಸೇನೆಯ ಆಗಮನದ ಬಗ್ಗೆಗಿನ ವರದಿಗಳು ನಿಸ್ಸಂಶಯವಾಗಿ ಸುಳ್ಳು ಮತ್ತು ಸಂಪೂರ್ಣವಾಗಿ ಆಧಾರರಹಿತ” ಎಂದು ತಿಳಿಸಿದೆ.

ಈ ಮಧ್ಯೆ, ಶ್ರೀಲಂಕಾದಲ್ಲಿ ಭಾನುವಾರದಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಆದರೆ ಅಲ್ಲಿ ಆಡಳಿತವು ಶನಿವಾರದಿಂದ 36 ಗಂಟೆಗಳ ಸುದೀರ್ಘ ಕರ್ಫ್ಯೂ ಅನ್ನು ವಿಧಿಸಿದೆ.

ನಿನ್ನೆ ಹೊರಡಿಸಲಾದ ಗೆಜೆಟ್‌ನಲ್ಲಿ, ಶನಿವಾರ ಸಂಜೆ 6 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಇದ್ದು, ಈ ಸಮಯದಲ್ಲಿ ಸಾರ್ವಜನಿಕ ರಸ್ತೆ, ಉದ್ಯಾನವನ, ರೈಲ್ವೆ, ಸಮುದ್ರ ತೀರ ಅಥವಾ ಇತರ ಸಾರ್ವಜನಿಕ ಸ್ಥಳಗಳಿಗೆ ಜನರು ಬರುವುದನ್ನು ನಿಷೇಧಿಸಲಾಗಿದೆ.

ಈ ಕರ್ಫ್ಯೂ ವಿಧಿಸುವ ಕೆಲವೇ ಗಂಟೆಗಳ ಮೊದಲು, ರಾಷ್ಟ್ರದ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ರಾಜೀನಾಮೆ ನೀಡಬೇಕೆಂದು ಜನರು ಬೀದಿಗಿಳಿದಿದ್ದರು.

ಗುರುವಾರ ಸಂಜೆ ಅಧ್ಯಕ್ಷರ ಭವನದ ಬಳಿ ಸಾರ್ವಜನಿಕ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು ಮತ್ತು ಪೊಲೀಸರು ಜನರ ಮೇಲೆ ದಾಳಿ ಮಾಡಿದ್ದರು. ಇದರ ನಂತರ ಪ್ರತಿಭಟನಾಕಾರರಲ್ಲಿ 50 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....