Homeಮುಖಪುಟತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

- Advertisement -
- Advertisement -

ರಾಷ್ಟ್ರವ್ಯಾಪಿ ಪ್ರತಿಭಟನೆಯು ತೀವ್ರಗೊಳ್ಳುತ್ತಿದ್ದಂತೆ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ನಡುವೆ ಹೊಸ ಕ್ಯಾಬಿನೆಟ್‌ಗೆ ದಾರಿ ಮಾಡಿಕೊಡುವ ಸಾಧ್ಯತೆಯಿದೆ.

ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಅಧ್ಯಕ್ಷ ಗೊಟ್ಬಯಾ ರಾಜಪಕ್ಸೆ ಅವರು, “ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರವಾಗಿ ಅಧಿಕಾರದಿಂದ ಕೆಳಗಿಳಿಯಬೇಕು” ಎಂದು ಪ್ರಧಾನಿಗೆ ಮನವಿ ಮಾಡಿದ ಕೆಲವು ದಿನಗಳ ನಂತರ ಈ ನಿರ್ಧಾರ ಹೊರಬಂದಿದೆ ಎಂದು ಶ್ರೀಲಂಕಾದ ಡೈಲಿ ಮಿರರ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೀಗ ಪ್ರಧಾನಿ ರಾಜೀನಾಮೆ ನೀಡಿದ್ದು, ಅಧ್ಯಕ್ಷ ರಾಜಪಕ್ಸೆ ಅವರು ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳನ್ನು ಸರ್ವಪಕ್ಷಗಳ ಸಂಪುಟ ರಚನೆಗೆ ಆಹ್ವಾನಿಸುವ ನಿರೀಕ್ಷೆಯಿದೆ.

“ಮಧ್ಯಂತರ ಸರ್ಕಾರದಲ್ಲಿ ಪ್ರಧಾನಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ” ಎಂದು ವಿರೋಧ ಪಕ್ಷವಾದ ‘ಸಮಗಿ ಜನ ಬಲವೇಗಯ (ಎಸ್‌ಜೆಬಿ)’ ನಾಯಕ ಸಜಿತ್ ಪ್ರೇಮದಾಸ ಅವರು ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ಎದುರು ಪ್ರತಿಭಟನೆ ನಡೆಸಿ, ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡದಂತೆ ಒತ್ತಾಯಿಸಿದರು.

ಪ್ರಧಾನಿಯವರೊಂದಿಗಿನ ಭೇಟಿಯ ನಂತರ ಅವರು ಟೆಂಪಲ್ ಟ್ರೀಸ್ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರೊಂದಿಗೆ ಘರ್ಷಣೆ ನಡೆಸಿದರು. ಗಾಯಗೊಂಡಿರುವ ಕನಿಷ್ಠ 16 ಜನರನ್ನು ಕೊಲಂಬೊ ನ್ಯಾಷನಲ್‌ ಪೊಲೀಸ್ ಠಾಣೆಗೆ ದಾಖಲಿಸಲಾಗಿದೆ.

ಸಾರ್ವಜನಿಕರು ಸಂಯಮದಿಂದ ವರ್ತಿಸುವಂತೆ ಒತ್ತಾಯಿಸಿ ಟ್ವೀಟ್ ಮಾಡಿದ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿರಿ: ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

“ಶ್ರೀಲಂಕಾದಲ್ಲಿ ಭಾವನಾತ್ಮಕತೆ ಹೆಚ್ಚುತ್ತಿದೆ. ನಮ್ಮ ಸಾಮಾನ್ಯ ಜನರು ಸಂಯಮದಿಂದ ವರ್ತಿಸುವಂತೆ ನಾನು ಒತ್ತಾಯಿಸುತ್ತೇನೆ. ಹಿಂಸಾಚಾರವು ಹಿಂಸೆಯನ್ನು ಮಾತ್ರ ಹುಟ್ಟುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ. ನಾವು ಹೊಂದಿರುವ ಆರ್ಥಿಕ ಬಿಕ್ಕಟ್ಟಿಗೆ ಆರ್ಥಿಕ ಪರಿಹಾರದ ಅಗತ್ಯವಿದೆ, ಈ ಆಡಳಿತವು ಪರಿಹರಿಸಲು ಬದ್ಧವಾಗಿದೆ” ಎಂದು ಮಹಿಂದಾ ತಿಳಿಸಿದ್ದಾರೆ.

ಮಹಿಂದಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ, “ಶಾಂತಿಯುತ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಲಾಗಿದೆ. ನಿಮ್ಮ ಕಚೇರಿಗೆ ಮೊದಲು ಭೇಟಿ ನೀಡಿದ ಗೂಂಡಾಗಳು, ಪುಂಡರು ಮತ್ತು ನಿಮ್ಮ ಬೆಂಬಲಿಗರಿಂದ ಮಾತ್ರ ಹಿಂಸಾಚಾರ ನಡೆದಿದೆ” ಎಂದು ಆರೋಪಿಸಿದ್ದಾರೆ.

ವಿದೇಶಿ ವಿನಿಮಯ ಕೊರತೆಯಿಂದ ಉದ್ಭವಿಸಿರುವ ಆರ್ಥಿಕ ಬಿಕ್ಕಟ್ಟಿಗೆ ಶ್ರೀಲಂಕಾ ತತ್ತರಿಸಿದೆ. ಇದು ಇಂಧನ, ಆಹಾರ ಮತ್ತು ಔಷಧಿಗಳಂತಹ ಅಗತ್ಯ ಸರಬರಾಜುಗಳ ಕೊರತೆಗೆ ಕಾರಣವಾಗಿದೆ. ಸರಕಾರ ತುರ್ತು ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...