Homeಮುಖಪುಟತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

- Advertisement -
- Advertisement -

ರಾಷ್ಟ್ರವ್ಯಾಪಿ ಪ್ರತಿಭಟನೆಯು ತೀವ್ರಗೊಳ್ಳುತ್ತಿದ್ದಂತೆ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ನಡುವೆ ಹೊಸ ಕ್ಯಾಬಿನೆಟ್‌ಗೆ ದಾರಿ ಮಾಡಿಕೊಡುವ ಸಾಧ್ಯತೆಯಿದೆ.

ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಅಧ್ಯಕ್ಷ ಗೊಟ್ಬಯಾ ರಾಜಪಕ್ಸೆ ಅವರು, “ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರವಾಗಿ ಅಧಿಕಾರದಿಂದ ಕೆಳಗಿಳಿಯಬೇಕು” ಎಂದು ಪ್ರಧಾನಿಗೆ ಮನವಿ ಮಾಡಿದ ಕೆಲವು ದಿನಗಳ ನಂತರ ಈ ನಿರ್ಧಾರ ಹೊರಬಂದಿದೆ ಎಂದು ಶ್ರೀಲಂಕಾದ ಡೈಲಿ ಮಿರರ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೀಗ ಪ್ರಧಾನಿ ರಾಜೀನಾಮೆ ನೀಡಿದ್ದು, ಅಧ್ಯಕ್ಷ ರಾಜಪಕ್ಸೆ ಅವರು ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳನ್ನು ಸರ್ವಪಕ್ಷಗಳ ಸಂಪುಟ ರಚನೆಗೆ ಆಹ್ವಾನಿಸುವ ನಿರೀಕ್ಷೆಯಿದೆ.

“ಮಧ್ಯಂತರ ಸರ್ಕಾರದಲ್ಲಿ ಪ್ರಧಾನಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ” ಎಂದು ವಿರೋಧ ಪಕ್ಷವಾದ ‘ಸಮಗಿ ಜನ ಬಲವೇಗಯ (ಎಸ್‌ಜೆಬಿ)’ ನಾಯಕ ಸಜಿತ್ ಪ್ರೇಮದಾಸ ಅವರು ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ಎದುರು ಪ್ರತಿಭಟನೆ ನಡೆಸಿ, ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡದಂತೆ ಒತ್ತಾಯಿಸಿದರು.

ಪ್ರಧಾನಿಯವರೊಂದಿಗಿನ ಭೇಟಿಯ ನಂತರ ಅವರು ಟೆಂಪಲ್ ಟ್ರೀಸ್ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರೊಂದಿಗೆ ಘರ್ಷಣೆ ನಡೆಸಿದರು. ಗಾಯಗೊಂಡಿರುವ ಕನಿಷ್ಠ 16 ಜನರನ್ನು ಕೊಲಂಬೊ ನ್ಯಾಷನಲ್‌ ಪೊಲೀಸ್ ಠಾಣೆಗೆ ದಾಖಲಿಸಲಾಗಿದೆ.

ಸಾರ್ವಜನಿಕರು ಸಂಯಮದಿಂದ ವರ್ತಿಸುವಂತೆ ಒತ್ತಾಯಿಸಿ ಟ್ವೀಟ್ ಮಾಡಿದ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿರಿ: ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

“ಶ್ರೀಲಂಕಾದಲ್ಲಿ ಭಾವನಾತ್ಮಕತೆ ಹೆಚ್ಚುತ್ತಿದೆ. ನಮ್ಮ ಸಾಮಾನ್ಯ ಜನರು ಸಂಯಮದಿಂದ ವರ್ತಿಸುವಂತೆ ನಾನು ಒತ್ತಾಯಿಸುತ್ತೇನೆ. ಹಿಂಸಾಚಾರವು ಹಿಂಸೆಯನ್ನು ಮಾತ್ರ ಹುಟ್ಟುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ. ನಾವು ಹೊಂದಿರುವ ಆರ್ಥಿಕ ಬಿಕ್ಕಟ್ಟಿಗೆ ಆರ್ಥಿಕ ಪರಿಹಾರದ ಅಗತ್ಯವಿದೆ, ಈ ಆಡಳಿತವು ಪರಿಹರಿಸಲು ಬದ್ಧವಾಗಿದೆ” ಎಂದು ಮಹಿಂದಾ ತಿಳಿಸಿದ್ದಾರೆ.

ಮಹಿಂದಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ, “ಶಾಂತಿಯುತ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಲಾಗಿದೆ. ನಿಮ್ಮ ಕಚೇರಿಗೆ ಮೊದಲು ಭೇಟಿ ನೀಡಿದ ಗೂಂಡಾಗಳು, ಪುಂಡರು ಮತ್ತು ನಿಮ್ಮ ಬೆಂಬಲಿಗರಿಂದ ಮಾತ್ರ ಹಿಂಸಾಚಾರ ನಡೆದಿದೆ” ಎಂದು ಆರೋಪಿಸಿದ್ದಾರೆ.

ವಿದೇಶಿ ವಿನಿಮಯ ಕೊರತೆಯಿಂದ ಉದ್ಭವಿಸಿರುವ ಆರ್ಥಿಕ ಬಿಕ್ಕಟ್ಟಿಗೆ ಶ್ರೀಲಂಕಾ ತತ್ತರಿಸಿದೆ. ಇದು ಇಂಧನ, ಆಹಾರ ಮತ್ತು ಔಷಧಿಗಳಂತಹ ಅಗತ್ಯ ಸರಬರಾಜುಗಳ ಕೊರತೆಗೆ ಕಾರಣವಾಗಿದೆ. ಸರಕಾರ ತುರ್ತು ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...