Homeಮುಖಪುಟತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

- Advertisement -
- Advertisement -

ರಾಷ್ಟ್ರವ್ಯಾಪಿ ಪ್ರತಿಭಟನೆಯು ತೀವ್ರಗೊಳ್ಳುತ್ತಿದ್ದಂತೆ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ನಡುವೆ ಹೊಸ ಕ್ಯಾಬಿನೆಟ್‌ಗೆ ದಾರಿ ಮಾಡಿಕೊಡುವ ಸಾಧ್ಯತೆಯಿದೆ.

ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಅಧ್ಯಕ್ಷ ಗೊಟ್ಬಯಾ ರಾಜಪಕ್ಸೆ ಅವರು, “ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರವಾಗಿ ಅಧಿಕಾರದಿಂದ ಕೆಳಗಿಳಿಯಬೇಕು” ಎಂದು ಪ್ರಧಾನಿಗೆ ಮನವಿ ಮಾಡಿದ ಕೆಲವು ದಿನಗಳ ನಂತರ ಈ ನಿರ್ಧಾರ ಹೊರಬಂದಿದೆ ಎಂದು ಶ್ರೀಲಂಕಾದ ಡೈಲಿ ಮಿರರ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೀಗ ಪ್ರಧಾನಿ ರಾಜೀನಾಮೆ ನೀಡಿದ್ದು, ಅಧ್ಯಕ್ಷ ರಾಜಪಕ್ಸೆ ಅವರು ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳನ್ನು ಸರ್ವಪಕ್ಷಗಳ ಸಂಪುಟ ರಚನೆಗೆ ಆಹ್ವಾನಿಸುವ ನಿರೀಕ್ಷೆಯಿದೆ.

“ಮಧ್ಯಂತರ ಸರ್ಕಾರದಲ್ಲಿ ಪ್ರಧಾನಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ” ಎಂದು ವಿರೋಧ ಪಕ್ಷವಾದ ‘ಸಮಗಿ ಜನ ಬಲವೇಗಯ (ಎಸ್‌ಜೆಬಿ)’ ನಾಯಕ ಸಜಿತ್ ಪ್ರೇಮದಾಸ ಅವರು ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ಎದುರು ಪ್ರತಿಭಟನೆ ನಡೆಸಿ, ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡದಂತೆ ಒತ್ತಾಯಿಸಿದರು.

ಪ್ರಧಾನಿಯವರೊಂದಿಗಿನ ಭೇಟಿಯ ನಂತರ ಅವರು ಟೆಂಪಲ್ ಟ್ರೀಸ್ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರೊಂದಿಗೆ ಘರ್ಷಣೆ ನಡೆಸಿದರು. ಗಾಯಗೊಂಡಿರುವ ಕನಿಷ್ಠ 16 ಜನರನ್ನು ಕೊಲಂಬೊ ನ್ಯಾಷನಲ್‌ ಪೊಲೀಸ್ ಠಾಣೆಗೆ ದಾಖಲಿಸಲಾಗಿದೆ.

ಸಾರ್ವಜನಿಕರು ಸಂಯಮದಿಂದ ವರ್ತಿಸುವಂತೆ ಒತ್ತಾಯಿಸಿ ಟ್ವೀಟ್ ಮಾಡಿದ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿರಿ: ಆಸ್ಟ್ರೇಲಿಯಾ ಸೇರಿದಂತೆ ಮೂರು ದೇಶಗಳ ರಾಯಭಾರ ಕಚೇರಿಗಳನ್ನು ಮುಚ್ಚಿದ ಶ್ರೀಲಂಕಾ

“ಶ್ರೀಲಂಕಾದಲ್ಲಿ ಭಾವನಾತ್ಮಕತೆ ಹೆಚ್ಚುತ್ತಿದೆ. ನಮ್ಮ ಸಾಮಾನ್ಯ ಜನರು ಸಂಯಮದಿಂದ ವರ್ತಿಸುವಂತೆ ನಾನು ಒತ್ತಾಯಿಸುತ್ತೇನೆ. ಹಿಂಸಾಚಾರವು ಹಿಂಸೆಯನ್ನು ಮಾತ್ರ ಹುಟ್ಟುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ. ನಾವು ಹೊಂದಿರುವ ಆರ್ಥಿಕ ಬಿಕ್ಕಟ್ಟಿಗೆ ಆರ್ಥಿಕ ಪರಿಹಾರದ ಅಗತ್ಯವಿದೆ, ಈ ಆಡಳಿತವು ಪರಿಹರಿಸಲು ಬದ್ಧವಾಗಿದೆ” ಎಂದು ಮಹಿಂದಾ ತಿಳಿಸಿದ್ದಾರೆ.

ಮಹಿಂದಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ, “ಶಾಂತಿಯುತ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಲಾಗಿದೆ. ನಿಮ್ಮ ಕಚೇರಿಗೆ ಮೊದಲು ಭೇಟಿ ನೀಡಿದ ಗೂಂಡಾಗಳು, ಪುಂಡರು ಮತ್ತು ನಿಮ್ಮ ಬೆಂಬಲಿಗರಿಂದ ಮಾತ್ರ ಹಿಂಸಾಚಾರ ನಡೆದಿದೆ” ಎಂದು ಆರೋಪಿಸಿದ್ದಾರೆ.

ವಿದೇಶಿ ವಿನಿಮಯ ಕೊರತೆಯಿಂದ ಉದ್ಭವಿಸಿರುವ ಆರ್ಥಿಕ ಬಿಕ್ಕಟ್ಟಿಗೆ ಶ್ರೀಲಂಕಾ ತತ್ತರಿಸಿದೆ. ಇದು ಇಂಧನ, ಆಹಾರ ಮತ್ತು ಔಷಧಿಗಳಂತಹ ಅಗತ್ಯ ಸರಬರಾಜುಗಳ ಕೊರತೆಗೆ ಕಾರಣವಾಗಿದೆ. ಸರಕಾರ ತುರ್ತು ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....