Homeಮುಖಪುಟಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

- Advertisement -
- Advertisement -

ಇಸ್ರೇಲ್‌ಗೆ 10 ಸಾವಿರ ಕಾರ್ಮಿಕರನ್ನು ಕಳುಹಿಸಿಕೊಡುವ ಶ್ರೀಲಂಕಾ ಸರ್ಕಾರದ ಕ್ರಮವನ್ನು ಖಂಡಿಸಿ ಅಲ್ಲಿನ ಕಾರ್ಮಿಕ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ.

ಕಳೆದ ಅಕ್ಟೋಬರ್‌ನಿಂದ ಗಾಝಾದೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿರುವ ಶ್ರೀಲಂಕನ್ನರು, ಗಾಝಾದಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸಿಕೊಡಲು ನಾಚಿಕೆಯಾಗುವುದಿಲ್ಲವೇ? ಎಂದು ತಮ್ಮ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದ ಬಳಿಕ ಲಕ್ಷಾಂತರ ಪ್ಯಾಲೆಸ್ತೀನಿ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವ ಇಸ್ರೇಲ್, ಏಷ್ಯಾದ ದೇಶಗಳಾದ ಭಾರತ, ಶ್ರೀಲಂಕಾ ಮತ್ತು ನೇಪಾಳದಿಂದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ.

ತ್ವರಿತವಾಗಿ ಸುಮಾರು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ಕಳುಹಿಸಿಕೊಡುವುದಾಗಿ ಶ್ರೀಲಂಕಾ ಸರ್ಕಾರ ಕಳೆದ ನವೆಂಬರ್‌ನಲ್ಲಿ ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈ ಒಪ್ಪಂದದ ಅನುಸಾರ ಡಿಸೆಂಬರ್ ಆರಂಭದಲ್ಲಿ ಕಾರ್ಮಿಕರ ಮೊದಲ ತಂಡ ಇಸ್ರೇಲ್‌ಗೆ ಪ್ರಯಾಣ ಬೆಳೆಸಿದೆ. ಸರ್ಕಾರದ ಮಾತು ನಂಬಿ ಹೊಟ್ಟೆಪಾಡಿಗಾಗಿ ದೂರದ ದೇಶಕ್ಕೆ ತೆರಳಿರುವ ಈ ಬಡ ಕಾರ್ಮಿಕರ ಸುರಕ್ಷತೆಯ ಕುರಿತು ಕಳವಳ ಹೆಚ್ಚಾಗಿದೆ.

ಕಳೆದ ವರ್ಷ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಶ್ರೀಲಂಕಾ ತಮ್ಮ ದೇಶದ ಜನರಿಗೆ ಉದ್ಯೋಗ ಕೊಡುವತ್ತ ಹೆಚ್ಚಿನ ಒತ್ತು ನೀಡುತ್ತಿದೆ. ಇದರ ಭಾಗವಾಗಿ ವಿದೇಶಗಳಿಗೆ ಕಾರ್ಮಿಕರನ್ನು ಕಳುಹಿಸಿಕೊಡಲು ತುದಿಗಾಲಲ್ಲಿ ನಿಂತಿದೆ. ಆದರೆ, ಯುದ್ಧ ಪೀಡಿತ ಇಸ್ರೇಲ್‌ಗೆ ಏನೂ ಅರಿಯ ಬಡ ಕಾರ್ಮಿಕರನ್ನು ಕಳುಹಿಸಿಕೊಟ್ಟಿರುವ ಸರ್ಕಾರದ ವಿರುದ್ಧ ಶ್ರೀಲಂಕಾದ ಕಾರ್ಮಿಕ ಮತ್ತು ಮಾನವೀಯ ಸಂಘಟನೆಗಳು ಸಿಡಿದೆದ್ದಿವೆ.

ಶ್ರೀಲಂಕಾದಲ್ಲಿ ಗಾಝಾ ಪರ ಪ್ರತಿಭಟನೆಗಳನ್ನು ಆಯೋಜಿಸುವ ಮಾನವ ಹಕ್ಕುಗಳ ಕಾರ್ಯರ್ತ ಅಬ್ದುಲ್ ಸರೂರ್ ಅವರು, ಶ್ರೀಲಂಕಾ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿಕೊಡುವುದು ಜನಾಂಗೀಯ ಸಂಘರ್ಷಕ್ಕೆ ಎಡೆ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಈಗಾಗಲೇ 9 ಲಕ್ಷ ಶ್ರೀಲಂಕನ್ ಕಾರ್ಮಿಕರಿದ್ದಾರೆ. ಇಸ್ರೇಲ್‌ನ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ತೋರಿಸಿ 10 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅವರನ್ನು ಸುರಕ್ಷಿತವಾಗಿ ಕಳುಹಿಸಿಕೊಡಲಾಗುವುದು ಎಂದು ಶ್ರೀಲಂಕಾದ ಕಾರ್ಮಿಕ ಸಚಿವ ಮನೂಷ ನನಯಕ್ಕರ ತಿಳಿಸಿದ್ದಾರೆ.

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಲು ಸಿದ್ದತೆ, ವಿರೋಧ

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಿಕೊಡುವಂತೆ ಇಸ್ರೇಲ್ ಬೇಡಿಕೆ ಇಟ್ಟಿದೆ. ಇದಕ್ಕೆ ಬಹಳ ಉತ್ಸಾದಿಂದ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಮತ್ತು ಹರಿಯಾಣ ಬಿಜೆಪಿ ಸರ್ಕಾರಗಳು, ಈಗಾಗಲೇ ಕಾರ್ಮಿಕರನ್ನು ಕಳುಹಿಸಿಕೊಡಲು ಮುಂದಾಗಿವೆ.

ಹರಿಯಾಣ ಸರ್ಕಾರದ ಕೌಶಲ್ ರೋಝ್‌ಗಾರ್ ನಿಗಮ್ (ಹೆಚ್‌ಕೆಆರ್‌ಎನ್‌) ಕಳೆದ ತಿಂಗಳು ಇಸ್ರೇಲ್‌ಗೆ ಕಳುಹಿಸಲು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ನೇಮಿಸಿಕೊಳ್ಳಲು ಪ್ರಕಟನೆ ಹೊರಡಿಸಿತ್ತು.

ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮದ ಮೂಲಕ 10 ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಲು ಆಯ್ಕೆ ಮಾಡುವ ಸಂಬಂಧ ಉತ್ತರ ಪ್ರದೇಶ ಸರ್ಕಾರ ಕೂಡ ಅರ್ಜಿ ಆಹ್ವಾನಿಸಿದೆ. ಅಲೀಘರ್, ಹತ್ರಾಸ್, ಕಾಸ್‌ಗಂಜ್, ಇತಾಹ್ ಜಿಲ್ಲೆಗಳಿಂದ ಮೂದಲ ಹಂತದಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ ಕಡಿಮೆ ಇರುವ, ಆಧುನಿಕ ವಿಚಾರಗಳ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲ ಬಡ, ಮುಗ್ದ ಕಾರ್ಮಿಕರನ್ನು ದೂರದ ಇಸ್ರೇಲ್‌ಗೆ ಕಳುಹಿಸಿಕೊಡುವುದಕ್ಕೆ ಭಾರತದ ಕಾರ್ಮಿಕ ಸಂಘಟನೆಗಳು ಮತ್ತು ಮಾನವ ಹಕ್ಕು ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಇಸ್ರೇಲ್‌ ರಾಯಭಾರಿ ಕಚೇರಿ ಬಳಿ ಸ್ಪೋಟ ಪ್ರಕರಣ: ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...