Homeಮುಖಪುಟಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

- Advertisement -
- Advertisement -

ಇಸ್ರೇಲ್‌ಗೆ 10 ಸಾವಿರ ಕಾರ್ಮಿಕರನ್ನು ಕಳುಹಿಸಿಕೊಡುವ ಶ್ರೀಲಂಕಾ ಸರ್ಕಾರದ ಕ್ರಮವನ್ನು ಖಂಡಿಸಿ ಅಲ್ಲಿನ ಕಾರ್ಮಿಕ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ.

ಕಳೆದ ಅಕ್ಟೋಬರ್‌ನಿಂದ ಗಾಝಾದೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿರುವ ಶ್ರೀಲಂಕನ್ನರು, ಗಾಝಾದಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸಿಕೊಡಲು ನಾಚಿಕೆಯಾಗುವುದಿಲ್ಲವೇ? ಎಂದು ತಮ್ಮ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದ ಬಳಿಕ ಲಕ್ಷಾಂತರ ಪ್ಯಾಲೆಸ್ತೀನಿ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವ ಇಸ್ರೇಲ್, ಏಷ್ಯಾದ ದೇಶಗಳಾದ ಭಾರತ, ಶ್ರೀಲಂಕಾ ಮತ್ತು ನೇಪಾಳದಿಂದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ.

ತ್ವರಿತವಾಗಿ ಸುಮಾರು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ಕಳುಹಿಸಿಕೊಡುವುದಾಗಿ ಶ್ರೀಲಂಕಾ ಸರ್ಕಾರ ಕಳೆದ ನವೆಂಬರ್‌ನಲ್ಲಿ ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈ ಒಪ್ಪಂದದ ಅನುಸಾರ ಡಿಸೆಂಬರ್ ಆರಂಭದಲ್ಲಿ ಕಾರ್ಮಿಕರ ಮೊದಲ ತಂಡ ಇಸ್ರೇಲ್‌ಗೆ ಪ್ರಯಾಣ ಬೆಳೆಸಿದೆ. ಸರ್ಕಾರದ ಮಾತು ನಂಬಿ ಹೊಟ್ಟೆಪಾಡಿಗಾಗಿ ದೂರದ ದೇಶಕ್ಕೆ ತೆರಳಿರುವ ಈ ಬಡ ಕಾರ್ಮಿಕರ ಸುರಕ್ಷತೆಯ ಕುರಿತು ಕಳವಳ ಹೆಚ್ಚಾಗಿದೆ.

ಕಳೆದ ವರ್ಷ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಶ್ರೀಲಂಕಾ ತಮ್ಮ ದೇಶದ ಜನರಿಗೆ ಉದ್ಯೋಗ ಕೊಡುವತ್ತ ಹೆಚ್ಚಿನ ಒತ್ತು ನೀಡುತ್ತಿದೆ. ಇದರ ಭಾಗವಾಗಿ ವಿದೇಶಗಳಿಗೆ ಕಾರ್ಮಿಕರನ್ನು ಕಳುಹಿಸಿಕೊಡಲು ತುದಿಗಾಲಲ್ಲಿ ನಿಂತಿದೆ. ಆದರೆ, ಯುದ್ಧ ಪೀಡಿತ ಇಸ್ರೇಲ್‌ಗೆ ಏನೂ ಅರಿಯ ಬಡ ಕಾರ್ಮಿಕರನ್ನು ಕಳುಹಿಸಿಕೊಟ್ಟಿರುವ ಸರ್ಕಾರದ ವಿರುದ್ಧ ಶ್ರೀಲಂಕಾದ ಕಾರ್ಮಿಕ ಮತ್ತು ಮಾನವೀಯ ಸಂಘಟನೆಗಳು ಸಿಡಿದೆದ್ದಿವೆ.

ಶ್ರೀಲಂಕಾದಲ್ಲಿ ಗಾಝಾ ಪರ ಪ್ರತಿಭಟನೆಗಳನ್ನು ಆಯೋಜಿಸುವ ಮಾನವ ಹಕ್ಕುಗಳ ಕಾರ್ಯರ್ತ ಅಬ್ದುಲ್ ಸರೂರ್ ಅವರು, ಶ್ರೀಲಂಕಾ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿಕೊಡುವುದು ಜನಾಂಗೀಯ ಸಂಘರ್ಷಕ್ಕೆ ಎಡೆ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಈಗಾಗಲೇ 9 ಲಕ್ಷ ಶ್ರೀಲಂಕನ್ ಕಾರ್ಮಿಕರಿದ್ದಾರೆ. ಇಸ್ರೇಲ್‌ನ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ತೋರಿಸಿ 10 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅವರನ್ನು ಸುರಕ್ಷಿತವಾಗಿ ಕಳುಹಿಸಿಕೊಡಲಾಗುವುದು ಎಂದು ಶ್ರೀಲಂಕಾದ ಕಾರ್ಮಿಕ ಸಚಿವ ಮನೂಷ ನನಯಕ್ಕರ ತಿಳಿಸಿದ್ದಾರೆ.

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಲು ಸಿದ್ದತೆ, ವಿರೋಧ

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಿಕೊಡುವಂತೆ ಇಸ್ರೇಲ್ ಬೇಡಿಕೆ ಇಟ್ಟಿದೆ. ಇದಕ್ಕೆ ಬಹಳ ಉತ್ಸಾದಿಂದ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಮತ್ತು ಹರಿಯಾಣ ಬಿಜೆಪಿ ಸರ್ಕಾರಗಳು, ಈಗಾಗಲೇ ಕಾರ್ಮಿಕರನ್ನು ಕಳುಹಿಸಿಕೊಡಲು ಮುಂದಾಗಿವೆ.

ಹರಿಯಾಣ ಸರ್ಕಾರದ ಕೌಶಲ್ ರೋಝ್‌ಗಾರ್ ನಿಗಮ್ (ಹೆಚ್‌ಕೆಆರ್‌ಎನ್‌) ಕಳೆದ ತಿಂಗಳು ಇಸ್ರೇಲ್‌ಗೆ ಕಳುಹಿಸಲು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ನೇಮಿಸಿಕೊಳ್ಳಲು ಪ್ರಕಟನೆ ಹೊರಡಿಸಿತ್ತು.

ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮದ ಮೂಲಕ 10 ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಲು ಆಯ್ಕೆ ಮಾಡುವ ಸಂಬಂಧ ಉತ್ತರ ಪ್ರದೇಶ ಸರ್ಕಾರ ಕೂಡ ಅರ್ಜಿ ಆಹ್ವಾನಿಸಿದೆ. ಅಲೀಘರ್, ಹತ್ರಾಸ್, ಕಾಸ್‌ಗಂಜ್, ಇತಾಹ್ ಜಿಲ್ಲೆಗಳಿಂದ ಮೂದಲ ಹಂತದಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ ಕಡಿಮೆ ಇರುವ, ಆಧುನಿಕ ವಿಚಾರಗಳ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲ ಬಡ, ಮುಗ್ದ ಕಾರ್ಮಿಕರನ್ನು ದೂರದ ಇಸ್ರೇಲ್‌ಗೆ ಕಳುಹಿಸಿಕೊಡುವುದಕ್ಕೆ ಭಾರತದ ಕಾರ್ಮಿಕ ಸಂಘಟನೆಗಳು ಮತ್ತು ಮಾನವ ಹಕ್ಕು ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಇಸ್ರೇಲ್‌ ರಾಯಭಾರಿ ಕಚೇರಿ ಬಳಿ ಸ್ಪೋಟ ಪ್ರಕರಣ: ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...