Homeಮುಖಪುಟಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

- Advertisement -
- Advertisement -

ಇಸ್ರೇಲ್‌ಗೆ 10 ಸಾವಿರ ಕಾರ್ಮಿಕರನ್ನು ಕಳುಹಿಸಿಕೊಡುವ ಶ್ರೀಲಂಕಾ ಸರ್ಕಾರದ ಕ್ರಮವನ್ನು ಖಂಡಿಸಿ ಅಲ್ಲಿನ ಕಾರ್ಮಿಕ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ.

ಕಳೆದ ಅಕ್ಟೋಬರ್‌ನಿಂದ ಗಾಝಾದೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿರುವ ಶ್ರೀಲಂಕನ್ನರು, ಗಾಝಾದಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸಿಕೊಡಲು ನಾಚಿಕೆಯಾಗುವುದಿಲ್ಲವೇ? ಎಂದು ತಮ್ಮ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದ ಬಳಿಕ ಲಕ್ಷಾಂತರ ಪ್ಯಾಲೆಸ್ತೀನಿ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವ ಇಸ್ರೇಲ್, ಏಷ್ಯಾದ ದೇಶಗಳಾದ ಭಾರತ, ಶ್ರೀಲಂಕಾ ಮತ್ತು ನೇಪಾಳದಿಂದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ.

ತ್ವರಿತವಾಗಿ ಸುಮಾರು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ಕಳುಹಿಸಿಕೊಡುವುದಾಗಿ ಶ್ರೀಲಂಕಾ ಸರ್ಕಾರ ಕಳೆದ ನವೆಂಬರ್‌ನಲ್ಲಿ ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈ ಒಪ್ಪಂದದ ಅನುಸಾರ ಡಿಸೆಂಬರ್ ಆರಂಭದಲ್ಲಿ ಕಾರ್ಮಿಕರ ಮೊದಲ ತಂಡ ಇಸ್ರೇಲ್‌ಗೆ ಪ್ರಯಾಣ ಬೆಳೆಸಿದೆ. ಸರ್ಕಾರದ ಮಾತು ನಂಬಿ ಹೊಟ್ಟೆಪಾಡಿಗಾಗಿ ದೂರದ ದೇಶಕ್ಕೆ ತೆರಳಿರುವ ಈ ಬಡ ಕಾರ್ಮಿಕರ ಸುರಕ್ಷತೆಯ ಕುರಿತು ಕಳವಳ ಹೆಚ್ಚಾಗಿದೆ.

ಕಳೆದ ವರ್ಷ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಶ್ರೀಲಂಕಾ ತಮ್ಮ ದೇಶದ ಜನರಿಗೆ ಉದ್ಯೋಗ ಕೊಡುವತ್ತ ಹೆಚ್ಚಿನ ಒತ್ತು ನೀಡುತ್ತಿದೆ. ಇದರ ಭಾಗವಾಗಿ ವಿದೇಶಗಳಿಗೆ ಕಾರ್ಮಿಕರನ್ನು ಕಳುಹಿಸಿಕೊಡಲು ತುದಿಗಾಲಲ್ಲಿ ನಿಂತಿದೆ. ಆದರೆ, ಯುದ್ಧ ಪೀಡಿತ ಇಸ್ರೇಲ್‌ಗೆ ಏನೂ ಅರಿಯ ಬಡ ಕಾರ್ಮಿಕರನ್ನು ಕಳುಹಿಸಿಕೊಟ್ಟಿರುವ ಸರ್ಕಾರದ ವಿರುದ್ಧ ಶ್ರೀಲಂಕಾದ ಕಾರ್ಮಿಕ ಮತ್ತು ಮಾನವೀಯ ಸಂಘಟನೆಗಳು ಸಿಡಿದೆದ್ದಿವೆ.

ಶ್ರೀಲಂಕಾದಲ್ಲಿ ಗಾಝಾ ಪರ ಪ್ರತಿಭಟನೆಗಳನ್ನು ಆಯೋಜಿಸುವ ಮಾನವ ಹಕ್ಕುಗಳ ಕಾರ್ಯರ್ತ ಅಬ್ದುಲ್ ಸರೂರ್ ಅವರು, ಶ್ರೀಲಂಕಾ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿಕೊಡುವುದು ಜನಾಂಗೀಯ ಸಂಘರ್ಷಕ್ಕೆ ಎಡೆ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಈಗಾಗಲೇ 9 ಲಕ್ಷ ಶ್ರೀಲಂಕನ್ ಕಾರ್ಮಿಕರಿದ್ದಾರೆ. ಇಸ್ರೇಲ್‌ನ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ತೋರಿಸಿ 10 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅವರನ್ನು ಸುರಕ್ಷಿತವಾಗಿ ಕಳುಹಿಸಿಕೊಡಲಾಗುವುದು ಎಂದು ಶ್ರೀಲಂಕಾದ ಕಾರ್ಮಿಕ ಸಚಿವ ಮನೂಷ ನನಯಕ್ಕರ ತಿಳಿಸಿದ್ದಾರೆ.

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಲು ಸಿದ್ದತೆ, ವಿರೋಧ

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಿಕೊಡುವಂತೆ ಇಸ್ರೇಲ್ ಬೇಡಿಕೆ ಇಟ್ಟಿದೆ. ಇದಕ್ಕೆ ಬಹಳ ಉತ್ಸಾದಿಂದ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಮತ್ತು ಹರಿಯಾಣ ಬಿಜೆಪಿ ಸರ್ಕಾರಗಳು, ಈಗಾಗಲೇ ಕಾರ್ಮಿಕರನ್ನು ಕಳುಹಿಸಿಕೊಡಲು ಮುಂದಾಗಿವೆ.

ಹರಿಯಾಣ ಸರ್ಕಾರದ ಕೌಶಲ್ ರೋಝ್‌ಗಾರ್ ನಿಗಮ್ (ಹೆಚ್‌ಕೆಆರ್‌ಎನ್‌) ಕಳೆದ ತಿಂಗಳು ಇಸ್ರೇಲ್‌ಗೆ ಕಳುಹಿಸಲು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ನೇಮಿಸಿಕೊಳ್ಳಲು ಪ್ರಕಟನೆ ಹೊರಡಿಸಿತ್ತು.

ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮದ ಮೂಲಕ 10 ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಲು ಆಯ್ಕೆ ಮಾಡುವ ಸಂಬಂಧ ಉತ್ತರ ಪ್ರದೇಶ ಸರ್ಕಾರ ಕೂಡ ಅರ್ಜಿ ಆಹ್ವಾನಿಸಿದೆ. ಅಲೀಘರ್, ಹತ್ರಾಸ್, ಕಾಸ್‌ಗಂಜ್, ಇತಾಹ್ ಜಿಲ್ಲೆಗಳಿಂದ ಮೂದಲ ಹಂತದಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ ಕಡಿಮೆ ಇರುವ, ಆಧುನಿಕ ವಿಚಾರಗಳ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲ ಬಡ, ಮುಗ್ದ ಕಾರ್ಮಿಕರನ್ನು ದೂರದ ಇಸ್ರೇಲ್‌ಗೆ ಕಳುಹಿಸಿಕೊಡುವುದಕ್ಕೆ ಭಾರತದ ಕಾರ್ಮಿಕ ಸಂಘಟನೆಗಳು ಮತ್ತು ಮಾನವ ಹಕ್ಕು ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಇಸ್ರೇಲ್‌ ರಾಯಭಾರಿ ಕಚೇರಿ ಬಳಿ ಸ್ಪೋಟ ಪ್ರಕರಣ: ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...