Homeಮುಖಪುಟಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

- Advertisement -
- Advertisement -

ಇಸ್ರೇಲ್‌ಗೆ 10 ಸಾವಿರ ಕಾರ್ಮಿಕರನ್ನು ಕಳುಹಿಸಿಕೊಡುವ ಶ್ರೀಲಂಕಾ ಸರ್ಕಾರದ ಕ್ರಮವನ್ನು ಖಂಡಿಸಿ ಅಲ್ಲಿನ ಕಾರ್ಮಿಕ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ.

ಕಳೆದ ಅಕ್ಟೋಬರ್‌ನಿಂದ ಗಾಝಾದೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿರುವ ಶ್ರೀಲಂಕನ್ನರು, ಗಾಝಾದಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸಿಕೊಡಲು ನಾಚಿಕೆಯಾಗುವುದಿಲ್ಲವೇ? ಎಂದು ತಮ್ಮ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದ ಬಳಿಕ ಲಕ್ಷಾಂತರ ಪ್ಯಾಲೆಸ್ತೀನಿ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವ ಇಸ್ರೇಲ್, ಏಷ್ಯಾದ ದೇಶಗಳಾದ ಭಾರತ, ಶ್ರೀಲಂಕಾ ಮತ್ತು ನೇಪಾಳದಿಂದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ.

ತ್ವರಿತವಾಗಿ ಸುಮಾರು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ಕಳುಹಿಸಿಕೊಡುವುದಾಗಿ ಶ್ರೀಲಂಕಾ ಸರ್ಕಾರ ಕಳೆದ ನವೆಂಬರ್‌ನಲ್ಲಿ ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈ ಒಪ್ಪಂದದ ಅನುಸಾರ ಡಿಸೆಂಬರ್ ಆರಂಭದಲ್ಲಿ ಕಾರ್ಮಿಕರ ಮೊದಲ ತಂಡ ಇಸ್ರೇಲ್‌ಗೆ ಪ್ರಯಾಣ ಬೆಳೆಸಿದೆ. ಸರ್ಕಾರದ ಮಾತು ನಂಬಿ ಹೊಟ್ಟೆಪಾಡಿಗಾಗಿ ದೂರದ ದೇಶಕ್ಕೆ ತೆರಳಿರುವ ಈ ಬಡ ಕಾರ್ಮಿಕರ ಸುರಕ್ಷತೆಯ ಕುರಿತು ಕಳವಳ ಹೆಚ್ಚಾಗಿದೆ.

ಕಳೆದ ವರ್ಷ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಶ್ರೀಲಂಕಾ ತಮ್ಮ ದೇಶದ ಜನರಿಗೆ ಉದ್ಯೋಗ ಕೊಡುವತ್ತ ಹೆಚ್ಚಿನ ಒತ್ತು ನೀಡುತ್ತಿದೆ. ಇದರ ಭಾಗವಾಗಿ ವಿದೇಶಗಳಿಗೆ ಕಾರ್ಮಿಕರನ್ನು ಕಳುಹಿಸಿಕೊಡಲು ತುದಿಗಾಲಲ್ಲಿ ನಿಂತಿದೆ. ಆದರೆ, ಯುದ್ಧ ಪೀಡಿತ ಇಸ್ರೇಲ್‌ಗೆ ಏನೂ ಅರಿಯ ಬಡ ಕಾರ್ಮಿಕರನ್ನು ಕಳುಹಿಸಿಕೊಟ್ಟಿರುವ ಸರ್ಕಾರದ ವಿರುದ್ಧ ಶ್ರೀಲಂಕಾದ ಕಾರ್ಮಿಕ ಮತ್ತು ಮಾನವೀಯ ಸಂಘಟನೆಗಳು ಸಿಡಿದೆದ್ದಿವೆ.

ಶ್ರೀಲಂಕಾದಲ್ಲಿ ಗಾಝಾ ಪರ ಪ್ರತಿಭಟನೆಗಳನ್ನು ಆಯೋಜಿಸುವ ಮಾನವ ಹಕ್ಕುಗಳ ಕಾರ್ಯರ್ತ ಅಬ್ದುಲ್ ಸರೂರ್ ಅವರು, ಶ್ರೀಲಂಕಾ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿಕೊಡುವುದು ಜನಾಂಗೀಯ ಸಂಘರ್ಷಕ್ಕೆ ಎಡೆ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಈಗಾಗಲೇ 9 ಲಕ್ಷ ಶ್ರೀಲಂಕನ್ ಕಾರ್ಮಿಕರಿದ್ದಾರೆ. ಇಸ್ರೇಲ್‌ನ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ತೋರಿಸಿ 10 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅವರನ್ನು ಸುರಕ್ಷಿತವಾಗಿ ಕಳುಹಿಸಿಕೊಡಲಾಗುವುದು ಎಂದು ಶ್ರೀಲಂಕಾದ ಕಾರ್ಮಿಕ ಸಚಿವ ಮನೂಷ ನನಯಕ್ಕರ ತಿಳಿಸಿದ್ದಾರೆ.

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಲು ಸಿದ್ದತೆ, ವಿರೋಧ

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಿಕೊಡುವಂತೆ ಇಸ್ರೇಲ್ ಬೇಡಿಕೆ ಇಟ್ಟಿದೆ. ಇದಕ್ಕೆ ಬಹಳ ಉತ್ಸಾದಿಂದ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಮತ್ತು ಹರಿಯಾಣ ಬಿಜೆಪಿ ಸರ್ಕಾರಗಳು, ಈಗಾಗಲೇ ಕಾರ್ಮಿಕರನ್ನು ಕಳುಹಿಸಿಕೊಡಲು ಮುಂದಾಗಿವೆ.

ಹರಿಯಾಣ ಸರ್ಕಾರದ ಕೌಶಲ್ ರೋಝ್‌ಗಾರ್ ನಿಗಮ್ (ಹೆಚ್‌ಕೆಆರ್‌ಎನ್‌) ಕಳೆದ ತಿಂಗಳು ಇಸ್ರೇಲ್‌ಗೆ ಕಳುಹಿಸಲು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ನೇಮಿಸಿಕೊಳ್ಳಲು ಪ್ರಕಟನೆ ಹೊರಡಿಸಿತ್ತು.

ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮದ ಮೂಲಕ 10 ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಲು ಆಯ್ಕೆ ಮಾಡುವ ಸಂಬಂಧ ಉತ್ತರ ಪ್ರದೇಶ ಸರ್ಕಾರ ಕೂಡ ಅರ್ಜಿ ಆಹ್ವಾನಿಸಿದೆ. ಅಲೀಘರ್, ಹತ್ರಾಸ್, ಕಾಸ್‌ಗಂಜ್, ಇತಾಹ್ ಜಿಲ್ಲೆಗಳಿಂದ ಮೂದಲ ಹಂತದಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ ಕಡಿಮೆ ಇರುವ, ಆಧುನಿಕ ವಿಚಾರಗಳ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲ ಬಡ, ಮುಗ್ದ ಕಾರ್ಮಿಕರನ್ನು ದೂರದ ಇಸ್ರೇಲ್‌ಗೆ ಕಳುಹಿಸಿಕೊಡುವುದಕ್ಕೆ ಭಾರತದ ಕಾರ್ಮಿಕ ಸಂಘಟನೆಗಳು ಮತ್ತು ಮಾನವ ಹಕ್ಕು ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಇಸ್ರೇಲ್‌ ರಾಯಭಾರಿ ಕಚೇರಿ ಬಳಿ ಸ್ಪೋಟ ಪ್ರಕರಣ: ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...