Homeಮುಖಪುಟಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

- Advertisement -
- Advertisement -

ಇಸ್ರೇಲ್‌ಗೆ 10 ಸಾವಿರ ಕಾರ್ಮಿಕರನ್ನು ಕಳುಹಿಸಿಕೊಡುವ ಶ್ರೀಲಂಕಾ ಸರ್ಕಾರದ ಕ್ರಮವನ್ನು ಖಂಡಿಸಿ ಅಲ್ಲಿನ ಕಾರ್ಮಿಕ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ.

ಕಳೆದ ಅಕ್ಟೋಬರ್‌ನಿಂದ ಗಾಝಾದೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿರುವ ಶ್ರೀಲಂಕನ್ನರು, ಗಾಝಾದಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸಿಕೊಡಲು ನಾಚಿಕೆಯಾಗುವುದಿಲ್ಲವೇ? ಎಂದು ತಮ್ಮ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದ ಬಳಿಕ ಲಕ್ಷಾಂತರ ಪ್ಯಾಲೆಸ್ತೀನಿ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವ ಇಸ್ರೇಲ್, ಏಷ್ಯಾದ ದೇಶಗಳಾದ ಭಾರತ, ಶ್ರೀಲಂಕಾ ಮತ್ತು ನೇಪಾಳದಿಂದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ.

ತ್ವರಿತವಾಗಿ ಸುಮಾರು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ಕಳುಹಿಸಿಕೊಡುವುದಾಗಿ ಶ್ರೀಲಂಕಾ ಸರ್ಕಾರ ಕಳೆದ ನವೆಂಬರ್‌ನಲ್ಲಿ ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈ ಒಪ್ಪಂದದ ಅನುಸಾರ ಡಿಸೆಂಬರ್ ಆರಂಭದಲ್ಲಿ ಕಾರ್ಮಿಕರ ಮೊದಲ ತಂಡ ಇಸ್ರೇಲ್‌ಗೆ ಪ್ರಯಾಣ ಬೆಳೆಸಿದೆ. ಸರ್ಕಾರದ ಮಾತು ನಂಬಿ ಹೊಟ್ಟೆಪಾಡಿಗಾಗಿ ದೂರದ ದೇಶಕ್ಕೆ ತೆರಳಿರುವ ಈ ಬಡ ಕಾರ್ಮಿಕರ ಸುರಕ್ಷತೆಯ ಕುರಿತು ಕಳವಳ ಹೆಚ್ಚಾಗಿದೆ.

ಕಳೆದ ವರ್ಷ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಶ್ರೀಲಂಕಾ ತಮ್ಮ ದೇಶದ ಜನರಿಗೆ ಉದ್ಯೋಗ ಕೊಡುವತ್ತ ಹೆಚ್ಚಿನ ಒತ್ತು ನೀಡುತ್ತಿದೆ. ಇದರ ಭಾಗವಾಗಿ ವಿದೇಶಗಳಿಗೆ ಕಾರ್ಮಿಕರನ್ನು ಕಳುಹಿಸಿಕೊಡಲು ತುದಿಗಾಲಲ್ಲಿ ನಿಂತಿದೆ. ಆದರೆ, ಯುದ್ಧ ಪೀಡಿತ ಇಸ್ರೇಲ್‌ಗೆ ಏನೂ ಅರಿಯ ಬಡ ಕಾರ್ಮಿಕರನ್ನು ಕಳುಹಿಸಿಕೊಟ್ಟಿರುವ ಸರ್ಕಾರದ ವಿರುದ್ಧ ಶ್ರೀಲಂಕಾದ ಕಾರ್ಮಿಕ ಮತ್ತು ಮಾನವೀಯ ಸಂಘಟನೆಗಳು ಸಿಡಿದೆದ್ದಿವೆ.

ಶ್ರೀಲಂಕಾದಲ್ಲಿ ಗಾಝಾ ಪರ ಪ್ರತಿಭಟನೆಗಳನ್ನು ಆಯೋಜಿಸುವ ಮಾನವ ಹಕ್ಕುಗಳ ಕಾರ್ಯರ್ತ ಅಬ್ದುಲ್ ಸರೂರ್ ಅವರು, ಶ್ರೀಲಂಕಾ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿಕೊಡುವುದು ಜನಾಂಗೀಯ ಸಂಘರ್ಷಕ್ಕೆ ಎಡೆ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಈಗಾಗಲೇ 9 ಲಕ್ಷ ಶ್ರೀಲಂಕನ್ ಕಾರ್ಮಿಕರಿದ್ದಾರೆ. ಇಸ್ರೇಲ್‌ನ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ತೋರಿಸಿ 10 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅವರನ್ನು ಸುರಕ್ಷಿತವಾಗಿ ಕಳುಹಿಸಿಕೊಡಲಾಗುವುದು ಎಂದು ಶ್ರೀಲಂಕಾದ ಕಾರ್ಮಿಕ ಸಚಿವ ಮನೂಷ ನನಯಕ್ಕರ ತಿಳಿಸಿದ್ದಾರೆ.

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಲು ಸಿದ್ದತೆ, ವಿರೋಧ

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಿಕೊಡುವಂತೆ ಇಸ್ರೇಲ್ ಬೇಡಿಕೆ ಇಟ್ಟಿದೆ. ಇದಕ್ಕೆ ಬಹಳ ಉತ್ಸಾದಿಂದ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಮತ್ತು ಹರಿಯಾಣ ಬಿಜೆಪಿ ಸರ್ಕಾರಗಳು, ಈಗಾಗಲೇ ಕಾರ್ಮಿಕರನ್ನು ಕಳುಹಿಸಿಕೊಡಲು ಮುಂದಾಗಿವೆ.

ಹರಿಯಾಣ ಸರ್ಕಾರದ ಕೌಶಲ್ ರೋಝ್‌ಗಾರ್ ನಿಗಮ್ (ಹೆಚ್‌ಕೆಆರ್‌ಎನ್‌) ಕಳೆದ ತಿಂಗಳು ಇಸ್ರೇಲ್‌ಗೆ ಕಳುಹಿಸಲು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ನೇಮಿಸಿಕೊಳ್ಳಲು ಪ್ರಕಟನೆ ಹೊರಡಿಸಿತ್ತು.

ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮದ ಮೂಲಕ 10 ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಲು ಆಯ್ಕೆ ಮಾಡುವ ಸಂಬಂಧ ಉತ್ತರ ಪ್ರದೇಶ ಸರ್ಕಾರ ಕೂಡ ಅರ್ಜಿ ಆಹ್ವಾನಿಸಿದೆ. ಅಲೀಘರ್, ಹತ್ರಾಸ್, ಕಾಸ್‌ಗಂಜ್, ಇತಾಹ್ ಜಿಲ್ಲೆಗಳಿಂದ ಮೂದಲ ಹಂತದಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ ಕಡಿಮೆ ಇರುವ, ಆಧುನಿಕ ವಿಚಾರಗಳ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲ ಬಡ, ಮುಗ್ದ ಕಾರ್ಮಿಕರನ್ನು ದೂರದ ಇಸ್ರೇಲ್‌ಗೆ ಕಳುಹಿಸಿಕೊಡುವುದಕ್ಕೆ ಭಾರತದ ಕಾರ್ಮಿಕ ಸಂಘಟನೆಗಳು ಮತ್ತು ಮಾನವ ಹಕ್ಕು ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಇಸ್ರೇಲ್‌ ರಾಯಭಾರಿ ಕಚೇರಿ ಬಳಿ ಸ್ಪೋಟ ಪ್ರಕರಣ: ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...