Homeಮುಖಪುಟಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸುವುದಕ್ಕೆ ವಿರೋಧ: ಶ್ರೀಲಂಕಾದಲ್ಲಿ ಪ್ರತಿಭಟನೆ

- Advertisement -
- Advertisement -

ಇಸ್ರೇಲ್‌ಗೆ 10 ಸಾವಿರ ಕಾರ್ಮಿಕರನ್ನು ಕಳುಹಿಸಿಕೊಡುವ ಶ್ರೀಲಂಕಾ ಸರ್ಕಾರದ ಕ್ರಮವನ್ನು ಖಂಡಿಸಿ ಅಲ್ಲಿನ ಕಾರ್ಮಿಕ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ.

ಕಳೆದ ಅಕ್ಟೋಬರ್‌ನಿಂದ ಗಾಝಾದೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿರುವ ಶ್ರೀಲಂಕನ್ನರು, ಗಾಝಾದಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್‌ಗೆ ಕಾರ್ಮಿಕರನ್ನು ಕಳುಹಿಸಿಕೊಡಲು ನಾಚಿಕೆಯಾಗುವುದಿಲ್ಲವೇ? ಎಂದು ತಮ್ಮ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದ ಬಳಿಕ ಲಕ್ಷಾಂತರ ಪ್ಯಾಲೆಸ್ತೀನಿ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವ ಇಸ್ರೇಲ್, ಏಷ್ಯಾದ ದೇಶಗಳಾದ ಭಾರತ, ಶ್ರೀಲಂಕಾ ಮತ್ತು ನೇಪಾಳದಿಂದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ.

ತ್ವರಿತವಾಗಿ ಸುಮಾರು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ಕಳುಹಿಸಿಕೊಡುವುದಾಗಿ ಶ್ರೀಲಂಕಾ ಸರ್ಕಾರ ಕಳೆದ ನವೆಂಬರ್‌ನಲ್ಲಿ ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈ ಒಪ್ಪಂದದ ಅನುಸಾರ ಡಿಸೆಂಬರ್ ಆರಂಭದಲ್ಲಿ ಕಾರ್ಮಿಕರ ಮೊದಲ ತಂಡ ಇಸ್ರೇಲ್‌ಗೆ ಪ್ರಯಾಣ ಬೆಳೆಸಿದೆ. ಸರ್ಕಾರದ ಮಾತು ನಂಬಿ ಹೊಟ್ಟೆಪಾಡಿಗಾಗಿ ದೂರದ ದೇಶಕ್ಕೆ ತೆರಳಿರುವ ಈ ಬಡ ಕಾರ್ಮಿಕರ ಸುರಕ್ಷತೆಯ ಕುರಿತು ಕಳವಳ ಹೆಚ್ಚಾಗಿದೆ.

ಕಳೆದ ವರ್ಷ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಶ್ರೀಲಂಕಾ ತಮ್ಮ ದೇಶದ ಜನರಿಗೆ ಉದ್ಯೋಗ ಕೊಡುವತ್ತ ಹೆಚ್ಚಿನ ಒತ್ತು ನೀಡುತ್ತಿದೆ. ಇದರ ಭಾಗವಾಗಿ ವಿದೇಶಗಳಿಗೆ ಕಾರ್ಮಿಕರನ್ನು ಕಳುಹಿಸಿಕೊಡಲು ತುದಿಗಾಲಲ್ಲಿ ನಿಂತಿದೆ. ಆದರೆ, ಯುದ್ಧ ಪೀಡಿತ ಇಸ್ರೇಲ್‌ಗೆ ಏನೂ ಅರಿಯ ಬಡ ಕಾರ್ಮಿಕರನ್ನು ಕಳುಹಿಸಿಕೊಟ್ಟಿರುವ ಸರ್ಕಾರದ ವಿರುದ್ಧ ಶ್ರೀಲಂಕಾದ ಕಾರ್ಮಿಕ ಮತ್ತು ಮಾನವೀಯ ಸಂಘಟನೆಗಳು ಸಿಡಿದೆದ್ದಿವೆ.

ಶ್ರೀಲಂಕಾದಲ್ಲಿ ಗಾಝಾ ಪರ ಪ್ರತಿಭಟನೆಗಳನ್ನು ಆಯೋಜಿಸುವ ಮಾನವ ಹಕ್ಕುಗಳ ಕಾರ್ಯರ್ತ ಅಬ್ದುಲ್ ಸರೂರ್ ಅವರು, ಶ್ರೀಲಂಕಾ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿಕೊಡುವುದು ಜನಾಂಗೀಯ ಸಂಘರ್ಷಕ್ಕೆ ಎಡೆ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಈಗಾಗಲೇ 9 ಲಕ್ಷ ಶ್ರೀಲಂಕನ್ ಕಾರ್ಮಿಕರಿದ್ದಾರೆ. ಇಸ್ರೇಲ್‌ನ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ತೋರಿಸಿ 10 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅವರನ್ನು ಸುರಕ್ಷಿತವಾಗಿ ಕಳುಹಿಸಿಕೊಡಲಾಗುವುದು ಎಂದು ಶ್ರೀಲಂಕಾದ ಕಾರ್ಮಿಕ ಸಚಿವ ಮನೂಷ ನನಯಕ್ಕರ ತಿಳಿಸಿದ್ದಾರೆ.

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಲು ಸಿದ್ದತೆ, ವಿರೋಧ

ಭಾರತದಿಂದಲೂ ಕಾರ್ಮಿಕರನ್ನು ಕಳುಹಿಸಿಕೊಡುವಂತೆ ಇಸ್ರೇಲ್ ಬೇಡಿಕೆ ಇಟ್ಟಿದೆ. ಇದಕ್ಕೆ ಬಹಳ ಉತ್ಸಾದಿಂದ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಮತ್ತು ಹರಿಯಾಣ ಬಿಜೆಪಿ ಸರ್ಕಾರಗಳು, ಈಗಾಗಲೇ ಕಾರ್ಮಿಕರನ್ನು ಕಳುಹಿಸಿಕೊಡಲು ಮುಂದಾಗಿವೆ.

ಹರಿಯಾಣ ಸರ್ಕಾರದ ಕೌಶಲ್ ರೋಝ್‌ಗಾರ್ ನಿಗಮ್ (ಹೆಚ್‌ಕೆಆರ್‌ಎನ್‌) ಕಳೆದ ತಿಂಗಳು ಇಸ್ರೇಲ್‌ಗೆ ಕಳುಹಿಸಲು 10 ಸಾವಿರ ಕಟ್ಟಡ ಮತ್ತು ಕೃಷಿ ಕಾರ್ಮಿಕರನ್ನು ನೇಮಿಸಿಕೊಳ್ಳಲು ಪ್ರಕಟನೆ ಹೊರಡಿಸಿತ್ತು.

ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮದ ಮೂಲಕ 10 ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಲು ಆಯ್ಕೆ ಮಾಡುವ ಸಂಬಂಧ ಉತ್ತರ ಪ್ರದೇಶ ಸರ್ಕಾರ ಕೂಡ ಅರ್ಜಿ ಆಹ್ವಾನಿಸಿದೆ. ಅಲೀಘರ್, ಹತ್ರಾಸ್, ಕಾಸ್‌ಗಂಜ್, ಇತಾಹ್ ಜಿಲ್ಲೆಗಳಿಂದ ಮೂದಲ ಹಂತದಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ ಕಡಿಮೆ ಇರುವ, ಆಧುನಿಕ ವಿಚಾರಗಳ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲ ಬಡ, ಮುಗ್ದ ಕಾರ್ಮಿಕರನ್ನು ದೂರದ ಇಸ್ರೇಲ್‌ಗೆ ಕಳುಹಿಸಿಕೊಡುವುದಕ್ಕೆ ಭಾರತದ ಕಾರ್ಮಿಕ ಸಂಘಟನೆಗಳು ಮತ್ತು ಮಾನವ ಹಕ್ಕು ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಇಸ್ರೇಲ್‌ ರಾಯಭಾರಿ ಕಚೇರಿ ಬಳಿ ಸ್ಪೋಟ ಪ್ರಕರಣ: ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...