Homeಮುಖಪುಟಶ್ರೀಲಂಕಾ ಸಂಸತ್ ವಿಸರ್ಜಿಸಿದ ನೂತನ ಅಧ್ಯಕ್ಷ ದಿಸ್ಸನಾಯಕೆ : ನವೆಂಬರ್ 14ರಂದು ಚುನಾವಣೆ

ಶ್ರೀಲಂಕಾ ಸಂಸತ್ ವಿಸರ್ಜಿಸಿದ ನೂತನ ಅಧ್ಯಕ್ಷ ದಿಸ್ಸನಾಯಕೆ : ನವೆಂಬರ್ 14ರಂದು ಚುನಾವಣೆ

- Advertisement -
- Advertisement -

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಎಡಪಂಥೀಯ ನಾಯಕ ಅನುರ ಕುಮಾರ ದಿಸ್ಸನಾಯಕೆ ಮಂಗಳವಾರ (ಸೆ.24) ದೇಶದ ಸಂಸತ್ತನ್ನು ವಿಸರ್ಜಿಸಿದ್ದಾರೆ ಮತ್ತು ಒಂದು ತಿಂಗಳೊಳಗೆ ಕ್ಷಿಪ್ರ ಚುನಾವಣೆಗೆ ಕರೆ ನೀಡಿದ್ದಾರೆ.

ಈ ಮೂಲಕ ರಾಜಕೀಯ ಕುಟುಂಬಗಳ ಕೈಯಲ್ಲಿದ್ದ ಶ್ರೀಲಂಕಾದ ದಶಕಗಳ ಹಳೆಯ ಆಡಳಿತದಲ್ಲಿ ಬದಲಾವಣೆಯನ್ನು ತರುವ ತನ್ನ ಚುನಾವಣಾ ಭರವಸೆಯನ್ನು ಈಡೇರಿಸುವಲ್ಲಿ ದಿಸ್ಸನಾಯಕೆ ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ.

ಸಂಸತ್ ವಿಸರ್ಜನೆ ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಮುಂದಿನ ನವೆಂಬರ್ 14 ರಂದು ಹೊಸದಾಗಿ ಚುನಾವಣೆ ನಡೆಯಲಿದೆ ಎಂದು ವಿಶೇಷ ಗೆಜೆಟ್ ಅಧಿಸೂಚನೆ ತಿಳಿಸಿದೆ. ಕೊನೆಯದಾಗಿ 2020ರಲ್ಲಿ ಶ್ರೀಲಂಕಾ ಸಂಸತ್‌ಗೆ ಚುನಾವಣೆ ನಡೆದಿತ್ತು. ಸರ್ಕಾರದ ಅವಧಿ 2025ರ ಆಗಸ್ಟ್‌ವರೆಗೆ ಇದೆ. ಆದರೂ, 11 ತಿಂಗಳಿಗಿಂತ ಮುಂಚಿತವಾಗಿ ಸಂಸತ್ ವಿಸರ್ಜಿಸಿರುವ ಅಧ್ಯಕ್ಷ ಚುನಾವಣೆಗೆ ಆದೇಶಿಸಿದ್ದಾರೆ.

2020ರಲ್ಲಿ ಹೊಸ ಸರ್ಕಾರ ಬಂದ ಬಳಿಕ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿತ್ತು. ಅದು ತೀವ್ರ ರೂಪಕ್ಕೆ ಹೋಗಿ, 2022ರಲ್ಲಿ ಜನರು ಸರ್ಕಾರದ ವಿರುದ್ದ ದಂಗೆಯೆದ್ದಿದ್ದರು. ಅಧ್ಯಕ್ಷ ಗೋಟಬಯ ರಾಜಪಕ್ಸೆ ವಿರುದ್ದ ಬೀದಿಗಿಳಿದು ಪ್ರತಿಭಟಿಸಿದ್ದರು. ಆ ಸಮಯದಲ್ಲಿ ರಾಜಪಕ್ಸೆ ಅವರು ರಾಷ್ಟ್ರದಿಂದ ಪಲಾಯನ ಮಾಡಿದ್ದರು. ಇದರಿಂದ ಇನ್ನಷ್ಟು ಆಕ್ರೋಶಿತರಾದ ಸಾವಿರಾರು ಜನರು ಕೊಲಂಬೊದಲ್ಲಿರುವ ಅಧ್ಯಕ್ಷರ ಭವನಕ್ಕೆ ನುಗ್ಗಿದ್ದರು. ಕೈಗೆ ಸಿಕ್ಕ ವಸ್ತುಗಳನ್ನು ಎತ್ತಿಕೊಂಡು ಬಂದಿದ್ದರು.

ನಂತರ, ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಅಧಿಕಾರ ವಹಿಸಿಕೊಂಡಿದ್ದರು. ಪ್ರಧಾನಿಯಾಗಿ ದಿನೇಶ್ ಗುಣವರ್ಧನ ನೇಮಕಗೊಂಡಿದ್ದರು. ರಾನಿಲ್ ವಿಕ್ರಮಸಿಂಘೆ ಲಂಕಾ ಆರ್ಥಿಕತೆಗೆ ಸ್ಥಿರತೆ ತರಲು ಮತ್ತು ದೇಶದಲ್ಲಿ ಶಾಂತಿ ಸ್ಥಾಪಿಸಲು ಪ್ರಯತ್ನಿಸಿದ್ದಾರೆ ಎಂದು ಹೇಳಲಾಗ್ತಿದೆ.

ಆರ್ಥಿಕ ಬಿಕ್ಕಟ್ಟಿನ ಬಳಿಕ ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಕಳೆದ ವಾರ ಚುನಾವಣೆ ನಡೆದಿದ್ದು, ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಳಿಕ ಅವರು, ಹರಿಣಿ ಅಮರಸೂರ್ಯ ಅವರನ್ನು ಹೊಸ ಪ್ರಧಾನಿಯಾಗಿ ನೇಮಿಸಿದ್ದಾರೆ.

ಇದನ್ನೂ ಓದಿ : ಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...