Homeಮುಖಪುಟ‘ಶ್ರೀರಾಮ ಮಾಂಸಾಹಾರಿ’ ಹೇಳಿಕೆ; ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಜಿತೇಂದ್ರ

‘ಶ್ರೀರಾಮ ಮಾಂಸಾಹಾರಿ’ ಹೇಳಿಕೆ; ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಜಿತೇಂದ್ರ

- Advertisement -
- Advertisement -

‘ಭಗವಾನ್ ಶ್ರೀರಾಮ ಮಾಂಸಾಹಾರಿ’ ಎಂದು ಹೇಳಿದ್ದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್, ಬಿಜೆಪಿಗರ ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ್ದಾರೆ. ‘ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಯಾರ ಭಾವನೆಗಳಿಗೂ ಧಕ್ಕೆ ತರಲು ಬಯಸುವುದಿಲ್ಲ’ ಎಂದಿದ್ದಾರೆ.

ಶ್ರೀರಾಮ ಮಾಂಸಹಾರಿ ಎಂದು ಎಂಬ ಅವ್ಹಾದ್ ಹೇಳಿಕೆಗೆ ಅಜಿತ್ ಪವಾರ್ ಬಣದ ಎನ್‌ಸಿಪಿ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಕಿಡಿಕಾರಿದ್ದರು. ಅವರ ಮನೆ ಮುಂದೆ ಪ್ರತಿಭಟಿಸಿ ಆಕ್ರೋಶ ಹೊರಹಾಕಿದ್ದರು. ‘ವನವಾಸದ ಸಮಯದಲ್ಲಿ ಕಾಡಿನಲ್ಲಿ ಸಸ್ಯಾಹಾರದ ಕೊರತೆಯಿಂದಾಗಿ ಭಗವಾನ್ ರಾಮನು ಮಾಂಸಾಹಾರಿಯಾಗಿದ್ದನು’ ಎಂದು ಅವರು ಹೇಳಿದ್ದರು.

ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ‘ಶ್ರೀರಾಮನು ಸಸ್ಯಾಹಾರಿ ಅಲ್ಲ, ಮಾಂಸಾಹಾರಿ. 14 ವರ್ಷಗಳಿಂದ ಕಾಡಿನಲ್ಲಿ ವಾಸಿಸುವ ವ್ಯಕ್ತಿಯು ಸಸ್ಯಾಹಾರಿ ಆಹಾರವನ್ನು ಹುಡುಕಲು ಎಲ್ಲಿಗೆ ಹೋಗುತ್ತಾನೆ, ಇದು ಸರಿಯೋ ಇಲ್ಲವೋ’ ಎಂದು ಸಾರ್ವಜನಿಕರನ್ನು ಪ್ರಶ್ನಿಸಿದ್ದರು.

‘ನಾವು ಇತಿಹಾಸವನ್ನು ಓದುವುದಿಲ್ಲ ಮತ್ತು ರಾಜಕೀಯದಲ್ಲಿ ಎಲ್ಲವನ್ನೂ ಮರೆತುಬಿಡುವುದಿಲ್ಲ. ರಾಮ ನಮ್ಮವನು; ಅವರು ಬಹುಜನರ ನಾಯಕರಾಗಿದ್ದರು. ಕಾಡಿನಲ್ಲಿ ತಿನ್ನಲು ಬೇಟೆಯಾಡುತ್ತಿದ್ದರು … ರಾಮ ಎಂದಿಗೂ ಸಸ್ಯಾಹಾರಿಯಾಗಿರಲಿಲ್ಲ. 14 ವರ್ಷಗಳ ಕಾಲ ಕಾಡಿನಲ್ಲಿ ವಾಸಿಸುತ್ತಿದ್ದ ವ್ಯಕ್ತಿಯು ಸಸ್ಯಾಹಾರಿಯಾಗಿ ಉಳಿಯಲು ಹೇಗೆ ಸಾಧ್ಯ’ ಎಂದಿದ್ದರು.

ಅವರ ಹೇಳಿಕೆಯ ಬೆನ್ನಲ್ಲೇ ಅಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕರು, ಜಿತೇಂದ್ರ ಅವ್ಹಾದ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಹರಿಯಾಣ ರಾಜ್ಯ ಮುಖ್ಯಸ್ಥರಾಗಿರುವ ಅರುಣ್ ಯಾದವ್ ಅವರು ಅವ್ಹಾದ್ ವಿಡಿಯೋವನ್ನು ಪೋಸ್ಟ್ ಮಾಡಿ, ‘ಅವರನ್ನು ತಕ್ಷಣವೇ ಬಂಧಿಸಬೇಕು’ ಎಂದು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮತ್ತೊಬ್ಬ ಬಿಜೆಪಿ ನಾಯಕ ರಾಮ್ ಕದಂ ಅವರು ಉದ್ಧವ್ ಠಾಕ್ರೆ ಬಣವನ್ನು ತರಾಟೆಗೆ ತೆಗೆದುಕೊಂಡು, ‘ಬಾಳಾಸಾಹೇಬ್ ಠಾಕ್ರೆ ಅವರು ಇಂದು ಬದುಕಿದ್ದರೆ ಅವರು ಜಿತೇಂದ್ರ ಅವ್ಹಾದ್ ಬಗ್ಗೆ ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಕಟುವಾಗಿ ಬರೆಯುತ್ತಿದ್ದರು’ ಎಂದು ಹೇಳಿದರು.

‘ದಿವಂಗತ ಬಾಳಾಸಾಹೇಬರು ಇಂದು ಬದುಕಿದ್ದರೆ, ಸಾಮ್ನಾ ಪತ್ರಿಕೆಯು ಶ್ರೀರಾಮನನ್ನು ಮಾಂಸಾಹಾರಿ ಎಂದು ಕರೆದವರ ಬಗ್ಗೆ ನಿಷ್ಠುರವಾಗಿ ಮಾತನಾಡುತ್ತಿತ್ತು. ಇವತ್ತಿನ ವಾಸ್ತವ ಏನಾಗಿದೆ.. ಇವರಿಗೆ ಲೆಕ್ಕವಿಲ್ಲ.. ಮಂಜುಗಡ್ಡೆಯಂತೆ ತಣ್ಣಗಿದ್ದಾರೆ. ಆದರೆ, ಚುನಾವಣೆಯ ಹತ್ತಿರ ಬಂದಾಗ ಹುಸಿ ಅಧಿಕಾರವನ್ನು ಕೂಡಿಸಿಕೊಂಡು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ವಾಸ್ತವ ಇದು…ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಹಿಂದೂಗಳೋ ಅಥವಾ ಮರಾಠಿಗರೋ… ಅವರಿಗೆ ಯಾರ ಮೇಲೂ ಪ್ರೀತಿ ಇಲ್ಲ’ ಎಂದಿದ್ದರು.

‘ಭಗವಾನ್ ರಾಮನು ಮಾಂಸಾಹಾರಿ’ ಎಂಬ ಹೇಳಿಕೆಗಾಗಿ ಜಿತೇಂದ್ರ ಅವ್ಹಾದ್ ವಿರುದ್ಧ ಕದಮ್ ದೂರು ದಾಖಲಿಸಿದ್ದಾರೆ. ರಾಮಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ಅವರ ಮನಸ್ಸು. ಅವರು ಮತ ಸಂಗ್ರಹಿಸಲು ಹಿಂದೂ ಧರ್ಮವನ್ನು ಗೇಲಿ ಮಾಡಲು ಸಾಧ್ಯವಿಲ್ಲ. ರಾಮಮಂದಿರವನ್ನು ನಿರ್ಮಿಸಿರುವುದು ಘಮಂಡಿ ಮೈತ್ರಿಗೆ ಸರಿಹೋಗಿಲ್ಲ ಎಂದು ಕಿಡಿಕಾರಿದ್ದಾರೆ.

ಜನವರಿ 22 ರಂದು ಅಯೋಧ್ಯೆಯ ಮಹಾಮಸ್ತಕಾಭಿಷೇಕದ ದಿನದಂದು, ಮಹಾರಾಷ್ಟ್ರ ಸರ್ಕಾರ ಒಂದು ದಿನ ಮದ್ಯ ಮತ್ತು ಮಾಂಸ ನಿಷೇಧ ಮಾಡಬೇಕು ಎಂದು ಬಿಜೆಪಿ ಶಾಸಕ ರಾಮ್ ಕದಂ ಒತ್ತಾಯಿಸಿದ್ದರು. ಮರುದಿನ ಎನ್ಸಿಪಿ ನಾಯಕ ಜಿತೇಂದ್ರ ಅವ್ಹಾದ್ ನೀಡಿದ ಹೇಳಿಕೆಯನ್ನು ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಭಗವಾನ್ ರಾಮನು ಮಾಂಸಾಹಾರಿ..’; ವಿವಾದ ಹುಟ್ಟುಹಾಕಿದ ಎನ್‌ಸಿಪಿ ನಾಯಕ ಅವ್ಹಾದ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...