Homeಮುಖಪುಟ‘ಶ್ರೀರಾಮ ಮಾಂಸಾಹಾರಿ’ ಹೇಳಿಕೆ; ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಜಿತೇಂದ್ರ

‘ಶ್ರೀರಾಮ ಮಾಂಸಾಹಾರಿ’ ಹೇಳಿಕೆ; ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಜಿತೇಂದ್ರ

- Advertisement -
- Advertisement -

‘ಭಗವಾನ್ ಶ್ರೀರಾಮ ಮಾಂಸಾಹಾರಿ’ ಎಂದು ಹೇಳಿದ್ದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್, ಬಿಜೆಪಿಗರ ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ್ದಾರೆ. ‘ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಯಾರ ಭಾವನೆಗಳಿಗೂ ಧಕ್ಕೆ ತರಲು ಬಯಸುವುದಿಲ್ಲ’ ಎಂದಿದ್ದಾರೆ.

ಶ್ರೀರಾಮ ಮಾಂಸಹಾರಿ ಎಂದು ಎಂಬ ಅವ್ಹಾದ್ ಹೇಳಿಕೆಗೆ ಅಜಿತ್ ಪವಾರ್ ಬಣದ ಎನ್‌ಸಿಪಿ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಕಿಡಿಕಾರಿದ್ದರು. ಅವರ ಮನೆ ಮುಂದೆ ಪ್ರತಿಭಟಿಸಿ ಆಕ್ರೋಶ ಹೊರಹಾಕಿದ್ದರು. ‘ವನವಾಸದ ಸಮಯದಲ್ಲಿ ಕಾಡಿನಲ್ಲಿ ಸಸ್ಯಾಹಾರದ ಕೊರತೆಯಿಂದಾಗಿ ಭಗವಾನ್ ರಾಮನು ಮಾಂಸಾಹಾರಿಯಾಗಿದ್ದನು’ ಎಂದು ಅವರು ಹೇಳಿದ್ದರು.

ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ‘ಶ್ರೀರಾಮನು ಸಸ್ಯಾಹಾರಿ ಅಲ್ಲ, ಮಾಂಸಾಹಾರಿ. 14 ವರ್ಷಗಳಿಂದ ಕಾಡಿನಲ್ಲಿ ವಾಸಿಸುವ ವ್ಯಕ್ತಿಯು ಸಸ್ಯಾಹಾರಿ ಆಹಾರವನ್ನು ಹುಡುಕಲು ಎಲ್ಲಿಗೆ ಹೋಗುತ್ತಾನೆ, ಇದು ಸರಿಯೋ ಇಲ್ಲವೋ’ ಎಂದು ಸಾರ್ವಜನಿಕರನ್ನು ಪ್ರಶ್ನಿಸಿದ್ದರು.

‘ನಾವು ಇತಿಹಾಸವನ್ನು ಓದುವುದಿಲ್ಲ ಮತ್ತು ರಾಜಕೀಯದಲ್ಲಿ ಎಲ್ಲವನ್ನೂ ಮರೆತುಬಿಡುವುದಿಲ್ಲ. ರಾಮ ನಮ್ಮವನು; ಅವರು ಬಹುಜನರ ನಾಯಕರಾಗಿದ್ದರು. ಕಾಡಿನಲ್ಲಿ ತಿನ್ನಲು ಬೇಟೆಯಾಡುತ್ತಿದ್ದರು … ರಾಮ ಎಂದಿಗೂ ಸಸ್ಯಾಹಾರಿಯಾಗಿರಲಿಲ್ಲ. 14 ವರ್ಷಗಳ ಕಾಲ ಕಾಡಿನಲ್ಲಿ ವಾಸಿಸುತ್ತಿದ್ದ ವ್ಯಕ್ತಿಯು ಸಸ್ಯಾಹಾರಿಯಾಗಿ ಉಳಿಯಲು ಹೇಗೆ ಸಾಧ್ಯ’ ಎಂದಿದ್ದರು.

ಅವರ ಹೇಳಿಕೆಯ ಬೆನ್ನಲ್ಲೇ ಅಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕರು, ಜಿತೇಂದ್ರ ಅವ್ಹಾದ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಹರಿಯಾಣ ರಾಜ್ಯ ಮುಖ್ಯಸ್ಥರಾಗಿರುವ ಅರುಣ್ ಯಾದವ್ ಅವರು ಅವ್ಹಾದ್ ವಿಡಿಯೋವನ್ನು ಪೋಸ್ಟ್ ಮಾಡಿ, ‘ಅವರನ್ನು ತಕ್ಷಣವೇ ಬಂಧಿಸಬೇಕು’ ಎಂದು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮತ್ತೊಬ್ಬ ಬಿಜೆಪಿ ನಾಯಕ ರಾಮ್ ಕದಂ ಅವರು ಉದ್ಧವ್ ಠಾಕ್ರೆ ಬಣವನ್ನು ತರಾಟೆಗೆ ತೆಗೆದುಕೊಂಡು, ‘ಬಾಳಾಸಾಹೇಬ್ ಠಾಕ್ರೆ ಅವರು ಇಂದು ಬದುಕಿದ್ದರೆ ಅವರು ಜಿತೇಂದ್ರ ಅವ್ಹಾದ್ ಬಗ್ಗೆ ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಕಟುವಾಗಿ ಬರೆಯುತ್ತಿದ್ದರು’ ಎಂದು ಹೇಳಿದರು.

‘ದಿವಂಗತ ಬಾಳಾಸಾಹೇಬರು ಇಂದು ಬದುಕಿದ್ದರೆ, ಸಾಮ್ನಾ ಪತ್ರಿಕೆಯು ಶ್ರೀರಾಮನನ್ನು ಮಾಂಸಾಹಾರಿ ಎಂದು ಕರೆದವರ ಬಗ್ಗೆ ನಿಷ್ಠುರವಾಗಿ ಮಾತನಾಡುತ್ತಿತ್ತು. ಇವತ್ತಿನ ವಾಸ್ತವ ಏನಾಗಿದೆ.. ಇವರಿಗೆ ಲೆಕ್ಕವಿಲ್ಲ.. ಮಂಜುಗಡ್ಡೆಯಂತೆ ತಣ್ಣಗಿದ್ದಾರೆ. ಆದರೆ, ಚುನಾವಣೆಯ ಹತ್ತಿರ ಬಂದಾಗ ಹುಸಿ ಅಧಿಕಾರವನ್ನು ಕೂಡಿಸಿಕೊಂಡು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ವಾಸ್ತವ ಇದು…ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಹಿಂದೂಗಳೋ ಅಥವಾ ಮರಾಠಿಗರೋ… ಅವರಿಗೆ ಯಾರ ಮೇಲೂ ಪ್ರೀತಿ ಇಲ್ಲ’ ಎಂದಿದ್ದರು.

‘ಭಗವಾನ್ ರಾಮನು ಮಾಂಸಾಹಾರಿ’ ಎಂಬ ಹೇಳಿಕೆಗಾಗಿ ಜಿತೇಂದ್ರ ಅವ್ಹಾದ್ ವಿರುದ್ಧ ಕದಮ್ ದೂರು ದಾಖಲಿಸಿದ್ದಾರೆ. ರಾಮಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ಅವರ ಮನಸ್ಸು. ಅವರು ಮತ ಸಂಗ್ರಹಿಸಲು ಹಿಂದೂ ಧರ್ಮವನ್ನು ಗೇಲಿ ಮಾಡಲು ಸಾಧ್ಯವಿಲ್ಲ. ರಾಮಮಂದಿರವನ್ನು ನಿರ್ಮಿಸಿರುವುದು ಘಮಂಡಿ ಮೈತ್ರಿಗೆ ಸರಿಹೋಗಿಲ್ಲ ಎಂದು ಕಿಡಿಕಾರಿದ್ದಾರೆ.

ಜನವರಿ 22 ರಂದು ಅಯೋಧ್ಯೆಯ ಮಹಾಮಸ್ತಕಾಭಿಷೇಕದ ದಿನದಂದು, ಮಹಾರಾಷ್ಟ್ರ ಸರ್ಕಾರ ಒಂದು ದಿನ ಮದ್ಯ ಮತ್ತು ಮಾಂಸ ನಿಷೇಧ ಮಾಡಬೇಕು ಎಂದು ಬಿಜೆಪಿ ಶಾಸಕ ರಾಮ್ ಕದಂ ಒತ್ತಾಯಿಸಿದ್ದರು. ಮರುದಿನ ಎನ್ಸಿಪಿ ನಾಯಕ ಜಿತೇಂದ್ರ ಅವ್ಹಾದ್ ನೀಡಿದ ಹೇಳಿಕೆಯನ್ನು ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಭಗವಾನ್ ರಾಮನು ಮಾಂಸಾಹಾರಿ..’; ವಿವಾದ ಹುಟ್ಟುಹಾಕಿದ ಎನ್‌ಸಿಪಿ ನಾಯಕ ಅವ್ಹಾದ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...