Homeಮುಖಪುಟ‘ಶ್ರೀರಾಮ ಮಾಂಸಾಹಾರಿ’ ಹೇಳಿಕೆ; ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಜಿತೇಂದ್ರ

‘ಶ್ರೀರಾಮ ಮಾಂಸಾಹಾರಿ’ ಹೇಳಿಕೆ; ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಜಿತೇಂದ್ರ

- Advertisement -
- Advertisement -

‘ಭಗವಾನ್ ಶ್ರೀರಾಮ ಮಾಂಸಾಹಾರಿ’ ಎಂದು ಹೇಳಿದ್ದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್, ಬಿಜೆಪಿಗರ ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ್ದಾರೆ. ‘ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಯಾರ ಭಾವನೆಗಳಿಗೂ ಧಕ್ಕೆ ತರಲು ಬಯಸುವುದಿಲ್ಲ’ ಎಂದಿದ್ದಾರೆ.

ಶ್ರೀರಾಮ ಮಾಂಸಹಾರಿ ಎಂದು ಎಂಬ ಅವ್ಹಾದ್ ಹೇಳಿಕೆಗೆ ಅಜಿತ್ ಪವಾರ್ ಬಣದ ಎನ್‌ಸಿಪಿ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಕಿಡಿಕಾರಿದ್ದರು. ಅವರ ಮನೆ ಮುಂದೆ ಪ್ರತಿಭಟಿಸಿ ಆಕ್ರೋಶ ಹೊರಹಾಕಿದ್ದರು. ‘ವನವಾಸದ ಸಮಯದಲ್ಲಿ ಕಾಡಿನಲ್ಲಿ ಸಸ್ಯಾಹಾರದ ಕೊರತೆಯಿಂದಾಗಿ ಭಗವಾನ್ ರಾಮನು ಮಾಂಸಾಹಾರಿಯಾಗಿದ್ದನು’ ಎಂದು ಅವರು ಹೇಳಿದ್ದರು.

ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ‘ಶ್ರೀರಾಮನು ಸಸ್ಯಾಹಾರಿ ಅಲ್ಲ, ಮಾಂಸಾಹಾರಿ. 14 ವರ್ಷಗಳಿಂದ ಕಾಡಿನಲ್ಲಿ ವಾಸಿಸುವ ವ್ಯಕ್ತಿಯು ಸಸ್ಯಾಹಾರಿ ಆಹಾರವನ್ನು ಹುಡುಕಲು ಎಲ್ಲಿಗೆ ಹೋಗುತ್ತಾನೆ, ಇದು ಸರಿಯೋ ಇಲ್ಲವೋ’ ಎಂದು ಸಾರ್ವಜನಿಕರನ್ನು ಪ್ರಶ್ನಿಸಿದ್ದರು.

‘ನಾವು ಇತಿಹಾಸವನ್ನು ಓದುವುದಿಲ್ಲ ಮತ್ತು ರಾಜಕೀಯದಲ್ಲಿ ಎಲ್ಲವನ್ನೂ ಮರೆತುಬಿಡುವುದಿಲ್ಲ. ರಾಮ ನಮ್ಮವನು; ಅವರು ಬಹುಜನರ ನಾಯಕರಾಗಿದ್ದರು. ಕಾಡಿನಲ್ಲಿ ತಿನ್ನಲು ಬೇಟೆಯಾಡುತ್ತಿದ್ದರು … ರಾಮ ಎಂದಿಗೂ ಸಸ್ಯಾಹಾರಿಯಾಗಿರಲಿಲ್ಲ. 14 ವರ್ಷಗಳ ಕಾಲ ಕಾಡಿನಲ್ಲಿ ವಾಸಿಸುತ್ತಿದ್ದ ವ್ಯಕ್ತಿಯು ಸಸ್ಯಾಹಾರಿಯಾಗಿ ಉಳಿಯಲು ಹೇಗೆ ಸಾಧ್ಯ’ ಎಂದಿದ್ದರು.

ಅವರ ಹೇಳಿಕೆಯ ಬೆನ್ನಲ್ಲೇ ಅಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕರು, ಜಿತೇಂದ್ರ ಅವ್ಹಾದ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಹರಿಯಾಣ ರಾಜ್ಯ ಮುಖ್ಯಸ್ಥರಾಗಿರುವ ಅರುಣ್ ಯಾದವ್ ಅವರು ಅವ್ಹಾದ್ ವಿಡಿಯೋವನ್ನು ಪೋಸ್ಟ್ ಮಾಡಿ, ‘ಅವರನ್ನು ತಕ್ಷಣವೇ ಬಂಧಿಸಬೇಕು’ ಎಂದು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮತ್ತೊಬ್ಬ ಬಿಜೆಪಿ ನಾಯಕ ರಾಮ್ ಕದಂ ಅವರು ಉದ್ಧವ್ ಠಾಕ್ರೆ ಬಣವನ್ನು ತರಾಟೆಗೆ ತೆಗೆದುಕೊಂಡು, ‘ಬಾಳಾಸಾಹೇಬ್ ಠಾಕ್ರೆ ಅವರು ಇಂದು ಬದುಕಿದ್ದರೆ ಅವರು ಜಿತೇಂದ್ರ ಅವ್ಹಾದ್ ಬಗ್ಗೆ ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಕಟುವಾಗಿ ಬರೆಯುತ್ತಿದ್ದರು’ ಎಂದು ಹೇಳಿದರು.

‘ದಿವಂಗತ ಬಾಳಾಸಾಹೇಬರು ಇಂದು ಬದುಕಿದ್ದರೆ, ಸಾಮ್ನಾ ಪತ್ರಿಕೆಯು ಶ್ರೀರಾಮನನ್ನು ಮಾಂಸಾಹಾರಿ ಎಂದು ಕರೆದವರ ಬಗ್ಗೆ ನಿಷ್ಠುರವಾಗಿ ಮಾತನಾಡುತ್ತಿತ್ತು. ಇವತ್ತಿನ ವಾಸ್ತವ ಏನಾಗಿದೆ.. ಇವರಿಗೆ ಲೆಕ್ಕವಿಲ್ಲ.. ಮಂಜುಗಡ್ಡೆಯಂತೆ ತಣ್ಣಗಿದ್ದಾರೆ. ಆದರೆ, ಚುನಾವಣೆಯ ಹತ್ತಿರ ಬಂದಾಗ ಹುಸಿ ಅಧಿಕಾರವನ್ನು ಕೂಡಿಸಿಕೊಂಡು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ವಾಸ್ತವ ಇದು…ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಹಿಂದೂಗಳೋ ಅಥವಾ ಮರಾಠಿಗರೋ… ಅವರಿಗೆ ಯಾರ ಮೇಲೂ ಪ್ರೀತಿ ಇಲ್ಲ’ ಎಂದಿದ್ದರು.

‘ಭಗವಾನ್ ರಾಮನು ಮಾಂಸಾಹಾರಿ’ ಎಂಬ ಹೇಳಿಕೆಗಾಗಿ ಜಿತೇಂದ್ರ ಅವ್ಹಾದ್ ವಿರುದ್ಧ ಕದಮ್ ದೂರು ದಾಖಲಿಸಿದ್ದಾರೆ. ರಾಮಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ಅವರ ಮನಸ್ಸು. ಅವರು ಮತ ಸಂಗ್ರಹಿಸಲು ಹಿಂದೂ ಧರ್ಮವನ್ನು ಗೇಲಿ ಮಾಡಲು ಸಾಧ್ಯವಿಲ್ಲ. ರಾಮಮಂದಿರವನ್ನು ನಿರ್ಮಿಸಿರುವುದು ಘಮಂಡಿ ಮೈತ್ರಿಗೆ ಸರಿಹೋಗಿಲ್ಲ ಎಂದು ಕಿಡಿಕಾರಿದ್ದಾರೆ.

ಜನವರಿ 22 ರಂದು ಅಯೋಧ್ಯೆಯ ಮಹಾಮಸ್ತಕಾಭಿಷೇಕದ ದಿನದಂದು, ಮಹಾರಾಷ್ಟ್ರ ಸರ್ಕಾರ ಒಂದು ದಿನ ಮದ್ಯ ಮತ್ತು ಮಾಂಸ ನಿಷೇಧ ಮಾಡಬೇಕು ಎಂದು ಬಿಜೆಪಿ ಶಾಸಕ ರಾಮ್ ಕದಂ ಒತ್ತಾಯಿಸಿದ್ದರು. ಮರುದಿನ ಎನ್ಸಿಪಿ ನಾಯಕ ಜಿತೇಂದ್ರ ಅವ್ಹಾದ್ ನೀಡಿದ ಹೇಳಿಕೆಯನ್ನು ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಭಗವಾನ್ ರಾಮನು ಮಾಂಸಾಹಾರಿ..’; ವಿವಾದ ಹುಟ್ಟುಹಾಕಿದ ಎನ್‌ಸಿಪಿ ನಾಯಕ ಅವ್ಹಾದ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...