Homeಮುಖಪುಟ‘ಶ್ರೀರಾಮ ಮಾಂಸಾಹಾರಿ’ ಹೇಳಿಕೆ; ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಜಿತೇಂದ್ರ

‘ಶ್ರೀರಾಮ ಮಾಂಸಾಹಾರಿ’ ಹೇಳಿಕೆ; ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಜಿತೇಂದ್ರ

- Advertisement -
- Advertisement -

‘ಭಗವಾನ್ ಶ್ರೀರಾಮ ಮಾಂಸಾಹಾರಿ’ ಎಂದು ಹೇಳಿದ್ದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್, ಬಿಜೆಪಿಗರ ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ್ದಾರೆ. ‘ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಯಾರ ಭಾವನೆಗಳಿಗೂ ಧಕ್ಕೆ ತರಲು ಬಯಸುವುದಿಲ್ಲ’ ಎಂದಿದ್ದಾರೆ.

ಶ್ರೀರಾಮ ಮಾಂಸಹಾರಿ ಎಂದು ಎಂಬ ಅವ್ಹಾದ್ ಹೇಳಿಕೆಗೆ ಅಜಿತ್ ಪವಾರ್ ಬಣದ ಎನ್‌ಸಿಪಿ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಕಿಡಿಕಾರಿದ್ದರು. ಅವರ ಮನೆ ಮುಂದೆ ಪ್ರತಿಭಟಿಸಿ ಆಕ್ರೋಶ ಹೊರಹಾಕಿದ್ದರು. ‘ವನವಾಸದ ಸಮಯದಲ್ಲಿ ಕಾಡಿನಲ್ಲಿ ಸಸ್ಯಾಹಾರದ ಕೊರತೆಯಿಂದಾಗಿ ಭಗವಾನ್ ರಾಮನು ಮಾಂಸಾಹಾರಿಯಾಗಿದ್ದನು’ ಎಂದು ಅವರು ಹೇಳಿದ್ದರು.

ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ‘ಶ್ರೀರಾಮನು ಸಸ್ಯಾಹಾರಿ ಅಲ್ಲ, ಮಾಂಸಾಹಾರಿ. 14 ವರ್ಷಗಳಿಂದ ಕಾಡಿನಲ್ಲಿ ವಾಸಿಸುವ ವ್ಯಕ್ತಿಯು ಸಸ್ಯಾಹಾರಿ ಆಹಾರವನ್ನು ಹುಡುಕಲು ಎಲ್ಲಿಗೆ ಹೋಗುತ್ತಾನೆ, ಇದು ಸರಿಯೋ ಇಲ್ಲವೋ’ ಎಂದು ಸಾರ್ವಜನಿಕರನ್ನು ಪ್ರಶ್ನಿಸಿದ್ದರು.

‘ನಾವು ಇತಿಹಾಸವನ್ನು ಓದುವುದಿಲ್ಲ ಮತ್ತು ರಾಜಕೀಯದಲ್ಲಿ ಎಲ್ಲವನ್ನೂ ಮರೆತುಬಿಡುವುದಿಲ್ಲ. ರಾಮ ನಮ್ಮವನು; ಅವರು ಬಹುಜನರ ನಾಯಕರಾಗಿದ್ದರು. ಕಾಡಿನಲ್ಲಿ ತಿನ್ನಲು ಬೇಟೆಯಾಡುತ್ತಿದ್ದರು … ರಾಮ ಎಂದಿಗೂ ಸಸ್ಯಾಹಾರಿಯಾಗಿರಲಿಲ್ಲ. 14 ವರ್ಷಗಳ ಕಾಲ ಕಾಡಿನಲ್ಲಿ ವಾಸಿಸುತ್ತಿದ್ದ ವ್ಯಕ್ತಿಯು ಸಸ್ಯಾಹಾರಿಯಾಗಿ ಉಳಿಯಲು ಹೇಗೆ ಸಾಧ್ಯ’ ಎಂದಿದ್ದರು.

ಅವರ ಹೇಳಿಕೆಯ ಬೆನ್ನಲ್ಲೇ ಅಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕರು, ಜಿತೇಂದ್ರ ಅವ್ಹಾದ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಹರಿಯಾಣ ರಾಜ್ಯ ಮುಖ್ಯಸ್ಥರಾಗಿರುವ ಅರುಣ್ ಯಾದವ್ ಅವರು ಅವ್ಹಾದ್ ವಿಡಿಯೋವನ್ನು ಪೋಸ್ಟ್ ಮಾಡಿ, ‘ಅವರನ್ನು ತಕ್ಷಣವೇ ಬಂಧಿಸಬೇಕು’ ಎಂದು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮತ್ತೊಬ್ಬ ಬಿಜೆಪಿ ನಾಯಕ ರಾಮ್ ಕದಂ ಅವರು ಉದ್ಧವ್ ಠಾಕ್ರೆ ಬಣವನ್ನು ತರಾಟೆಗೆ ತೆಗೆದುಕೊಂಡು, ‘ಬಾಳಾಸಾಹೇಬ್ ಠಾಕ್ರೆ ಅವರು ಇಂದು ಬದುಕಿದ್ದರೆ ಅವರು ಜಿತೇಂದ್ರ ಅವ್ಹಾದ್ ಬಗ್ಗೆ ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಕಟುವಾಗಿ ಬರೆಯುತ್ತಿದ್ದರು’ ಎಂದು ಹೇಳಿದರು.

‘ದಿವಂಗತ ಬಾಳಾಸಾಹೇಬರು ಇಂದು ಬದುಕಿದ್ದರೆ, ಸಾಮ್ನಾ ಪತ್ರಿಕೆಯು ಶ್ರೀರಾಮನನ್ನು ಮಾಂಸಾಹಾರಿ ಎಂದು ಕರೆದವರ ಬಗ್ಗೆ ನಿಷ್ಠುರವಾಗಿ ಮಾತನಾಡುತ್ತಿತ್ತು. ಇವತ್ತಿನ ವಾಸ್ತವ ಏನಾಗಿದೆ.. ಇವರಿಗೆ ಲೆಕ್ಕವಿಲ್ಲ.. ಮಂಜುಗಡ್ಡೆಯಂತೆ ತಣ್ಣಗಿದ್ದಾರೆ. ಆದರೆ, ಚುನಾವಣೆಯ ಹತ್ತಿರ ಬಂದಾಗ ಹುಸಿ ಅಧಿಕಾರವನ್ನು ಕೂಡಿಸಿಕೊಂಡು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ವಾಸ್ತವ ಇದು…ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಹಿಂದೂಗಳೋ ಅಥವಾ ಮರಾಠಿಗರೋ… ಅವರಿಗೆ ಯಾರ ಮೇಲೂ ಪ್ರೀತಿ ಇಲ್ಲ’ ಎಂದಿದ್ದರು.

‘ಭಗವಾನ್ ರಾಮನು ಮಾಂಸಾಹಾರಿ’ ಎಂಬ ಹೇಳಿಕೆಗಾಗಿ ಜಿತೇಂದ್ರ ಅವ್ಹಾದ್ ವಿರುದ್ಧ ಕದಮ್ ದೂರು ದಾಖಲಿಸಿದ್ದಾರೆ. ರಾಮಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ಅವರ ಮನಸ್ಸು. ಅವರು ಮತ ಸಂಗ್ರಹಿಸಲು ಹಿಂದೂ ಧರ್ಮವನ್ನು ಗೇಲಿ ಮಾಡಲು ಸಾಧ್ಯವಿಲ್ಲ. ರಾಮಮಂದಿರವನ್ನು ನಿರ್ಮಿಸಿರುವುದು ಘಮಂಡಿ ಮೈತ್ರಿಗೆ ಸರಿಹೋಗಿಲ್ಲ ಎಂದು ಕಿಡಿಕಾರಿದ್ದಾರೆ.

ಜನವರಿ 22 ರಂದು ಅಯೋಧ್ಯೆಯ ಮಹಾಮಸ್ತಕಾಭಿಷೇಕದ ದಿನದಂದು, ಮಹಾರಾಷ್ಟ್ರ ಸರ್ಕಾರ ಒಂದು ದಿನ ಮದ್ಯ ಮತ್ತು ಮಾಂಸ ನಿಷೇಧ ಮಾಡಬೇಕು ಎಂದು ಬಿಜೆಪಿ ಶಾಸಕ ರಾಮ್ ಕದಂ ಒತ್ತಾಯಿಸಿದ್ದರು. ಮರುದಿನ ಎನ್ಸಿಪಿ ನಾಯಕ ಜಿತೇಂದ್ರ ಅವ್ಹಾದ್ ನೀಡಿದ ಹೇಳಿಕೆಯನ್ನು ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಭಗವಾನ್ ರಾಮನು ಮಾಂಸಾಹಾರಿ..’; ವಿವಾದ ಹುಟ್ಟುಹಾಕಿದ ಎನ್‌ಸಿಪಿ ನಾಯಕ ಅವ್ಹಾದ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...