Homeಮುಖಪುಟ‘ಶ್ರೀರಾಮ ಮಾಂಸಾಹಾರಿ’ ಹೇಳಿಕೆ; ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಜಿತೇಂದ್ರ

‘ಶ್ರೀರಾಮ ಮಾಂಸಾಹಾರಿ’ ಹೇಳಿಕೆ; ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಜಿತೇಂದ್ರ

- Advertisement -
- Advertisement -

‘ಭಗವಾನ್ ಶ್ರೀರಾಮ ಮಾಂಸಾಹಾರಿ’ ಎಂದು ಹೇಳಿದ್ದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್, ಬಿಜೆಪಿಗರ ವಿರೋಧಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ್ದಾರೆ. ‘ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಯಾರ ಭಾವನೆಗಳಿಗೂ ಧಕ್ಕೆ ತರಲು ಬಯಸುವುದಿಲ್ಲ’ ಎಂದಿದ್ದಾರೆ.

ಶ್ರೀರಾಮ ಮಾಂಸಹಾರಿ ಎಂದು ಎಂಬ ಅವ್ಹಾದ್ ಹೇಳಿಕೆಗೆ ಅಜಿತ್ ಪವಾರ್ ಬಣದ ಎನ್‌ಸಿಪಿ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಕಿಡಿಕಾರಿದ್ದರು. ಅವರ ಮನೆ ಮುಂದೆ ಪ್ರತಿಭಟಿಸಿ ಆಕ್ರೋಶ ಹೊರಹಾಕಿದ್ದರು. ‘ವನವಾಸದ ಸಮಯದಲ್ಲಿ ಕಾಡಿನಲ್ಲಿ ಸಸ್ಯಾಹಾರದ ಕೊರತೆಯಿಂದಾಗಿ ಭಗವಾನ್ ರಾಮನು ಮಾಂಸಾಹಾರಿಯಾಗಿದ್ದನು’ ಎಂದು ಅವರು ಹೇಳಿದ್ದರು.

ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ‘ಶ್ರೀರಾಮನು ಸಸ್ಯಾಹಾರಿ ಅಲ್ಲ, ಮಾಂಸಾಹಾರಿ. 14 ವರ್ಷಗಳಿಂದ ಕಾಡಿನಲ್ಲಿ ವಾಸಿಸುವ ವ್ಯಕ್ತಿಯು ಸಸ್ಯಾಹಾರಿ ಆಹಾರವನ್ನು ಹುಡುಕಲು ಎಲ್ಲಿಗೆ ಹೋಗುತ್ತಾನೆ, ಇದು ಸರಿಯೋ ಇಲ್ಲವೋ’ ಎಂದು ಸಾರ್ವಜನಿಕರನ್ನು ಪ್ರಶ್ನಿಸಿದ್ದರು.

‘ನಾವು ಇತಿಹಾಸವನ್ನು ಓದುವುದಿಲ್ಲ ಮತ್ತು ರಾಜಕೀಯದಲ್ಲಿ ಎಲ್ಲವನ್ನೂ ಮರೆತುಬಿಡುವುದಿಲ್ಲ. ರಾಮ ನಮ್ಮವನು; ಅವರು ಬಹುಜನರ ನಾಯಕರಾಗಿದ್ದರು. ಕಾಡಿನಲ್ಲಿ ತಿನ್ನಲು ಬೇಟೆಯಾಡುತ್ತಿದ್ದರು … ರಾಮ ಎಂದಿಗೂ ಸಸ್ಯಾಹಾರಿಯಾಗಿರಲಿಲ್ಲ. 14 ವರ್ಷಗಳ ಕಾಲ ಕಾಡಿನಲ್ಲಿ ವಾಸಿಸುತ್ತಿದ್ದ ವ್ಯಕ್ತಿಯು ಸಸ್ಯಾಹಾರಿಯಾಗಿ ಉಳಿಯಲು ಹೇಗೆ ಸಾಧ್ಯ’ ಎಂದಿದ್ದರು.

ಅವರ ಹೇಳಿಕೆಯ ಬೆನ್ನಲ್ಲೇ ಅಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕರು, ಜಿತೇಂದ್ರ ಅವ್ಹಾದ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಹರಿಯಾಣ ರಾಜ್ಯ ಮುಖ್ಯಸ್ಥರಾಗಿರುವ ಅರುಣ್ ಯಾದವ್ ಅವರು ಅವ್ಹಾದ್ ವಿಡಿಯೋವನ್ನು ಪೋಸ್ಟ್ ಮಾಡಿ, ‘ಅವರನ್ನು ತಕ್ಷಣವೇ ಬಂಧಿಸಬೇಕು’ ಎಂದು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮತ್ತೊಬ್ಬ ಬಿಜೆಪಿ ನಾಯಕ ರಾಮ್ ಕದಂ ಅವರು ಉದ್ಧವ್ ಠಾಕ್ರೆ ಬಣವನ್ನು ತರಾಟೆಗೆ ತೆಗೆದುಕೊಂಡು, ‘ಬಾಳಾಸಾಹೇಬ್ ಠಾಕ್ರೆ ಅವರು ಇಂದು ಬದುಕಿದ್ದರೆ ಅವರು ಜಿತೇಂದ್ರ ಅವ್ಹಾದ್ ಬಗ್ಗೆ ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಕಟುವಾಗಿ ಬರೆಯುತ್ತಿದ್ದರು’ ಎಂದು ಹೇಳಿದರು.

‘ದಿವಂಗತ ಬಾಳಾಸಾಹೇಬರು ಇಂದು ಬದುಕಿದ್ದರೆ, ಸಾಮ್ನಾ ಪತ್ರಿಕೆಯು ಶ್ರೀರಾಮನನ್ನು ಮಾಂಸಾಹಾರಿ ಎಂದು ಕರೆದವರ ಬಗ್ಗೆ ನಿಷ್ಠುರವಾಗಿ ಮಾತನಾಡುತ್ತಿತ್ತು. ಇವತ್ತಿನ ವಾಸ್ತವ ಏನಾಗಿದೆ.. ಇವರಿಗೆ ಲೆಕ್ಕವಿಲ್ಲ.. ಮಂಜುಗಡ್ಡೆಯಂತೆ ತಣ್ಣಗಿದ್ದಾರೆ. ಆದರೆ, ಚುನಾವಣೆಯ ಹತ್ತಿರ ಬಂದಾಗ ಹುಸಿ ಅಧಿಕಾರವನ್ನು ಕೂಡಿಸಿಕೊಂಡು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ವಾಸ್ತವ ಇದು…ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಹಿಂದೂಗಳೋ ಅಥವಾ ಮರಾಠಿಗರೋ… ಅವರಿಗೆ ಯಾರ ಮೇಲೂ ಪ್ರೀತಿ ಇಲ್ಲ’ ಎಂದಿದ್ದರು.

‘ಭಗವಾನ್ ರಾಮನು ಮಾಂಸಾಹಾರಿ’ ಎಂಬ ಹೇಳಿಕೆಗಾಗಿ ಜಿತೇಂದ್ರ ಅವ್ಹಾದ್ ವಿರುದ್ಧ ಕದಮ್ ದೂರು ದಾಖಲಿಸಿದ್ದಾರೆ. ರಾಮಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ಅವರ ಮನಸ್ಸು. ಅವರು ಮತ ಸಂಗ್ರಹಿಸಲು ಹಿಂದೂ ಧರ್ಮವನ್ನು ಗೇಲಿ ಮಾಡಲು ಸಾಧ್ಯವಿಲ್ಲ. ರಾಮಮಂದಿರವನ್ನು ನಿರ್ಮಿಸಿರುವುದು ಘಮಂಡಿ ಮೈತ್ರಿಗೆ ಸರಿಹೋಗಿಲ್ಲ ಎಂದು ಕಿಡಿಕಾರಿದ್ದಾರೆ.

ಜನವರಿ 22 ರಂದು ಅಯೋಧ್ಯೆಯ ಮಹಾಮಸ್ತಕಾಭಿಷೇಕದ ದಿನದಂದು, ಮಹಾರಾಷ್ಟ್ರ ಸರ್ಕಾರ ಒಂದು ದಿನ ಮದ್ಯ ಮತ್ತು ಮಾಂಸ ನಿಷೇಧ ಮಾಡಬೇಕು ಎಂದು ಬಿಜೆಪಿ ಶಾಸಕ ರಾಮ್ ಕದಂ ಒತ್ತಾಯಿಸಿದ್ದರು. ಮರುದಿನ ಎನ್ಸಿಪಿ ನಾಯಕ ಜಿತೇಂದ್ರ ಅವ್ಹಾದ್ ನೀಡಿದ ಹೇಳಿಕೆಯನ್ನು ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಭಗವಾನ್ ರಾಮನು ಮಾಂಸಾಹಾರಿ..’; ವಿವಾದ ಹುಟ್ಟುಹಾಕಿದ ಎನ್‌ಸಿಪಿ ನಾಯಕ ಅವ್ಹಾದ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...