Homeಕರ್ನಾಟಕಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತಲ್ಲ; ಬಿಜೆಪಿಯವರು ಭ್ರಮೆಯಲ್ಲಿದ್ದಾರೆ: ಕಾಂಗ್ರೆಸ್

ಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತಲ್ಲ; ಬಿಜೆಪಿಯವರು ಭ್ರಮೆಯಲ್ಲಿದ್ದಾರೆ: ಕಾಂಗ್ರೆಸ್

- Advertisement -
- Advertisement -

ಇದೇ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಜ್ಜಾಗಿದೆ. ಶ್ರೀರಾಮಮಂದಿರ ಟ್ರಸ್ಟ್ ಹಾಗೂ ಬಿಜೆಪಿ ದೇಶದಾದ್ಯಂತ ಭರ್ಜರಿ ಪ್ರಚಾರ ನಡೆಸುತ್ತಿದೆ. ಮಸೀದಿ ಕೆಡವಿ, ಆ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಿದ್ದು, ಸಮಾರಂಭದಲ್ಲಿ ಭಾಗವಹಿಸುವ ಕುರಿತು ಕಾಂಗ್ರೆಸ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

‘ಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತೂ ಅಲ್ಲ. ಆದರೆ ರಾಮನ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿಯವರು ಶ್ರೀರಾಮ ತಮ್ಮೊಬ್ಬರ ಸ್ವತ್ತು ಎಂಬ ಭ್ರಮೆಯಲ್ಲಿದ್ದಾರೆ. ಈ ಬಗ್ಗೆ ನಮ್ಮ ಅನುಕಂಪವಿದೆ. ಬಿಜೆಪಿಯವರು ರಾಮ ಭಕ್ತರ ವೇಷದಲ್ಲಿರುವ ಸಮಾಜ ಕಂಟಕರು. ಜನವಿರೋಧಿ ಬಿಜೆಪಿಯು ಕಾಂಗ್ರೆಸ್ ಪಕ್ಷವನ್ನು ರಾಮವಿರೋಧಿ ಎಂದು ಬಿಂಬಿಸುವ ದುಷ್ಟ ಯತ್ನದಲ್ಲಿದೆ’ ಎಂದು ಟೀಕಿಸಿದೆ.

‘ಜನವರಿ 22ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ರಾಜ್ಯ ಬಿಜೆಪಿಗೆ ಸಂತಸ ತರುವ ಬದಲು ಸಂಕಟ ತಂದಿರುವುದು ಅವರ ಧರ್ಮವಿಕೃತಿಗೆ ಸಾಕ್ಷಿ. ಅವರಿಗೆ ಭಕ್ತಿ, ಪೂಜೆ, ಪುನಸ್ಕಾರ, ಸಂಸ್ಕಾರ ಬೇಕಿಲ್ಲ. ಅವರಿಗೆ ಬೇಕಿರುವುದು ಅದರ ಹೆಸರಿನಲ್ಲಿ ರಾಜಕೀಯ. ಅವರದು ಧರ್ಮದ ದಾರಿ ತಪ್ಪಿಸುವ ಹುನ್ನಾರ’ ಎಂದು ಕಿಡಿಕಾರಿದೆ.

‘ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ. 1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ’ ಎಂದು ಕಾಂಗ್ರೆಸ್ ನೆನಪಿಸಿದೆ.

‘ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ, ರಾಮನ ಹೆಸರೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ರಾಜ್ಯ ಬಿಜೆಪಿಗೆ ‘ಸನ್ಮತಿ ದೇ ಭಗವಾನ್’ ಎಂದು ಹೇಳಬೇಕಾಗಿ ಬಂದಿರೋದು ದುರಂತ’ ಎಂದು ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ; ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...