Homeಮುಖಪುಟ‘ಶ್ರೀಕೃಷ್ಣ ಪ್ರತಿದಿನ ನನ್ನ ಕನಸಿನಲ್ಲಿ ಬರುತ್ತಾನೆ!’: ಅಖಿಲೇಶ್‌ ಯಾದವ್‌

‘ಶ್ರೀಕೃಷ್ಣ ಪ್ರತಿದಿನ ನನ್ನ ಕನಸಿನಲ್ಲಿ ಬರುತ್ತಾನೆ!’: ಅಖಿಲೇಶ್‌ ಯಾದವ್‌

- Advertisement -
- Advertisement -

ಉತ್ತರ ಪ್ರದೇಶದ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ತನ್ನ ಕನಸಿನಲ್ಲಿ ಶ್ರೀಕೃಷ್ಣ ಬಂದಿದ್ದಾಗಿ ಪ್ರತಿಪಾದಿಸಿದ್ದಾರೆ. ಕನಸಿನಲ್ಲಿ ಶ್ರೀಕೃಷ್ಣ ಬಂದು ತಾನು ಸರ್ಕಾರ ರಚನೆ ಮಾಡಿ, ರಾಜ್ಯದಲ್ಲಿ ರಾಮರಾಜ್ಯ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ ಎಂದು ಅಖಿಲೇಶ್‌ ಸೋಮವಾರ ಹೇಳಿದ್ದಾರೆ.

ಬಿಜೆಪಿಯ ಬಹ್ರೈಚ್ ಶಾಸಕಿ ಮಾಧುರಿ ವರ್ಮಾ ಅವರನ್ನು ಸಮಾಜವಾದಿ ಪಕ್ಷಕ್ಕೆ ಸ್ವಾಗತಿಸಲು ಆಯೋಜಿಸಲಾದ ಸಮಾರಂಭದಲ್ಲಿ ಮಾತನಾಡುತ್ತಾ ಅಖಿಲೇಶ್‌ ಈ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸುವ ಹಾದಿಯಲ್ಲಿದೆ ಎಂದು ಅವರು ಘೋಷಿಸಿದ್ದಾರೆ.

ಇದನ್ನೂ ಓದಿ:ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಸಮಾಜವಾದಿ (ಸಮಾಜವಾದ) ಮಾರ್ಗದ ಮೂಲಕ ರಾಮರಾಜ್ಯದ ಹಾದಿ ಇದೆ. ಸಮಾಜವಾದಿ ಸ್ಥಾಪನೆಯಾದ ದಿನ ರಾಜ್ಯದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ ಎಂದು ಅಖಿಲೇಶ್‌ ಹೇಳಿದ್ದಾರೆ.

ಈ ವೇಳೆ ಅವರು ತಮ್ಮ ಭಾಷಣದಲ್ಲಿ, “ಉತ್ತರ ಪ್ರದೇಶದಲ್ಲಿ ನಮ್ಮ ಸರ್ಕಾರ ಬರಲಿದೆ ಎಂದು ಹೇಳಲು ಭಗವಾನ್ ಶ್ರೀಕೃಷ್ಣ ಪ್ರತಿ ರಾತ್ರಿ ನನ್ನ ಕನಸಿನಲ್ಲಿ ಬರುತ್ತಾನೆ” ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಸಮಾಜವಾದಿ ಪಕ್ಷದಲ್ಲಿ ಹಲವಾರು ಕ್ರಿಮಿನಲ್‌ಗಳು ಮತ್ತು ದರೋಡೆಕೋರರು ಇದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅಖಿಲೇಶ್‌‌ ಯಾದವ್, “ಹಲವು ಘೋರ ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಯುಪಿ ಮುಖ್ಯಮಂತ್ರಿಯನ್ನಾಗಿ ಮಾಡಿರುವ ಬಿಜೆಪಿ ನಮ್ಮ ಪಕ್ಷದ ಮೇಲೆ ಆರೋಪ ಮಾಡುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಆದಿತ್ಯನಾಥ್‌ ಅವರನ್ನು ‘ವಿಷ’ ಎಂದು ಉಲ್ಲೇಖಿಸಿದ ಯುಪಿ BJP ಕಾರ್ಯಕಾರಿಣಿ ಸದಸ್ಯ!

ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಸ್ಥಾನಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್‌‌ ಯಾದವ್, ಈ ಬಗ್ಗೆ ಪಕ್ಷವು ಸಾರ್ವಜನಿಕ ಘೋಷಣೆ ಮಾಡಲಿದೆ ಎಂದು ಉತ್ತರಿಸಿದ್ದಾರೆ.

ಯುಪಿ ಸಿಎಂ ಅನ್ನು ಲೇವಡಿ ಮಾಡುವ ಮೂಲಕ ಚೀನಾ ಅರುಣಾಚಲ ಪ್ರದೇಶದ ಗ್ರಾಮಗಳ ಹೆಸರನ್ನು ಬದಲಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆದಿತ್ಯನಾಥ್ ಅವರ ಹೆಸರನ್ನು ಬದಲಾಯಿಸುವ ಕಲೆಯನ್ನು ಚೀನಾ ಕರಗತ ಮಾಡಿಕೊಂಡಿದೆ ಎಂದು ಅಖಿಲೇಶ್‌ ವ್ಯಂಗ್ಯವಾಡಿದ್ದಾರ.

“ನಮ್ಮ ನೆರೆಯ ದೇಶವು ನಮ್ಮ ಮುಖ್ಯಮಂತ್ರಿಯಿಂದ ಕಲಿತುಕೊಂಡಿದೆ. ಅದು ನಮ್ಮ ಹಳ್ಳಿಗಳ ಹೆಸರನ್ನು ಬದಲಾಯಿಸಿದೆ. ಇದು ನಮ್ಮ ಮುಖ್ಯಮಂತ್ರಿಗಳಿಂದ ಪ್ರಾರಂಭಿಸಲ್ಪಟ್ಟ ಪ್ರವೃತ್ತಿಯಾಗಿದ್ದು, ಚೀನಾ ಕೂಡ ಇದನ್ನು ಅವರಿಂದ ಕಲಿತುಕೊಂಡಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...