Homeಮುಖಪುಟಶ್ರೀಲಂಕಾ ಸಂಸತ್ ಚುನಾವಣೆ : ಅಧ್ಯಕ್ಷ ದಿಸ್ಸನಾಯಕೆ ನೇತೃತ್ವದ ಎಡ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

ಶ್ರೀಲಂಕಾ ಸಂಸತ್ ಚುನಾವಣೆ : ಅಧ್ಯಕ್ಷ ದಿಸ್ಸನಾಯಕೆ ನೇತೃತ್ವದ ಎಡ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

- Advertisement -
- Advertisement -

ಶ್ರೀಲಂಕಾದ ಸಾರ್ವತ್ರಿಕ ಚುನಾವಣೆಯಲ್ಲಿ ನೂತನ ಅಧ್ಯಕ್ಷ, ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ನೇತೃತ್ವದ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.

ಅಧಿಕೃತ ಫಲಿತಾಂಶದ ಪ್ರಕಾರ, ಅಧ್ಯಕ್ಷ ಅನುರ ಕುಮಾರ ದಿಸ್ಸನಾಯಕೆ ನೇತೃತ್ವದ ರಾಷ್ಟ್ರೀಯ ಜನತಾ ಶಕ್ತಿ (ಎನ್‌ಪಿಪಿ) ಒಕ್ಕೂಟವು 159 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಗಳಿಸಿದೆ.

ಸೆಪ್ಟೆಂಬರ್‌ನಲ್ಲಿ ಅಧ್ಯಕ್ಷರಾಗಿ ಚುನಾಯಿತರಾದ ದಿಸ್ಸನಾಯಕೆ ಅವರು ಶ್ರೀಲಂಕಾದ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಮತ್ತು ಆರ್ಥಿಕ ಬಿಕ್ಕಟ್ಟಿನ ದೇಶವನ್ನು ಮೇಲೆತ್ತುವ ತನ್ನ ಭರವಸೆ ಈಡೇರಿಸಲು ಸ್ಪಷ್ಟ ಬಹುಮತದ ಅಗತ್ಯವಿದೆ ಎಂದು ವರದಿಗಳು ಹೇಳಿವೆ.

ಎನ್‌ಪಿಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಚುನಾವಣಾ ಪೂರ್ವದಲ್ಲಿ ರಾಜಕೀಯ ವಿಶ್ಲೇಷಕರು ನಿರೀಕ್ಷಿಸಿದ್ದರು. ಆದರೆ, ಅದು ಬಹುಮತ ಪಡೆಯಲಿದೆಯೇ? ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂದು ಅವರು ಊಹಿಸಿರಲಿಲ್ಲ.

ಈ ಹಿಂದಿನ ಸರ್ಕಾರದಲ್ಲಿ ದಿಸ್ಸನಾಯಕೆ ಅವರ ಪಕ್ಷ ಜನತಾ ವಿಮುಕ್ತಿ ಪೆರಮುನ (ಜೆವಿಪಿ) ಕೇವಲ ಮೂರು ಸ್ಥಾನಗಳನ್ನು ಹೊಂದಿತ್ತು. ಈ ಬಾರಿಯ ಚುನಾವಣೆಯಲ್ಲಿ ದಿಸ್ಸನಾಯಕೆ ನೇತೃತ್ವದ ಮೈತ್ರಿಕೂಟ ಬರೋಬ್ಬರಿ 159 ಸ್ಥಾನಗಳನ್ನು ಪಡೆದಿದೆ. 225 ಸ್ಥಾನಗಳನ್ನು ಹೊಂದಿರುವ ಸಂಸತ್‌ನಲ್ಲಿ ಬಹುಮತ ಪಡೆಯಲು 113 ಸ್ಥಾನಗಳನ್ನು ಗೆಲ್ಲಬೇಕಿತ್ತು.

ಸೆಪ್ಟೆಂಬರ್ 22, 2024ರಂದು ನಡೆದ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಅನುರ ಕುಮಾರ ದಿಸ್ಸನಾಯಕೆ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

2022ರಲ್ಲಿ ಶ್ರೀಲಂಕಾದಲ್ಲಿ ತೀವ್ರ ಅರ್ಥಿಕ ಬಿಕ್ಕಟ್ಟು ಶುರುವಾಗಿ ಜನರು ದಂಗೆಯೆದ್ದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ದಿಸ್ಸನಾಯಕೆ ಅಭೂತಪೂರ್ವ ಗೆಲುವು ದಾಖಲಿಸಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಸಂಸತನ್ನು ವಿಸರ್ಜಿಸಿದ ಅವರು, ಚುನಾವಣೆಗೆ ಆದೇಶಿಸಿದ್ದರು.

ನವೆಂಬರ್ 14ರಂದು ನಡೆದ ಮತದಾನದ ಎಣಿಕೆ ಪ್ರಕ್ರಿಯೆ ಇಂದು (ನ.15) ನಡೆದಿದೆ. ಕಳೆದ ಬಾರಿ ಸಂಸತ್‌ನಲ್ಲಿ ಮೂರು ಸ್ಥಾನಗಳನ್ನು ಹೊಂದಿದ್ದ ದಿಸ್ಸನಾಯಕೆ ನೇತೃತ್ವ ಈ ಬಾರಿ 159 ಸ್ಥಾನಗಳನ್ನು ಪಡೆದಿದೆ. ಈ ಮೂಲಕ ಎಡ ಸರ್ಕಾರ ಮತ್ತು ಎಡಪಂಥೀಯ ಅಧ್ಯಕ್ಷ ದೇಶದ ಚುಕ್ಕಾಣಿ ಹಿಡಿದಂತಾಗಿದೆ.

ಇದನ್ನೂ ಓದಿ : COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ, 17ಸಾವು, 18 ಜನರಿಗೆ ಗಂಭೀರ ಗಾಯ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ನಾಗ್ಪುರ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...