Homeಮುಖಪುಟಶ್ರೀಲಂಕಾ ಸಂಸತ್ ಚುನಾವಣೆ : ಅಧ್ಯಕ್ಷ ದಿಸ್ಸನಾಯಕೆ ನೇತೃತ್ವದ ಎಡ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

ಶ್ರೀಲಂಕಾ ಸಂಸತ್ ಚುನಾವಣೆ : ಅಧ್ಯಕ್ಷ ದಿಸ್ಸನಾಯಕೆ ನೇತೃತ್ವದ ಎಡ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

- Advertisement -
- Advertisement -

ಶ್ರೀಲಂಕಾದ ಸಾರ್ವತ್ರಿಕ ಚುನಾವಣೆಯಲ್ಲಿ ನೂತನ ಅಧ್ಯಕ್ಷ, ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ನೇತೃತ್ವದ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.

ಅಧಿಕೃತ ಫಲಿತಾಂಶದ ಪ್ರಕಾರ, ಅಧ್ಯಕ್ಷ ಅನುರ ಕುಮಾರ ದಿಸ್ಸನಾಯಕೆ ನೇತೃತ್ವದ ರಾಷ್ಟ್ರೀಯ ಜನತಾ ಶಕ್ತಿ (ಎನ್‌ಪಿಪಿ) ಒಕ್ಕೂಟವು 159 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಗಳಿಸಿದೆ.

ಸೆಪ್ಟೆಂಬರ್‌ನಲ್ಲಿ ಅಧ್ಯಕ್ಷರಾಗಿ ಚುನಾಯಿತರಾದ ದಿಸ್ಸನಾಯಕೆ ಅವರು ಶ್ರೀಲಂಕಾದ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಮತ್ತು ಆರ್ಥಿಕ ಬಿಕ್ಕಟ್ಟಿನ ದೇಶವನ್ನು ಮೇಲೆತ್ತುವ ತನ್ನ ಭರವಸೆ ಈಡೇರಿಸಲು ಸ್ಪಷ್ಟ ಬಹುಮತದ ಅಗತ್ಯವಿದೆ ಎಂದು ವರದಿಗಳು ಹೇಳಿವೆ.

ಎನ್‌ಪಿಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಚುನಾವಣಾ ಪೂರ್ವದಲ್ಲಿ ರಾಜಕೀಯ ವಿಶ್ಲೇಷಕರು ನಿರೀಕ್ಷಿಸಿದ್ದರು. ಆದರೆ, ಅದು ಬಹುಮತ ಪಡೆಯಲಿದೆಯೇ? ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂದು ಅವರು ಊಹಿಸಿರಲಿಲ್ಲ.

ಈ ಹಿಂದಿನ ಸರ್ಕಾರದಲ್ಲಿ ದಿಸ್ಸನಾಯಕೆ ಅವರ ಪಕ್ಷ ಜನತಾ ವಿಮುಕ್ತಿ ಪೆರಮುನ (ಜೆವಿಪಿ) ಕೇವಲ ಮೂರು ಸ್ಥಾನಗಳನ್ನು ಹೊಂದಿತ್ತು. ಈ ಬಾರಿಯ ಚುನಾವಣೆಯಲ್ಲಿ ದಿಸ್ಸನಾಯಕೆ ನೇತೃತ್ವದ ಮೈತ್ರಿಕೂಟ ಬರೋಬ್ಬರಿ 159 ಸ್ಥಾನಗಳನ್ನು ಪಡೆದಿದೆ. 225 ಸ್ಥಾನಗಳನ್ನು ಹೊಂದಿರುವ ಸಂಸತ್‌ನಲ್ಲಿ ಬಹುಮತ ಪಡೆಯಲು 113 ಸ್ಥಾನಗಳನ್ನು ಗೆಲ್ಲಬೇಕಿತ್ತು.

ಸೆಪ್ಟೆಂಬರ್ 22, 2024ರಂದು ನಡೆದ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಅನುರ ಕುಮಾರ ದಿಸ್ಸನಾಯಕೆ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

2022ರಲ್ಲಿ ಶ್ರೀಲಂಕಾದಲ್ಲಿ ತೀವ್ರ ಅರ್ಥಿಕ ಬಿಕ್ಕಟ್ಟು ಶುರುವಾಗಿ ಜನರು ದಂಗೆಯೆದ್ದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ದಿಸ್ಸನಾಯಕೆ ಅಭೂತಪೂರ್ವ ಗೆಲುವು ದಾಖಲಿಸಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಸಂಸತನ್ನು ವಿಸರ್ಜಿಸಿದ ಅವರು, ಚುನಾವಣೆಗೆ ಆದೇಶಿಸಿದ್ದರು.

ನವೆಂಬರ್ 14ರಂದು ನಡೆದ ಮತದಾನದ ಎಣಿಕೆ ಪ್ರಕ್ರಿಯೆ ಇಂದು (ನ.15) ನಡೆದಿದೆ. ಕಳೆದ ಬಾರಿ ಸಂಸತ್‌ನಲ್ಲಿ ಮೂರು ಸ್ಥಾನಗಳನ್ನು ಹೊಂದಿದ್ದ ದಿಸ್ಸನಾಯಕೆ ನೇತೃತ್ವ ಈ ಬಾರಿ 159 ಸ್ಥಾನಗಳನ್ನು ಪಡೆದಿದೆ. ಈ ಮೂಲಕ ಎಡ ಸರ್ಕಾರ ಮತ್ತು ಎಡಪಂಥೀಯ ಅಧ್ಯಕ್ಷ ದೇಶದ ಚುಕ್ಕಾಣಿ ಹಿಡಿದಂತಾಗಿದೆ.

ಇದನ್ನೂ ಓದಿ : COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...