Homeಕರ್ನಾಟಕಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಘಟನೆಗೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದವು

- Advertisement -
- Advertisement -

ನಾನುಗೌರಿ.ಕಾಂಗೆ ಸಿಕ್ಕಿರುವ ಶೃಂಗೇರಿ ಘಟನೆಯ ಎಕ್ಸ್‌ಕ್ಲೂಸಿವ್ ಸಿಸಿಟಿವಿ ವಿಡಿಯೋಗಳು ಹೇಳುವ ಕಥೆ ಆತಂಕಕಾರಿಯಾಗಿದೆ. ಕೇವಲ ಎರಡು ದಿನದಲ್ಲಿ ಸದರಿ ಘಟನೆಯ ಇಡೀ ಚಿತ್ರಣವೇ ಬದಲಾಗಿದ್ದು, ಈ ಸಿಸಿಟಿವಿ ಫೂಟೇಜ್‌ ಚಿಕ್ಕಮಗಳೂರು ಪೊಲೀಸರ ಕೈಗೆ ಸಿಕ್ಕಿದ್ದರಿಂದ. ಖುದ್ದು ಚಿಕ್ಕಮಗಳೂರು ಎಸ್‌ಪಿ ಉಸ್ತುವಾರಿಯಲ್ಲಿ ಘಟನೆಯನ್ನು ಬೇಧಿಸಿರುವ ಪೊಲೀಸರು, ಅದುವರೆಗೆ ನಡೆದಿದ್ದ ಘಟನಾವಳಿಗಳು ತಿರುವು ಮುರುವಾಗುವಂತೆ ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ʼಮುಸ್ಲಿಂ ಸಂಘಟನೆʼಯ ಬಾವುಟ ಬಿದ್ದಿದೆಯೆಂದು ಆರೋಪ ಬಂದು ಉದ್ವಿಗ್ನ ಪರಿಸ್ಥತಿ ಉಂಟಾಗಿತ್ತು. ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಮಾಜಿ ಸಚಿವ ಜೀವರಾಜ್‌ರ ನೇತೃತ್ವದಲ್ಲಿ ಪ್ರತಿಭಟಿಸಿದ್ದವು. ಸದರಿ ಬಾವುಟವು ಎಸ್‌ಡಿಪಿಐ ಸಂಘಟನೆಗೆ ಸೇರಿದ್ದೆಂದೂ, ಈ ಘಟನೆಯನ್ನು ಅವರೇ ಮಾಡಿದ್ದಾರೆಂದೂ ಅವರು ಆರೋಪಿಸಿದ್ದರು. ಎಸ್‌ಡಿಪಿಐ ಪಕ್ಷವನ್ನು ಬ್ಯಾನ್‌ ಮಾಡಬೇಕೆಂದೂ ಅವರುಗಳು ಒತ್ತಾಯಿಸಿದ್ದರು.


ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ; ಇಲ್ಲಿದೆ ನೋಡಿ ವಿಡಿಯೋ


ಆದರೆ ಇದೀಗ ಘಟನೆಯನ್ನು ಪೊಲೀಸರು ಸಿಸಿಟಿವಿ ವಿಡಿಯೋ ವೀಕ್ಷಿಸುವುದರ ಮೂಲಕ ಭೇದಿಸಿದ್ದು ಮಿಲಿಂದ್ ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಹೇಳುವಂತೆ ʼಆತ ಕುಡಿದ ಮತ್ತಿನಲ್ಲಿ ಚಳಿಯಿಂದ ರಕ್ಷಣೆ ಪಡೆಯಲು ಮಸೀದಿಗೆ ನುಗ್ಗಿ ಬಾವುಟವನ್ನು ಕದ್ದುಕೊ೦ಡು ಹೋಗಿದ್ದಾನೆʼ.

ಆದರೆ ಇದೇ ಮಿಲಿಂದ್‌ ಕಳ್ಳತನದ ಕೇಸಿನಲ್ಲಿ ಆರೋಪಿಯಾಗಿ ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೋಗಿದ್ದರು. ಆಗ ಆತನನ್ನು ಬಿಡಿಸಿಕೊಂಡು ಹೋಗಲು ಬಂದವರು ಕೆಲವರು ಸಂಘಟನೆಯವರಾಗಿದ್ದು, ಆ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ. ಅದೇ ಸಂಘಟನೆಯವರೇ ಪ್ರತಿಭಟನೆಯಲ್ಲೂ ಪಾಲ್ಗೊಂಡು, ಇನ್ನಾರದೋ ತಲೆಗೆ ಸದರಿ ದುಷ್ಕೃತ್ಯವನ್ನು ಕಟ್ಟಲು ನೋಡಿದ್ದರೇ ಎಂಬುದೂ ಪತ್ತೆಯಾಗಬೇಕಿದೆ.

ಘಟನೆಯ ಸಿಸಿಟಿವಿ ವಿಡಿಯೊಗಳು ಹೊರಬಿದ್ದಿದೆ. ಅವುಗಳನ್ನು ಕೆಳಗೆ ನೋಡಬಹುದಾಗಿದೆ.

ಶೃಂಗೇರಿಯಲ್ಲಿ ಮಸೀದಿಯಿಂದ ಬಾವುಟ ಕದ್ದುಕೊಂಡು ಹೋಗುವ #ಎಕ್ಸ್‌‌ಕ್ಲೂಸಿವ್_ವೀಡಿಯೋಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಘಟನೆಗೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದವು….

Posted by Naanu Gauri on Friday, August 14, 2020


ಓದಿ: ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...