Homeಕರ್ನಾಟಕಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಘಟನೆಗೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದವು

- Advertisement -
- Advertisement -

ನಾನುಗೌರಿ.ಕಾಂಗೆ ಸಿಕ್ಕಿರುವ ಶೃಂಗೇರಿ ಘಟನೆಯ ಎಕ್ಸ್‌ಕ್ಲೂಸಿವ್ ಸಿಸಿಟಿವಿ ವಿಡಿಯೋಗಳು ಹೇಳುವ ಕಥೆ ಆತಂಕಕಾರಿಯಾಗಿದೆ. ಕೇವಲ ಎರಡು ದಿನದಲ್ಲಿ ಸದರಿ ಘಟನೆಯ ಇಡೀ ಚಿತ್ರಣವೇ ಬದಲಾಗಿದ್ದು, ಈ ಸಿಸಿಟಿವಿ ಫೂಟೇಜ್‌ ಚಿಕ್ಕಮಗಳೂರು ಪೊಲೀಸರ ಕೈಗೆ ಸಿಕ್ಕಿದ್ದರಿಂದ. ಖುದ್ದು ಚಿಕ್ಕಮಗಳೂರು ಎಸ್‌ಪಿ ಉಸ್ತುವಾರಿಯಲ್ಲಿ ಘಟನೆಯನ್ನು ಬೇಧಿಸಿರುವ ಪೊಲೀಸರು, ಅದುವರೆಗೆ ನಡೆದಿದ್ದ ಘಟನಾವಳಿಗಳು ತಿರುವು ಮುರುವಾಗುವಂತೆ ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ʼಮುಸ್ಲಿಂ ಸಂಘಟನೆʼಯ ಬಾವುಟ ಬಿದ್ದಿದೆಯೆಂದು ಆರೋಪ ಬಂದು ಉದ್ವಿಗ್ನ ಪರಿಸ್ಥತಿ ಉಂಟಾಗಿತ್ತು. ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಮಾಜಿ ಸಚಿವ ಜೀವರಾಜ್‌ರ ನೇತೃತ್ವದಲ್ಲಿ ಪ್ರತಿಭಟಿಸಿದ್ದವು. ಸದರಿ ಬಾವುಟವು ಎಸ್‌ಡಿಪಿಐ ಸಂಘಟನೆಗೆ ಸೇರಿದ್ದೆಂದೂ, ಈ ಘಟನೆಯನ್ನು ಅವರೇ ಮಾಡಿದ್ದಾರೆಂದೂ ಅವರು ಆರೋಪಿಸಿದ್ದರು. ಎಸ್‌ಡಿಪಿಐ ಪಕ್ಷವನ್ನು ಬ್ಯಾನ್‌ ಮಾಡಬೇಕೆಂದೂ ಅವರುಗಳು ಒತ್ತಾಯಿಸಿದ್ದರು.


ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ; ಇಲ್ಲಿದೆ ನೋಡಿ ವಿಡಿಯೋ


ಆದರೆ ಇದೀಗ ಘಟನೆಯನ್ನು ಪೊಲೀಸರು ಸಿಸಿಟಿವಿ ವಿಡಿಯೋ ವೀಕ್ಷಿಸುವುದರ ಮೂಲಕ ಭೇದಿಸಿದ್ದು ಮಿಲಿಂದ್ ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಹೇಳುವಂತೆ ʼಆತ ಕುಡಿದ ಮತ್ತಿನಲ್ಲಿ ಚಳಿಯಿಂದ ರಕ್ಷಣೆ ಪಡೆಯಲು ಮಸೀದಿಗೆ ನುಗ್ಗಿ ಬಾವುಟವನ್ನು ಕದ್ದುಕೊ೦ಡು ಹೋಗಿದ್ದಾನೆʼ.

ಆದರೆ ಇದೇ ಮಿಲಿಂದ್‌ ಕಳ್ಳತನದ ಕೇಸಿನಲ್ಲಿ ಆರೋಪಿಯಾಗಿ ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೋಗಿದ್ದರು. ಆಗ ಆತನನ್ನು ಬಿಡಿಸಿಕೊಂಡು ಹೋಗಲು ಬಂದವರು ಕೆಲವರು ಸಂಘಟನೆಯವರಾಗಿದ್ದು, ಆ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ. ಅದೇ ಸಂಘಟನೆಯವರೇ ಪ್ರತಿಭಟನೆಯಲ್ಲೂ ಪಾಲ್ಗೊಂಡು, ಇನ್ನಾರದೋ ತಲೆಗೆ ಸದರಿ ದುಷ್ಕೃತ್ಯವನ್ನು ಕಟ್ಟಲು ನೋಡಿದ್ದರೇ ಎಂಬುದೂ ಪತ್ತೆಯಾಗಬೇಕಿದೆ.

ಘಟನೆಯ ಸಿಸಿಟಿವಿ ವಿಡಿಯೊಗಳು ಹೊರಬಿದ್ದಿದೆ. ಅವುಗಳನ್ನು ಕೆಳಗೆ ನೋಡಬಹುದಾಗಿದೆ.

ಶೃಂಗೇರಿಯಲ್ಲಿ ಮಸೀದಿಯಿಂದ ಬಾವುಟ ಕದ್ದುಕೊಂಡು ಹೋಗುವ #ಎಕ್ಸ್‌‌ಕ್ಲೂಸಿವ್_ವೀಡಿಯೋಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಘಟನೆಗೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದವು….

Posted by Naanu Gauri on Friday, August 14, 2020


ಓದಿ: ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...