Homeಕರ್ನಾಟಕಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಘಟನೆಗೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದವು

- Advertisement -
- Advertisement -

ನಾನುಗೌರಿ.ಕಾಂಗೆ ಸಿಕ್ಕಿರುವ ಶೃಂಗೇರಿ ಘಟನೆಯ ಎಕ್ಸ್‌ಕ್ಲೂಸಿವ್ ಸಿಸಿಟಿವಿ ವಿಡಿಯೋಗಳು ಹೇಳುವ ಕಥೆ ಆತಂಕಕಾರಿಯಾಗಿದೆ. ಕೇವಲ ಎರಡು ದಿನದಲ್ಲಿ ಸದರಿ ಘಟನೆಯ ಇಡೀ ಚಿತ್ರಣವೇ ಬದಲಾಗಿದ್ದು, ಈ ಸಿಸಿಟಿವಿ ಫೂಟೇಜ್‌ ಚಿಕ್ಕಮಗಳೂರು ಪೊಲೀಸರ ಕೈಗೆ ಸಿಕ್ಕಿದ್ದರಿಂದ. ಖುದ್ದು ಚಿಕ್ಕಮಗಳೂರು ಎಸ್‌ಪಿ ಉಸ್ತುವಾರಿಯಲ್ಲಿ ಘಟನೆಯನ್ನು ಬೇಧಿಸಿರುವ ಪೊಲೀಸರು, ಅದುವರೆಗೆ ನಡೆದಿದ್ದ ಘಟನಾವಳಿಗಳು ತಿರುವು ಮುರುವಾಗುವಂತೆ ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ʼಮುಸ್ಲಿಂ ಸಂಘಟನೆʼಯ ಬಾವುಟ ಬಿದ್ದಿದೆಯೆಂದು ಆರೋಪ ಬಂದು ಉದ್ವಿಗ್ನ ಪರಿಸ್ಥತಿ ಉಂಟಾಗಿತ್ತು. ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಮಾಜಿ ಸಚಿವ ಜೀವರಾಜ್‌ರ ನೇತೃತ್ವದಲ್ಲಿ ಪ್ರತಿಭಟಿಸಿದ್ದವು. ಸದರಿ ಬಾವುಟವು ಎಸ್‌ಡಿಪಿಐ ಸಂಘಟನೆಗೆ ಸೇರಿದ್ದೆಂದೂ, ಈ ಘಟನೆಯನ್ನು ಅವರೇ ಮಾಡಿದ್ದಾರೆಂದೂ ಅವರು ಆರೋಪಿಸಿದ್ದರು. ಎಸ್‌ಡಿಪಿಐ ಪಕ್ಷವನ್ನು ಬ್ಯಾನ್‌ ಮಾಡಬೇಕೆಂದೂ ಅವರುಗಳು ಒತ್ತಾಯಿಸಿದ್ದರು.


ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ; ಇಲ್ಲಿದೆ ನೋಡಿ ವಿಡಿಯೋ


ಆದರೆ ಇದೀಗ ಘಟನೆಯನ್ನು ಪೊಲೀಸರು ಸಿಸಿಟಿವಿ ವಿಡಿಯೋ ವೀಕ್ಷಿಸುವುದರ ಮೂಲಕ ಭೇದಿಸಿದ್ದು ಮಿಲಿಂದ್ ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಹೇಳುವಂತೆ ʼಆತ ಕುಡಿದ ಮತ್ತಿನಲ್ಲಿ ಚಳಿಯಿಂದ ರಕ್ಷಣೆ ಪಡೆಯಲು ಮಸೀದಿಗೆ ನುಗ್ಗಿ ಬಾವುಟವನ್ನು ಕದ್ದುಕೊ೦ಡು ಹೋಗಿದ್ದಾನೆʼ.

ಆದರೆ ಇದೇ ಮಿಲಿಂದ್‌ ಕಳ್ಳತನದ ಕೇಸಿನಲ್ಲಿ ಆರೋಪಿಯಾಗಿ ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೋಗಿದ್ದರು. ಆಗ ಆತನನ್ನು ಬಿಡಿಸಿಕೊಂಡು ಹೋಗಲು ಬಂದವರು ಕೆಲವರು ಸಂಘಟನೆಯವರಾಗಿದ್ದು, ಆ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ. ಅದೇ ಸಂಘಟನೆಯವರೇ ಪ್ರತಿಭಟನೆಯಲ್ಲೂ ಪಾಲ್ಗೊಂಡು, ಇನ್ನಾರದೋ ತಲೆಗೆ ಸದರಿ ದುಷ್ಕೃತ್ಯವನ್ನು ಕಟ್ಟಲು ನೋಡಿದ್ದರೇ ಎಂಬುದೂ ಪತ್ತೆಯಾಗಬೇಕಿದೆ.

ಘಟನೆಯ ಸಿಸಿಟಿವಿ ವಿಡಿಯೊಗಳು ಹೊರಬಿದ್ದಿದೆ. ಅವುಗಳನ್ನು ಕೆಳಗೆ ನೋಡಬಹುದಾಗಿದೆ.

ಶೃಂಗೇರಿಯಲ್ಲಿ ಮಸೀದಿಯಿಂದ ಬಾವುಟ ಕದ್ದುಕೊಂಡು ಹೋಗುವ #ಎಕ್ಸ್‌‌ಕ್ಲೂಸಿವ್_ವೀಡಿಯೋಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಘಟನೆಗೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದ್ದವು….

Posted by Naanu Gauri on Friday, August 14, 2020


ಓದಿ: ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆ ಮೇಲೆ ಹಸಿರು ಬಾವುಟ; ಕೋಮು ಗಲಭೆ ಸೃಷ್ಟಿಸಲು ಸಂಚು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...