Homeಕರ್ನಾಟಕಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ವೈರಲ್ ಆಗುತ್ತಿವೆ.

- Advertisement -
- Advertisement -

ಶೃಂಗೇರಿಯ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಹೊರಬಂದಿದ್ದು, ಇಡೀ ರಾಜ್ಯವೇ ಈ ವಿಚಾರದಲ್ಲಿ ತಲೆತಗ್ಗಿಸುವಂತಾಗಿದೆ. ಅತ್ಯಾಚಾರ ಆರೋಪದ ಮೇಲೆ ಶೃಂಗೇರಿಯ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಸುಮಾರು 30 ಜನರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿರುವ ಬಹುಪಾಲು ಆರೋಪಿಗಳು ಭಜರಂಗದಳ, ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ 15 ವರ್ಷ ಬಾಲಕಿ ತನ್ನ ತಾಯಿ ನಿಧನರಾದ ನಂತರ ತನ್ನ ಚಿಕ್ಕಮ್ಮನೊಂದಿಗೆ ಇತ್ತೀಚೆಗೆ ಶೃಂಗೇರಿ ತಾಲೂಕಿನ ಕುಂಚೇಬೈಲು ಸಮೀಪದಲ್ಲಿರುವ ಗೋಚುವಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಲ್ಲಿನ ಕೆಲಸಗಾರನೊಬ್ಬ ಬಾಲಕಿಯನ್ನು ಪುಸಲಾಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಆತನ ಸ್ನೇಹಿತರೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯದ ವಿಷಯವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಪೊಟೊಗಳನ್ನು ವೈರಲ್ ಮಾಡುವುದಾಗಿ ಬಾಲಕಿಯನ್ನು ಹೆದರಿಸಿದ್ದಾರೆ. ನಂತರ ಈ ಬಾಲಕಿಯ ಮೇಲೆ ಕಳೆದ 1 ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಯುತ್ತಲೇ ಬಂದಿದೆ. ಇದನ್ನು ಬಾಲಕಿಯ ಚಿಕ್ಕಮ್ಮ ಗೀತಾ ಎಂಬುವವರು ದಂಧೆಯನ್ನಾಗಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು ಎಂದೂ ಸಹ ಹೇಳಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದ ಸ್ಮಾಲ್ ಅಭಿ, ಆನೆಗುಂದ ಗ್ರಾಮದ ರಾಜೇಶ್, ಅಮಿತ್, ಗಿರೀಶ್, ಹೊಳೆಕೊಪ್ಪ ಗ್ರಾಮದ ಮಣಿಕಂಠ, ವಿಕಾಸ್, ನೆಮ್ಮಾರ್ ಸಂಪತ್, ಶೃಂಗೇರಿಯ ನಾರಾಯಣ್ ಗೌಡ, ಅಶ್ವತ್‍ಗೌಡ, ಅಭಿಗೌಡ, ಕುರುಬಗೆರೆ ಸಂತೋಷ್, ಹೆಗ್ಗದ್ದೆಯ ಧೀಕ್ಷಿತ್, ಹೇರೂರಿನ ಸಂತೋಷ್, ಕಿಗ್ಗಾದ ನಿರಂಜನ್, ಬಸ್ ಚಾಲಕ ಖಾಂಡ್ಯ ಯೋಗೀಶ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಬಾಲಕಿಯ ಚಿಕ್ಕಮ್ಮ ಗೀತಾಳನ್ನು 16ನೇ ಆರೋಪಿಯನ್ನಾಗಿಸಲಾಗಿದೆ. ಅಲ್ಲದೇ ಬಾಲ ಕಾರ್ಮಿಕರನ್ನು ಕ್ರಷರ್ ನಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಆರೋಪದಡಿಯಲ್ಲಿ ಕ್ರಷರ್ ಮಾಲಕನ್ನು 17ನೇ ಆರೋಪಿಯನ್ನಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಬಾಲಕಿಗೆ ಲೈಂಗಿಕ ದೌರ್ಜನ್ಯದ ಕಿರುಕುಳ ನೀಡಿರುವ ಆರೋಪಿಗಳ ಪೈಕಿ ಬಹುತೇಕ ಮಂದಿ ಸಂಘಪರಿವಾರದಲ್ಲಿ ಗುರುತಿಸಿಕೊಂಡವರಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಸ್ಮಾಲ್ (ಸ್ಮಾಲ್ ಸಿಗರೇಟ್ ಸೇದುತ್ತಿದ್ದ) ಅಭಿ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದಾನೆ. ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಇನ್ನು ವಿಕಾಸ್ ಎಂಬಾತ ಬಿಜೆಪಿ ಪಕ್ಷದ ಜಿ.ಪಂ ಸದಸ್ಯರೊಬ್ಬರ ಹತ್ತಿರದ ಸಂಬಂಧಿ ಎನ್ನಲಾಗುತ್ತಿದೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಇವರು ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಸಂಪತ್ ಗಿಣಿಕಲ್ (ಬಜರಂಗದಳ ಕಾರ್ಯಕರ್ತ)

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ರಕ್ಷಿಸಿರುವ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಎಂಬವವರು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದು, “ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಮ್ಮ ಮತ್ತು ಕ್ರಷರ್‌ನ ಮಾಲಿಕ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ತನಿಖೆ ನಡೆಸುತ್ತಿದ್ದೇವೆ ಎಂದು ಶೃಂಗೇರಿ ಪೊಲೀಸ್ ಠಾಣೆಯ ಎಸ್‌ಐ ಪ್ರಮೋದ್ ಕುಮಾರ್ ನಾನುಗೌರಿ.ಕಾಂ ಗೆ ತಿಳಿಸಿದರು.

ಸ್ಮಾಲ್ ಅಭಿ

ಇದನ್ನೂ ಓದಿ: ರೈತ ಹೋರಾಟಕ್ಕೆ ಅಮೆರಿಕದ ಚುನಾಯಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಬೆಂಬಲಿಸಿದ್ದು ನಿಜವೆ?

ಕ್ರಷರ್ ನಲ್ಲಿ ಬಾಲ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಬಂದ ದೂರಿನ ಮೇರೆಗೆ ಪರಿಶೀಲನೆ ನಡೆಸಿದಾಗ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ಗೋಚವಳ್ಳಿಯ ಕ್ರಷರ್ ನಿಂದ ರಕ್ಷಣೆ ಮಾಡಲಾಗಿದೆ. ನಂತರ ಕೌನ್ಸಲಿಂಗ್ ವೇಳೆ ತನ್ನ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಹೇಳಿಕೆ ನೀಡಿದ್ದಾಳೆ. ದೌರ್ಜನ್ಯ ಎಸಗಿದ ಸ್ಥಳೀಯ 15 ಮಂದಿಯ ಹೆಸರನ್ನು ಬಾಲಕಿ ಹೇಳಿಕೆಯಲ್ಲಿ ತಿಳಿಸಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ತನ್ನ ಚಿಕ್ಕಮ್ಮ ಗೀತಾ ಎಂಬಾಕೆಯೂ ಸಹಕಾರ ನೀಡಿದ್ದಾಳೆಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಗಿರೀಶ್

ಕ್ರಷರ್‌ನಿಂದ ಬಾಲಕಿಯನ್ನು ರಕ್ಷಣೆ ಮಾಡಿರುವ ಮಕ್ಕಳ ಕಲ್ಯಾಣ ಸಮಿತಿ ಆಕೆಯನ್ನು ಸದ್ಯ ಸ್ವಾಧಾರ್ ಕೇಂದ್ರದಲ್ಲಿ ಇರಿಸಿದ್ದು, ಆಕೆಯ ಹೇಳಿಕೆ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳು ತಮ್ಮ ಪ್ರಭಾವ ಬಳಸಿ ಪಾರಾಗುವ ಸಾಧ್ಯತೆ ಇದ್ದು, ಪೊಲೀಸರು ಈ ಸಂಬಂಧ ಅಗತ್ಯ ಕ್ರಮವಹಿಸಬೇಕೆಂದು ಅಲ್ಲಿನ ಸ್ಥಳೀಯರೊಬ್ಬರು ಮಾಹಿತಿ ನೀಡಿದರು.

ಬಾಲಕಿಯ ಹಿನ್ನೆಲೆ:

ಬಾಲಕಿ 7ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಆಗಲೇ ಈಕೆಯ ತಾಯಿ ನಿಧನರಾಗಿದ್ದರು. ನಂತರ ಬಾಲಕಿಯ ತಂದೆ ಮತ್ತೊಂದು ಮದುವೆಯಾಗಿ ಹಾವೇರಿಯಲ್ಲಿ ವಾಸವಿದ್ದಾನೆ. ಬಾಲಕಿ ತನ್ನ ತಾಯಿಯ ತಮ್ಮನ ಮನೆಯಲ್ಲಿ ಓದುತ್ತಿದ್ದಳು. ಲಾಕ್‍ಡೌನ್ ಸಂದರ್ಭದಲ್ಲಿ ಶೃಂಗೇರಿಯ ಚಿಕ್ಕಮ್ಮನ ಮನೆಗೆ ಬಂದಿದ್ದು, ಬಾಲಕಿ ಚಿಕ್ಕಮ್ಮ ಮನೆಯ ಸಮೀಪದಲ್ಲೇ ಇದ್ದ ಕ್ರಷರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಚಿಕ್ಕಮ್ಮನಿಗೆ ಆರೋಗ್ಯ ಸರಿಯಿಲ್ಲದ ಸಂದರ್ಭದಲ್ಲಿ ಬಾಲಕಿ ಕ್ರಷರ್‌ನಲ್ಲಿ ಕೆಲಸಕ್ಕೆ ಹೋಗಿದ್ದಾಳೆ. ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಆಕೆಯನ್ನು ಮರುಳು ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ನಂತರ ತನ್ನ ಸ್ನೇಹಿತರೊಂದಿಗೂ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಾನೆ.

ಮಣಿಕಂಠ ಹೊಳೆಕೊಪ್ಪ (ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ)

ಆರೋಪಿ ಗೀತಾಳ ಹಿನ್ನೆಲೆ:

ಈಕೆ ಬ್ರಾಹ್ಮಣ ಕುಟುಂಬಕ್ಕೆ ಸೇರಿದವಳಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯವಳು. ಶೃಂಗೇರಿಯಲ್ಲಿ ಬ್ರಾಹ್ಮಣ ಯುವಕರಿಗೆ ಹೆಣ್ಣು ಸಿಗದ ಕಾರಣಕ್ಕೆ ಈಕೆಯನ್ನು ಸುರೇಶ್ ಎಂಬುವವರು ಮದುವೆಯಾಗಿ ಶೃಂಗೇರಿಗೆ ಕರೆದುಕೊಂಡುಬಂದಿದ್ದರು. ಇಲ್ಲಿ ಈಕೆ ಮೊದಲಿನಿಂದಲೂ ಇಂತಹ ದಂಧೆಯಲ್ಲಿ ತೊಡಗಿದ್ದಳು. ನಂತರ ತನ್ನ ಅಕ್ಕನ ಮಗಳನ್ನು ಹಾವೇರಿಯಿಂದ ಕರೆದುಕಂಡು ಬಂದು ಆಕೆಯನ್ನೂ ಇದೇ ದಂಧೆಗೆ ಬಳಸಿಕೊಂಡು ಹಣ ಸಂಪಾದಿಸುತ್ತಿದ್ದಳು. ಇದನ್ನು ಸಹಿಸದ ಸುರೇಶ್ ವಿಚ್ಚೇದನ ಪಡೆಯಲು ನಿರ್ಧರಿಸಿದ. ಆದರೆ ಕಾನೂನು ಪ್ರಕಾರ ಗಂಡನೇ ವಿಚ್ಚೇದನ ನೀಡಿದರೆ ಜೀವನಾಂಶ ಕೊಡಬೆಕಾಗುತ್ತದೆ. ಆದರೆ ಆತನ ಬಳಿ ಅಷ್ಟು ಹಣ ಇಲ್ಲವಾದ್ದರಿಂದ ಗ್ರಾಮಸ್ಥರ ಸಹಕಾರದೊಟ್ಟಿಗೆ ಸೇರಿ, ಈ ದಂಧೆಯನ್ನ ಕಾರಣವಾಗಿಟ್ಟುಕೊಂಡು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಈ ದೂರನ್ನು ತೆಗೆದುಕೊಂಡಿರಲಿಲ್ಲ . ನಂತರ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಂದ ಆದೇಶ ಬಂದ ನಂತರ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಗ್ರಾಮಸ್ಥರೊಬ್ಬರು ಹೇಳಿದರು.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಎಫ್‌ಐಆರ್ ದಾಖಲಾಗಿರುವ ಆರೋಪಿಗಳು ಮತ್ತು ಅವರ ಹಿನ್ನೆಲೆ:

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಜೊತೆ ಆರೋಪಿ ವಿಕಾಸ್

ಇನ್ನೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಶೇಖಡ 90 ರಷ್ಟು ಆರೋಪಿಗಳು ಬಿಜೆಪಿ ಮತ್ತು ಸಂಘಪರಿವಾರದವರೆಂದು ಗ್ರಾಮಸ್ಥರು ಖಚಿತಪಡಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...