Homeಕರ್ನಾಟಕಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

ಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು: ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು. ಎಲೆ ಚುಕ್ಕಿ, ಹಳದಿ ಎಲೆರೋಗದ ಸಂಶೋಧನೆಗಾಗಿ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು ಹಾಗೂ ರೈತರಿಗೆ ಮಾರಕವಾಗಿರುವ ಅರಣ್ಯ ಕಾಯ್ದೆಯ ಸೆಕ್ಷನ್‌ 4(1) ರದ್ದು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಶಕ್ತಿ ಸಂಘಟನೆ ನೇತೃತ್ವದಲ್ಲಿ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶೃಂಗೇರಿ ಬಸ್‌ಸ್ಟಾಂಡ್‌ನಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಗಿದ್ದು, “ನಮ್ಮನ್ನಾಳುವ ಸರ್ಕಾರಗಳು ನಿರಂತರವಾಗಿ ಕೃಷಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಸಂಕಷ್ಟದಿಂದ ನರಳುತ್ತಿರುವ ರೈತಾಪಿ ಜನ, ಕೂಲಿಕಾರ್ಮಿಕರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಇದರ ಪರಿಣಾಮಗಳು ಎಲ್ಲ ಜನವರ್ಗಕ್ಕೂ ತಟ್ಟುತ್ತದೆ. ಈ ಜನವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲೆನಾಡಿನ ಜನರ ಕೈಯಲ್ಲಿ ಒಂದಷ್ಟು ಹಣ ಓಡಾಡುತ್ತಿದೆ ಎಂದರೆ ಅದಕ್ಕೆ ಕಾರಣ ಅಡಿಕೆ ಎಂಬ ವಾಣಿಜ್ಯ ಬೆಳೆ. ಇದಕ್ಕೆ ಎಷ್ಟು ಮೌಲ್ಯವಿತ್ತೋ ಅಷ್ಟೇ ಕಂಟಕ ಮೊದಲಿನಿಂದಲೂ ಎದುರಾಗಿದೆ. ಈಗ ಎದುರಾಗಿರುವ ಎಲೆ ಚುಕ್ಕಿ ರೋಗ ಬೆಳೆಗಾರರನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದೆ. ಅದರ ಜೊತೆಗೆ ಆಮದು ನೀತಿಯನ್ನು ರೂಪಿಸಿ ಸಂಕಷ್ಟಕ್ಕೆ ಸಿಲುಕಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

“ಎಲೆ ಚುಕ್ಕಿ, ಹಳದಿ ಎಲೆ ರೋಗದ ಸಂಶೋಧನೆಗಾಗಿ ತಕ್ಷಣವೇ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯು ರೈತರ ಭೂಮಿಯ ಮಣ್ಣು ಪರೀಕ್ಷೆ ಸೇರಿದಂತೆ ವೈಜ್ಞಾನಿಕ ಪರಿಹಾರಗಳ ಮತ್ತು ಉಪಯೋಗದ ಬಗ್ಗೆ ರೈತರಿಗೆ ಮಾಹಿತಿ ಕೊಡಬೇಕು” ಎಂದು ಒತ್ತಾಯಿಸಲಾಯಿತು.

ಕೊಳೆ ರೋಗ, ಎಲೆ ಚುಕ್ಕಿ ರೋಗದಿಂದ ಬಾಧಿತರಾದ ಎಲ್ಲಾ ರೈತರಿಗೂ ಪರಿಹಾರ ಕೊಡಬೇಕು. ಹಾಗೂ ಕಾರ್ಮಿಕ ಮತ್ತು ಬಡ ಕುಟುಂಬಕ್ಕೆ ವಿವಿಧ ಪ್ಯಾಕೇಟ್ ಘೋಷಿಸಬೇಕು. ಎಲ್ಲಾ ಮಂಜೂರಾತಿ ಹಾಗೂ ಅಭಿವೃದ್ಧಿ ಕೆಲಸಕ್ಕೆ ಮಾರಕವಾದ ಅರಣ್ಯ ಕಾಯ್ದೆಯ ಸೆಕ್ಷನ್ 4(1) ಹಾಗೂ ಇತರೆ ಅರಣ್ಯ ಕಾಯ್ದೆಗಳು ರದ್ದಾಗಬೇಕು. ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಲಾಯಿತು.

ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರಾತಿ ಮಾಡಬೇಕು. ಎಲ್ಲಾ ಹಳ್ಳಿಗಳ ರಸ್ತೆಗಳನ್ನು (ವೈಜ್ಞಾನಿಕವಾಗಿ, ಪರಿಸರಕ್ಕೆ ಪೂರಕವಾಗಿ) ದುರಸ್ಥಿಗೊಳಸಬೇಕು. ರೈತರ ಖಾತೆಗೆ ಜಮಾ ಆಗಬೇಕಿದ್ದ ಪಸಲ್ ಭೀಮಾ ವಿಮಾ ಯೋಜನೆಯ ಹಣವನ್ನು ಪೂರ್ಣ ಪ್ರಮಾಣದಲ್ಲಿ ತಕ್ಷಣವೇ ಬಿಡುಗಡೆ ಮಾಡಿ ಸರ್ಕಾರವೇ ನೇರವಾಗಿ ರೈತರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಸಂಘಟನೆ ತಿಳಿಸಿದೆ.

ಪ್ರತಿಭಟನೆಯಲ್ಲಿ ಆದಿವಾಸಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಕಲ್ಕುಳಿ ವಿಠಲ್ ಹೆಗ್ಡೆ, ಜನಶಕ್ತಿ ರಾಜ್ಯ ಕಾರ್ಯದರ್ಶಿ ಸುರೇಶ್, ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ ಅಶೋಕ್, ಜಿಲ್ಲಾ ಸಮಿತಿ ಗೌರವ ಅಧ್ಯಕ್ಷರಾದ ರಾಧಾ, ಕೌಳಿ ರಾಮು, ಹಾಗಲಾಗಂಚಿ ವೆಂಕಟೇಶ್, ಸರೋಜಾ, ಆನಂದ್, ರೈತ ಮುಖಂಡರಾದ ಕಂಬಳಗೆರೆ ರಾಜೇಂದ್ರ, ನವೀನ್ ಕರ್ವಾಲೆ ಇತರರು ಹಾಜರಿದ್ದರು.

ಏತಕ್ಕಾಗಿ ಈ ಹೋರಾಟ? ಸಂಘಟನೆ ಹೇಳುವುದೇನು?

ಕೊಳೆರೋಗವು ನಿನ್ನೆ ಮೊನ್ನೆ ಜನ್ಮ ತಾಳಿದವುಗಳಲ್ಲ. ಇದಕ್ಕೆ ಕಾರಣ ತೇವಾಂಶ ಜಾಸ್ತಿಯಾಗುವಿಕೆ. ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗೆ ಮನುಷ್ಯರಂತೆ ಸಕಲ ಜಲಚರ ಸಸ್ಯಗಳಿಗೂ ಮಾರಕ ರೋಗಗಳು ಬಾಧಿಸುತ್ತಲೇ ಇರುತ್ತವೆ.

ನಮ್ಮನ್ನಾಳುವ ಸರ್ಕಾರಗಳು ಈ ರೋಗದ ಬಗ್ಗೆ ನಿರಂತರವಾದ ಸಂಶೋಧನೆ ನಡೆಸಿ, ಬಾಧೆಗೊಳಗಾದ ಜನರಿಗೆ ಅವಶ್ಯಕ ಸಲಹೆ ಸೂಚನೆ, ಔಷಧಿ, ಪರಿಹಾರಗಳನ್ನು ನೀಡಬೇಕಿತ್ತು. ಅದನ್ನು ಬಿಟ್ಟು, ರೈತರ ಬಗ್ಗೆ ಒಂದಿನಿತೂ ಕಾಳಜಿಯಿಲ್ಲದ ಸರ್ಕಾರಗಳು ಇನ್ನಷ್ಟು ಕೃಷಿ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಉತ್ಸುಕವಾಗಿದೆ. ತೊಂಡೆರೋಗ, ಎಲೆ ಚುಕ್ಕಿ ರೋಗ, ಕೊಳೆ ರೋಗದ ಸಮಸ್ಯೆ ತಾಂಡವವಾಡುತ್ತಿದೆ. ಈಗ ಕೇಂದ್ರ ಸರ್ಕಾರ ಭೂತನ್ ಅಡಿಕೆಯನ್ನು ಸುಂಕರಹಿತವಾಗಿ ಆಮದು ಮಾಡಿಕೊಳ್ಳಲು ತಯಾರಿ ನಡೆಸಿದೆ. ಇದು ಇಲ್ಲಿನ ರೈತರ ಬದುಕಿಗೆ ಹಾಗೂ ಮಲೆನಾಡಿನ ಆರ್ಥಿಕ ಚಟುವಟಿಕೆಗೆ ಕೊಡಲಿ ಪೆಟ್ಟು ಕೊಡಲಿದೆ. 17,000 ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಹುನ್ನಾರದ ಹಿಂದೆ ಅಮಿತ್‌ ಶಾ ಮಗ ಜೈ ಶಾ, ಹಾಗೂ ಕ್ಯಾಂಪ್ಪೋ ಅಧ್ಯಕ್ಷರ ಮಗನ ಸಹಯೋಗದಲ್ಲಿ ನಡೆಯುತ್ತಿರುವ “ಗಣೇಶ್ ಟ್ರೇಡಿಂಗ್” ಎಂಬ ಕಂಪನಿಯ ಕೈಗಳಿವೆ, ಎನ್ನುವ ಆರೋಪವೂ ಕೇಳಿ ಬರುತ್ತಿದೆ.

ನಮ್ಮ ದೇಶದಲ್ಲಿ ಲಕ್ಷಾಂತರ ಎಕರೆ ಅಡಿಕೆ ತೋಟಗಳಿವೆ. 70 ಲಕ್ಷಕ್ಕೂ ಹೆಚ್ಚು ಅಡಿಕೆ ಕೃಷಿ ಕುಟುಂಬಗಳಿವೆ. ಹಾಗೆ ಇದನ್ನು ನಂಬಿ ತಮ್ಮ ಬದುಕನ್ನು ಕಟ್ಟಿಕೊಂಡ ಕೋಟ್ಯಂತರ ಕೂಲಿ ಕಾರ್ಮಿಕರಿದ್ದಾರೆ. ಸರ್ಕಾರ ಈ ಸುಂಕರಹಿತ ಆಮದು ನೀತಿಯಿಂದ ಹತ್ತಾರು ಕೋಟಿ ಕುಟುಂಬಗಳನ್ನು ಬೀದಿಗೆ ತಳ್ಳಲಿದೆ. ಮಲೆನಾಡ ಹಾಗೂ ಇತರೆ ಪ್ರದೇಶದ ಬೀದಿ ವ್ಯಾಪಾರಿಗಳು, ದಲ್ಲಾಳಿ ವ್ಯಾಪಾರಿಗಳು, ದಿನಸಿ ಅಂಗಡಿ ವ್ಯಾಪಾರಸ್ಥರಿಗೂ ಈ ನೀತಿ ದೊಡ್ಡ ಹೊಡೆತ ಕೊಡಲಿದೆ. ಅಷ್ಟೇ ಅಲ್ಲದೇ, ಮಿತ್ರರಾಷ್ಟ್ರವಾದ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ನೆಪದಲ್ಲಿ ಹಿಂಬಾಗಿಲಿನಿಂದ ಬರ್ಮಾ ದೇಶದ ಅಡಿಕೆ ತರಿಸುವ ಸಾಧ್ಯತೆಯೇ ಹೆಚ್ಚು.

ಇದನ್ನೂ ಓದಿರಿ: ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

ಭೂತಾನ್ ನಿಂದ ಭಾರತಕ್ಕೆ ಸಮುದ್ರ ಮಾರ್ಗವಿಲ್ಲ. ಬರ್ಮಾದಿಂದ ಕೊಲ್ಕತ್ತಾಗೆ ಸಮುದ್ರ ಮಾರ್ಗವಿದೆ ಮತ್ತು ಈ ಬಂದರಿನಲ್ಲಿ ಸುಂಕವಿಲ್ಲ. ಅಂದ್ರೆ ಭೂತಾನ್ ಅಡಿಕೆಯ ಹೆಸರಿನಲ್ಲಿ ಬರ್ಮಾ ದೇಶದ ಅಡಿಕೆ ನಮ್ಮ ದೇಶಕ್ಕೆ ಕಳ್ಳ ಮಾರ್ಗದಲ್ಲಿ ಬರುವುದರಲ್ಲಿ ಸಂಶಯವಿಲ್ಲ. ಅದರ ಪ್ರಮಾಣ ಕೂಡ 17,000 ಟನ್‌ಗೆ ಬದಲಾಗಿ ಲಕ್ಷಾಂತರ ಟನ್ ಭಾರತದ ಮಾರುಕಟ್ಟೆಯನ್ನು ಆವರಿಸುವ ಎಲ್ಲಾ ಸಾಧ್ಯತೆಗಳಿವೆ. ಈ ಸುಳ್ಳಿನ ಕವಚದೊಳಗೆ ರೈತರ ಮತ್ತು ಆರ್ಥಿಕ ವಹಿವಾಟಿನ ನೋವಿನ ಬದುಕಿದೆ. ಇದನ್ನು ಪ್ರಜ್ಞಾವಂತ ಜನರು ಬೀದಿಗಿಳಿದು ವಿರೋಧಿಸಬೇಕಲ್ಲವೇ?

ಹಾಗೆಯೇ ಮಲೆನಾಡಿನ ಜನರನ್ನು ಬಿಟ್ಟುಬಿಡದೆ ಬಾಧಿಸುತ್ತಿರುವ ಸಮಸ್ಯೆಗಳಲ್ಲಿ ಮತ್ತೊಂದು ಅರಣ್ಯ ಕಾಯ್ದೆಗಳು. ಇದರ ಭಾಗವಾಗಿ ಎಲ್ಲೆಡೆಯು ಜನರನ್ನ ಬಾಧಿಸುತ್ತಿರುವುದು ಸೆಕ್ಷನ್ 4(1). ಕಂದಾಯ ಭೂಮಿಯನ್ನು ಕರಾಳ ಸೆಕ್ಷನ್‌ಗಳ ಅಡಿಯಲ್ಲಿ ಮೀಸಲು ಅರಣ್ಯ ಮಾಡುವ ಹುನ್ನಾರವಿದೆ. ಈ ಕಾಡನ್ನು ನಂಬಿ ಬದುಕು ಕಟ್ಟಿಕೊಂಡವರು ಸಾವಿರಾರು ಜನ ಇವತ್ತಿಗೂ ನೂರಾರು ವರ್ಷಗಳಿಂದ ಅಲ್ಲಿ ಬದುಕುತ್ತಿದ್ದರೂ, ತಾನು ನಿಂತ ನೆಲ ನನ್ನದೇ ಎಂದು ಹೇಳಲು ಸಾಧ್ಯವಿಲ್ಲ ಅನ್ನುವ ಸ್ಥಿತಿ ಉಂಟಾಗಿದೆ. ಜೀವ ಭದ್ರತೆಗಾಗಿ ಒಂದು ಅಧಿಕೃತ ದಾಖಲಾತಿ ಇಲ್ಲವಾಗಿದೆ. 94ಸಿ, 94ಸಿಸಿ, 5 ಮಂಜೂರಾತಿಗಾಗಿ ವಿವಿಧ ಫಾರಂ ಹಾಕಿಕೊಂಡು ಆದೇಶಕ್ಕಾಗಿ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ಎಲ್ಲದಕ್ಕೂ ಈ ಕಾಯ್ದೆಗಳನ್ನು ನೆಪವಾಗಿಟ್ಟುಕೊಂಡು, ಜನರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಈ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...