Homeಕರ್ನಾಟಕಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

ಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು: ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು. ಎಲೆ ಚುಕ್ಕಿ, ಹಳದಿ ಎಲೆರೋಗದ ಸಂಶೋಧನೆಗಾಗಿ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು ಹಾಗೂ ರೈತರಿಗೆ ಮಾರಕವಾಗಿರುವ ಅರಣ್ಯ ಕಾಯ್ದೆಯ ಸೆಕ್ಷನ್‌ 4(1) ರದ್ದು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಶಕ್ತಿ ಸಂಘಟನೆ ನೇತೃತ್ವದಲ್ಲಿ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶೃಂಗೇರಿ ಬಸ್‌ಸ್ಟಾಂಡ್‌ನಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಗಿದ್ದು, “ನಮ್ಮನ್ನಾಳುವ ಸರ್ಕಾರಗಳು ನಿರಂತರವಾಗಿ ಕೃಷಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಸಂಕಷ್ಟದಿಂದ ನರಳುತ್ತಿರುವ ರೈತಾಪಿ ಜನ, ಕೂಲಿಕಾರ್ಮಿಕರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಇದರ ಪರಿಣಾಮಗಳು ಎಲ್ಲ ಜನವರ್ಗಕ್ಕೂ ತಟ್ಟುತ್ತದೆ. ಈ ಜನವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲೆನಾಡಿನ ಜನರ ಕೈಯಲ್ಲಿ ಒಂದಷ್ಟು ಹಣ ಓಡಾಡುತ್ತಿದೆ ಎಂದರೆ ಅದಕ್ಕೆ ಕಾರಣ ಅಡಿಕೆ ಎಂಬ ವಾಣಿಜ್ಯ ಬೆಳೆ. ಇದಕ್ಕೆ ಎಷ್ಟು ಮೌಲ್ಯವಿತ್ತೋ ಅಷ್ಟೇ ಕಂಟಕ ಮೊದಲಿನಿಂದಲೂ ಎದುರಾಗಿದೆ. ಈಗ ಎದುರಾಗಿರುವ ಎಲೆ ಚುಕ್ಕಿ ರೋಗ ಬೆಳೆಗಾರರನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದೆ. ಅದರ ಜೊತೆಗೆ ಆಮದು ನೀತಿಯನ್ನು ರೂಪಿಸಿ ಸಂಕಷ್ಟಕ್ಕೆ ಸಿಲುಕಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

“ಎಲೆ ಚುಕ್ಕಿ, ಹಳದಿ ಎಲೆ ರೋಗದ ಸಂಶೋಧನೆಗಾಗಿ ತಕ್ಷಣವೇ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯು ರೈತರ ಭೂಮಿಯ ಮಣ್ಣು ಪರೀಕ್ಷೆ ಸೇರಿದಂತೆ ವೈಜ್ಞಾನಿಕ ಪರಿಹಾರಗಳ ಮತ್ತು ಉಪಯೋಗದ ಬಗ್ಗೆ ರೈತರಿಗೆ ಮಾಹಿತಿ ಕೊಡಬೇಕು” ಎಂದು ಒತ್ತಾಯಿಸಲಾಯಿತು.

ಕೊಳೆ ರೋಗ, ಎಲೆ ಚುಕ್ಕಿ ರೋಗದಿಂದ ಬಾಧಿತರಾದ ಎಲ್ಲಾ ರೈತರಿಗೂ ಪರಿಹಾರ ಕೊಡಬೇಕು. ಹಾಗೂ ಕಾರ್ಮಿಕ ಮತ್ತು ಬಡ ಕುಟುಂಬಕ್ಕೆ ವಿವಿಧ ಪ್ಯಾಕೇಟ್ ಘೋಷಿಸಬೇಕು. ಎಲ್ಲಾ ಮಂಜೂರಾತಿ ಹಾಗೂ ಅಭಿವೃದ್ಧಿ ಕೆಲಸಕ್ಕೆ ಮಾರಕವಾದ ಅರಣ್ಯ ಕಾಯ್ದೆಯ ಸೆಕ್ಷನ್ 4(1) ಹಾಗೂ ಇತರೆ ಅರಣ್ಯ ಕಾಯ್ದೆಗಳು ರದ್ದಾಗಬೇಕು. ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಲಾಯಿತು.

ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರಾತಿ ಮಾಡಬೇಕು. ಎಲ್ಲಾ ಹಳ್ಳಿಗಳ ರಸ್ತೆಗಳನ್ನು (ವೈಜ್ಞಾನಿಕವಾಗಿ, ಪರಿಸರಕ್ಕೆ ಪೂರಕವಾಗಿ) ದುರಸ್ಥಿಗೊಳಸಬೇಕು. ರೈತರ ಖಾತೆಗೆ ಜಮಾ ಆಗಬೇಕಿದ್ದ ಪಸಲ್ ಭೀಮಾ ವಿಮಾ ಯೋಜನೆಯ ಹಣವನ್ನು ಪೂರ್ಣ ಪ್ರಮಾಣದಲ್ಲಿ ತಕ್ಷಣವೇ ಬಿಡುಗಡೆ ಮಾಡಿ ಸರ್ಕಾರವೇ ನೇರವಾಗಿ ರೈತರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಸಂಘಟನೆ ತಿಳಿಸಿದೆ.

ಪ್ರತಿಭಟನೆಯಲ್ಲಿ ಆದಿವಾಸಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಕಲ್ಕುಳಿ ವಿಠಲ್ ಹೆಗ್ಡೆ, ಜನಶಕ್ತಿ ರಾಜ್ಯ ಕಾರ್ಯದರ್ಶಿ ಸುರೇಶ್, ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ ಅಶೋಕ್, ಜಿಲ್ಲಾ ಸಮಿತಿ ಗೌರವ ಅಧ್ಯಕ್ಷರಾದ ರಾಧಾ, ಕೌಳಿ ರಾಮು, ಹಾಗಲಾಗಂಚಿ ವೆಂಕಟೇಶ್, ಸರೋಜಾ, ಆನಂದ್, ರೈತ ಮುಖಂಡರಾದ ಕಂಬಳಗೆರೆ ರಾಜೇಂದ್ರ, ನವೀನ್ ಕರ್ವಾಲೆ ಇತರರು ಹಾಜರಿದ್ದರು.

ಏತಕ್ಕಾಗಿ ಈ ಹೋರಾಟ? ಸಂಘಟನೆ ಹೇಳುವುದೇನು?

ಕೊಳೆರೋಗವು ನಿನ್ನೆ ಮೊನ್ನೆ ಜನ್ಮ ತಾಳಿದವುಗಳಲ್ಲ. ಇದಕ್ಕೆ ಕಾರಣ ತೇವಾಂಶ ಜಾಸ್ತಿಯಾಗುವಿಕೆ. ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗೆ ಮನುಷ್ಯರಂತೆ ಸಕಲ ಜಲಚರ ಸಸ್ಯಗಳಿಗೂ ಮಾರಕ ರೋಗಗಳು ಬಾಧಿಸುತ್ತಲೇ ಇರುತ್ತವೆ.

ನಮ್ಮನ್ನಾಳುವ ಸರ್ಕಾರಗಳು ಈ ರೋಗದ ಬಗ್ಗೆ ನಿರಂತರವಾದ ಸಂಶೋಧನೆ ನಡೆಸಿ, ಬಾಧೆಗೊಳಗಾದ ಜನರಿಗೆ ಅವಶ್ಯಕ ಸಲಹೆ ಸೂಚನೆ, ಔಷಧಿ, ಪರಿಹಾರಗಳನ್ನು ನೀಡಬೇಕಿತ್ತು. ಅದನ್ನು ಬಿಟ್ಟು, ರೈತರ ಬಗ್ಗೆ ಒಂದಿನಿತೂ ಕಾಳಜಿಯಿಲ್ಲದ ಸರ್ಕಾರಗಳು ಇನ್ನಷ್ಟು ಕೃಷಿ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಉತ್ಸುಕವಾಗಿದೆ. ತೊಂಡೆರೋಗ, ಎಲೆ ಚುಕ್ಕಿ ರೋಗ, ಕೊಳೆ ರೋಗದ ಸಮಸ್ಯೆ ತಾಂಡವವಾಡುತ್ತಿದೆ. ಈಗ ಕೇಂದ್ರ ಸರ್ಕಾರ ಭೂತನ್ ಅಡಿಕೆಯನ್ನು ಸುಂಕರಹಿತವಾಗಿ ಆಮದು ಮಾಡಿಕೊಳ್ಳಲು ತಯಾರಿ ನಡೆಸಿದೆ. ಇದು ಇಲ್ಲಿನ ರೈತರ ಬದುಕಿಗೆ ಹಾಗೂ ಮಲೆನಾಡಿನ ಆರ್ಥಿಕ ಚಟುವಟಿಕೆಗೆ ಕೊಡಲಿ ಪೆಟ್ಟು ಕೊಡಲಿದೆ. 17,000 ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಹುನ್ನಾರದ ಹಿಂದೆ ಅಮಿತ್‌ ಶಾ ಮಗ ಜೈ ಶಾ, ಹಾಗೂ ಕ್ಯಾಂಪ್ಪೋ ಅಧ್ಯಕ್ಷರ ಮಗನ ಸಹಯೋಗದಲ್ಲಿ ನಡೆಯುತ್ತಿರುವ “ಗಣೇಶ್ ಟ್ರೇಡಿಂಗ್” ಎಂಬ ಕಂಪನಿಯ ಕೈಗಳಿವೆ, ಎನ್ನುವ ಆರೋಪವೂ ಕೇಳಿ ಬರುತ್ತಿದೆ.

ನಮ್ಮ ದೇಶದಲ್ಲಿ ಲಕ್ಷಾಂತರ ಎಕರೆ ಅಡಿಕೆ ತೋಟಗಳಿವೆ. 70 ಲಕ್ಷಕ್ಕೂ ಹೆಚ್ಚು ಅಡಿಕೆ ಕೃಷಿ ಕುಟುಂಬಗಳಿವೆ. ಹಾಗೆ ಇದನ್ನು ನಂಬಿ ತಮ್ಮ ಬದುಕನ್ನು ಕಟ್ಟಿಕೊಂಡ ಕೋಟ್ಯಂತರ ಕೂಲಿ ಕಾರ್ಮಿಕರಿದ್ದಾರೆ. ಸರ್ಕಾರ ಈ ಸುಂಕರಹಿತ ಆಮದು ನೀತಿಯಿಂದ ಹತ್ತಾರು ಕೋಟಿ ಕುಟುಂಬಗಳನ್ನು ಬೀದಿಗೆ ತಳ್ಳಲಿದೆ. ಮಲೆನಾಡ ಹಾಗೂ ಇತರೆ ಪ್ರದೇಶದ ಬೀದಿ ವ್ಯಾಪಾರಿಗಳು, ದಲ್ಲಾಳಿ ವ್ಯಾಪಾರಿಗಳು, ದಿನಸಿ ಅಂಗಡಿ ವ್ಯಾಪಾರಸ್ಥರಿಗೂ ಈ ನೀತಿ ದೊಡ್ಡ ಹೊಡೆತ ಕೊಡಲಿದೆ. ಅಷ್ಟೇ ಅಲ್ಲದೇ, ಮಿತ್ರರಾಷ್ಟ್ರವಾದ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ನೆಪದಲ್ಲಿ ಹಿಂಬಾಗಿಲಿನಿಂದ ಬರ್ಮಾ ದೇಶದ ಅಡಿಕೆ ತರಿಸುವ ಸಾಧ್ಯತೆಯೇ ಹೆಚ್ಚು.

ಇದನ್ನೂ ಓದಿರಿ: ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

ಭೂತಾನ್ ನಿಂದ ಭಾರತಕ್ಕೆ ಸಮುದ್ರ ಮಾರ್ಗವಿಲ್ಲ. ಬರ್ಮಾದಿಂದ ಕೊಲ್ಕತ್ತಾಗೆ ಸಮುದ್ರ ಮಾರ್ಗವಿದೆ ಮತ್ತು ಈ ಬಂದರಿನಲ್ಲಿ ಸುಂಕವಿಲ್ಲ. ಅಂದ್ರೆ ಭೂತಾನ್ ಅಡಿಕೆಯ ಹೆಸರಿನಲ್ಲಿ ಬರ್ಮಾ ದೇಶದ ಅಡಿಕೆ ನಮ್ಮ ದೇಶಕ್ಕೆ ಕಳ್ಳ ಮಾರ್ಗದಲ್ಲಿ ಬರುವುದರಲ್ಲಿ ಸಂಶಯವಿಲ್ಲ. ಅದರ ಪ್ರಮಾಣ ಕೂಡ 17,000 ಟನ್‌ಗೆ ಬದಲಾಗಿ ಲಕ್ಷಾಂತರ ಟನ್ ಭಾರತದ ಮಾರುಕಟ್ಟೆಯನ್ನು ಆವರಿಸುವ ಎಲ್ಲಾ ಸಾಧ್ಯತೆಗಳಿವೆ. ಈ ಸುಳ್ಳಿನ ಕವಚದೊಳಗೆ ರೈತರ ಮತ್ತು ಆರ್ಥಿಕ ವಹಿವಾಟಿನ ನೋವಿನ ಬದುಕಿದೆ. ಇದನ್ನು ಪ್ರಜ್ಞಾವಂತ ಜನರು ಬೀದಿಗಿಳಿದು ವಿರೋಧಿಸಬೇಕಲ್ಲವೇ?

ಹಾಗೆಯೇ ಮಲೆನಾಡಿನ ಜನರನ್ನು ಬಿಟ್ಟುಬಿಡದೆ ಬಾಧಿಸುತ್ತಿರುವ ಸಮಸ್ಯೆಗಳಲ್ಲಿ ಮತ್ತೊಂದು ಅರಣ್ಯ ಕಾಯ್ದೆಗಳು. ಇದರ ಭಾಗವಾಗಿ ಎಲ್ಲೆಡೆಯು ಜನರನ್ನ ಬಾಧಿಸುತ್ತಿರುವುದು ಸೆಕ್ಷನ್ 4(1). ಕಂದಾಯ ಭೂಮಿಯನ್ನು ಕರಾಳ ಸೆಕ್ಷನ್‌ಗಳ ಅಡಿಯಲ್ಲಿ ಮೀಸಲು ಅರಣ್ಯ ಮಾಡುವ ಹುನ್ನಾರವಿದೆ. ಈ ಕಾಡನ್ನು ನಂಬಿ ಬದುಕು ಕಟ್ಟಿಕೊಂಡವರು ಸಾವಿರಾರು ಜನ ಇವತ್ತಿಗೂ ನೂರಾರು ವರ್ಷಗಳಿಂದ ಅಲ್ಲಿ ಬದುಕುತ್ತಿದ್ದರೂ, ತಾನು ನಿಂತ ನೆಲ ನನ್ನದೇ ಎಂದು ಹೇಳಲು ಸಾಧ್ಯವಿಲ್ಲ ಅನ್ನುವ ಸ್ಥಿತಿ ಉಂಟಾಗಿದೆ. ಜೀವ ಭದ್ರತೆಗಾಗಿ ಒಂದು ಅಧಿಕೃತ ದಾಖಲಾತಿ ಇಲ್ಲವಾಗಿದೆ. 94ಸಿ, 94ಸಿಸಿ, 5 ಮಂಜೂರಾತಿಗಾಗಿ ವಿವಿಧ ಫಾರಂ ಹಾಕಿಕೊಂಡು ಆದೇಶಕ್ಕಾಗಿ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ಎಲ್ಲದಕ್ಕೂ ಈ ಕಾಯ್ದೆಗಳನ್ನು ನೆಪವಾಗಿಟ್ಟುಕೊಂಡು, ಜನರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಈ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...