Homeಕರ್ನಾಟಕಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

ಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು: ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು. ಎಲೆ ಚುಕ್ಕಿ, ಹಳದಿ ಎಲೆರೋಗದ ಸಂಶೋಧನೆಗಾಗಿ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು ಹಾಗೂ ರೈತರಿಗೆ ಮಾರಕವಾಗಿರುವ ಅರಣ್ಯ ಕಾಯ್ದೆಯ ಸೆಕ್ಷನ್‌ 4(1) ರದ್ದು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಶಕ್ತಿ ಸಂಘಟನೆ ನೇತೃತ್ವದಲ್ಲಿ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶೃಂಗೇರಿ ಬಸ್‌ಸ್ಟಾಂಡ್‌ನಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಗಿದ್ದು, “ನಮ್ಮನ್ನಾಳುವ ಸರ್ಕಾರಗಳು ನಿರಂತರವಾಗಿ ಕೃಷಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಸಂಕಷ್ಟದಿಂದ ನರಳುತ್ತಿರುವ ರೈತಾಪಿ ಜನ, ಕೂಲಿಕಾರ್ಮಿಕರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಇದರ ಪರಿಣಾಮಗಳು ಎಲ್ಲ ಜನವರ್ಗಕ್ಕೂ ತಟ್ಟುತ್ತದೆ. ಈ ಜನವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲೆನಾಡಿನ ಜನರ ಕೈಯಲ್ಲಿ ಒಂದಷ್ಟು ಹಣ ಓಡಾಡುತ್ತಿದೆ ಎಂದರೆ ಅದಕ್ಕೆ ಕಾರಣ ಅಡಿಕೆ ಎಂಬ ವಾಣಿಜ್ಯ ಬೆಳೆ. ಇದಕ್ಕೆ ಎಷ್ಟು ಮೌಲ್ಯವಿತ್ತೋ ಅಷ್ಟೇ ಕಂಟಕ ಮೊದಲಿನಿಂದಲೂ ಎದುರಾಗಿದೆ. ಈಗ ಎದುರಾಗಿರುವ ಎಲೆ ಚುಕ್ಕಿ ರೋಗ ಬೆಳೆಗಾರರನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದೆ. ಅದರ ಜೊತೆಗೆ ಆಮದು ನೀತಿಯನ್ನು ರೂಪಿಸಿ ಸಂಕಷ್ಟಕ್ಕೆ ಸಿಲುಕಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

“ಎಲೆ ಚುಕ್ಕಿ, ಹಳದಿ ಎಲೆ ರೋಗದ ಸಂಶೋಧನೆಗಾಗಿ ತಕ್ಷಣವೇ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯು ರೈತರ ಭೂಮಿಯ ಮಣ್ಣು ಪರೀಕ್ಷೆ ಸೇರಿದಂತೆ ವೈಜ್ಞಾನಿಕ ಪರಿಹಾರಗಳ ಮತ್ತು ಉಪಯೋಗದ ಬಗ್ಗೆ ರೈತರಿಗೆ ಮಾಹಿತಿ ಕೊಡಬೇಕು” ಎಂದು ಒತ್ತಾಯಿಸಲಾಯಿತು.

ಕೊಳೆ ರೋಗ, ಎಲೆ ಚುಕ್ಕಿ ರೋಗದಿಂದ ಬಾಧಿತರಾದ ಎಲ್ಲಾ ರೈತರಿಗೂ ಪರಿಹಾರ ಕೊಡಬೇಕು. ಹಾಗೂ ಕಾರ್ಮಿಕ ಮತ್ತು ಬಡ ಕುಟುಂಬಕ್ಕೆ ವಿವಿಧ ಪ್ಯಾಕೇಟ್ ಘೋಷಿಸಬೇಕು. ಎಲ್ಲಾ ಮಂಜೂರಾತಿ ಹಾಗೂ ಅಭಿವೃದ್ಧಿ ಕೆಲಸಕ್ಕೆ ಮಾರಕವಾದ ಅರಣ್ಯ ಕಾಯ್ದೆಯ ಸೆಕ್ಷನ್ 4(1) ಹಾಗೂ ಇತರೆ ಅರಣ್ಯ ಕಾಯ್ದೆಗಳು ರದ್ದಾಗಬೇಕು. ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಲಾಯಿತು.

ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರಾತಿ ಮಾಡಬೇಕು. ಎಲ್ಲಾ ಹಳ್ಳಿಗಳ ರಸ್ತೆಗಳನ್ನು (ವೈಜ್ಞಾನಿಕವಾಗಿ, ಪರಿಸರಕ್ಕೆ ಪೂರಕವಾಗಿ) ದುರಸ್ಥಿಗೊಳಸಬೇಕು. ರೈತರ ಖಾತೆಗೆ ಜಮಾ ಆಗಬೇಕಿದ್ದ ಪಸಲ್ ಭೀಮಾ ವಿಮಾ ಯೋಜನೆಯ ಹಣವನ್ನು ಪೂರ್ಣ ಪ್ರಮಾಣದಲ್ಲಿ ತಕ್ಷಣವೇ ಬಿಡುಗಡೆ ಮಾಡಿ ಸರ್ಕಾರವೇ ನೇರವಾಗಿ ರೈತರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಸಂಘಟನೆ ತಿಳಿಸಿದೆ.

ಪ್ರತಿಭಟನೆಯಲ್ಲಿ ಆದಿವಾಸಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಕಲ್ಕುಳಿ ವಿಠಲ್ ಹೆಗ್ಡೆ, ಜನಶಕ್ತಿ ರಾಜ್ಯ ಕಾರ್ಯದರ್ಶಿ ಸುರೇಶ್, ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ ಅಶೋಕ್, ಜಿಲ್ಲಾ ಸಮಿತಿ ಗೌರವ ಅಧ್ಯಕ್ಷರಾದ ರಾಧಾ, ಕೌಳಿ ರಾಮು, ಹಾಗಲಾಗಂಚಿ ವೆಂಕಟೇಶ್, ಸರೋಜಾ, ಆನಂದ್, ರೈತ ಮುಖಂಡರಾದ ಕಂಬಳಗೆರೆ ರಾಜೇಂದ್ರ, ನವೀನ್ ಕರ್ವಾಲೆ ಇತರರು ಹಾಜರಿದ್ದರು.

ಏತಕ್ಕಾಗಿ ಈ ಹೋರಾಟ? ಸಂಘಟನೆ ಹೇಳುವುದೇನು?

ಕೊಳೆರೋಗವು ನಿನ್ನೆ ಮೊನ್ನೆ ಜನ್ಮ ತಾಳಿದವುಗಳಲ್ಲ. ಇದಕ್ಕೆ ಕಾರಣ ತೇವಾಂಶ ಜಾಸ್ತಿಯಾಗುವಿಕೆ. ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗೆ ಮನುಷ್ಯರಂತೆ ಸಕಲ ಜಲಚರ ಸಸ್ಯಗಳಿಗೂ ಮಾರಕ ರೋಗಗಳು ಬಾಧಿಸುತ್ತಲೇ ಇರುತ್ತವೆ.

ನಮ್ಮನ್ನಾಳುವ ಸರ್ಕಾರಗಳು ಈ ರೋಗದ ಬಗ್ಗೆ ನಿರಂತರವಾದ ಸಂಶೋಧನೆ ನಡೆಸಿ, ಬಾಧೆಗೊಳಗಾದ ಜನರಿಗೆ ಅವಶ್ಯಕ ಸಲಹೆ ಸೂಚನೆ, ಔಷಧಿ, ಪರಿಹಾರಗಳನ್ನು ನೀಡಬೇಕಿತ್ತು. ಅದನ್ನು ಬಿಟ್ಟು, ರೈತರ ಬಗ್ಗೆ ಒಂದಿನಿತೂ ಕಾಳಜಿಯಿಲ್ಲದ ಸರ್ಕಾರಗಳು ಇನ್ನಷ್ಟು ಕೃಷಿ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಉತ್ಸುಕವಾಗಿದೆ. ತೊಂಡೆರೋಗ, ಎಲೆ ಚುಕ್ಕಿ ರೋಗ, ಕೊಳೆ ರೋಗದ ಸಮಸ್ಯೆ ತಾಂಡವವಾಡುತ್ತಿದೆ. ಈಗ ಕೇಂದ್ರ ಸರ್ಕಾರ ಭೂತನ್ ಅಡಿಕೆಯನ್ನು ಸುಂಕರಹಿತವಾಗಿ ಆಮದು ಮಾಡಿಕೊಳ್ಳಲು ತಯಾರಿ ನಡೆಸಿದೆ. ಇದು ಇಲ್ಲಿನ ರೈತರ ಬದುಕಿಗೆ ಹಾಗೂ ಮಲೆನಾಡಿನ ಆರ್ಥಿಕ ಚಟುವಟಿಕೆಗೆ ಕೊಡಲಿ ಪೆಟ್ಟು ಕೊಡಲಿದೆ. 17,000 ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಹುನ್ನಾರದ ಹಿಂದೆ ಅಮಿತ್‌ ಶಾ ಮಗ ಜೈ ಶಾ, ಹಾಗೂ ಕ್ಯಾಂಪ್ಪೋ ಅಧ್ಯಕ್ಷರ ಮಗನ ಸಹಯೋಗದಲ್ಲಿ ನಡೆಯುತ್ತಿರುವ “ಗಣೇಶ್ ಟ್ರೇಡಿಂಗ್” ಎಂಬ ಕಂಪನಿಯ ಕೈಗಳಿವೆ, ಎನ್ನುವ ಆರೋಪವೂ ಕೇಳಿ ಬರುತ್ತಿದೆ.

ನಮ್ಮ ದೇಶದಲ್ಲಿ ಲಕ್ಷಾಂತರ ಎಕರೆ ಅಡಿಕೆ ತೋಟಗಳಿವೆ. 70 ಲಕ್ಷಕ್ಕೂ ಹೆಚ್ಚು ಅಡಿಕೆ ಕೃಷಿ ಕುಟುಂಬಗಳಿವೆ. ಹಾಗೆ ಇದನ್ನು ನಂಬಿ ತಮ್ಮ ಬದುಕನ್ನು ಕಟ್ಟಿಕೊಂಡ ಕೋಟ್ಯಂತರ ಕೂಲಿ ಕಾರ್ಮಿಕರಿದ್ದಾರೆ. ಸರ್ಕಾರ ಈ ಸುಂಕರಹಿತ ಆಮದು ನೀತಿಯಿಂದ ಹತ್ತಾರು ಕೋಟಿ ಕುಟುಂಬಗಳನ್ನು ಬೀದಿಗೆ ತಳ್ಳಲಿದೆ. ಮಲೆನಾಡ ಹಾಗೂ ಇತರೆ ಪ್ರದೇಶದ ಬೀದಿ ವ್ಯಾಪಾರಿಗಳು, ದಲ್ಲಾಳಿ ವ್ಯಾಪಾರಿಗಳು, ದಿನಸಿ ಅಂಗಡಿ ವ್ಯಾಪಾರಸ್ಥರಿಗೂ ಈ ನೀತಿ ದೊಡ್ಡ ಹೊಡೆತ ಕೊಡಲಿದೆ. ಅಷ್ಟೇ ಅಲ್ಲದೇ, ಮಿತ್ರರಾಷ್ಟ್ರವಾದ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ನೆಪದಲ್ಲಿ ಹಿಂಬಾಗಿಲಿನಿಂದ ಬರ್ಮಾ ದೇಶದ ಅಡಿಕೆ ತರಿಸುವ ಸಾಧ್ಯತೆಯೇ ಹೆಚ್ಚು.

ಇದನ್ನೂ ಓದಿರಿ: ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

ಭೂತಾನ್ ನಿಂದ ಭಾರತಕ್ಕೆ ಸಮುದ್ರ ಮಾರ್ಗವಿಲ್ಲ. ಬರ್ಮಾದಿಂದ ಕೊಲ್ಕತ್ತಾಗೆ ಸಮುದ್ರ ಮಾರ್ಗವಿದೆ ಮತ್ತು ಈ ಬಂದರಿನಲ್ಲಿ ಸುಂಕವಿಲ್ಲ. ಅಂದ್ರೆ ಭೂತಾನ್ ಅಡಿಕೆಯ ಹೆಸರಿನಲ್ಲಿ ಬರ್ಮಾ ದೇಶದ ಅಡಿಕೆ ನಮ್ಮ ದೇಶಕ್ಕೆ ಕಳ್ಳ ಮಾರ್ಗದಲ್ಲಿ ಬರುವುದರಲ್ಲಿ ಸಂಶಯವಿಲ್ಲ. ಅದರ ಪ್ರಮಾಣ ಕೂಡ 17,000 ಟನ್‌ಗೆ ಬದಲಾಗಿ ಲಕ್ಷಾಂತರ ಟನ್ ಭಾರತದ ಮಾರುಕಟ್ಟೆಯನ್ನು ಆವರಿಸುವ ಎಲ್ಲಾ ಸಾಧ್ಯತೆಗಳಿವೆ. ಈ ಸುಳ್ಳಿನ ಕವಚದೊಳಗೆ ರೈತರ ಮತ್ತು ಆರ್ಥಿಕ ವಹಿವಾಟಿನ ನೋವಿನ ಬದುಕಿದೆ. ಇದನ್ನು ಪ್ರಜ್ಞಾವಂತ ಜನರು ಬೀದಿಗಿಳಿದು ವಿರೋಧಿಸಬೇಕಲ್ಲವೇ?

ಹಾಗೆಯೇ ಮಲೆನಾಡಿನ ಜನರನ್ನು ಬಿಟ್ಟುಬಿಡದೆ ಬಾಧಿಸುತ್ತಿರುವ ಸಮಸ್ಯೆಗಳಲ್ಲಿ ಮತ್ತೊಂದು ಅರಣ್ಯ ಕಾಯ್ದೆಗಳು. ಇದರ ಭಾಗವಾಗಿ ಎಲ್ಲೆಡೆಯು ಜನರನ್ನ ಬಾಧಿಸುತ್ತಿರುವುದು ಸೆಕ್ಷನ್ 4(1). ಕಂದಾಯ ಭೂಮಿಯನ್ನು ಕರಾಳ ಸೆಕ್ಷನ್‌ಗಳ ಅಡಿಯಲ್ಲಿ ಮೀಸಲು ಅರಣ್ಯ ಮಾಡುವ ಹುನ್ನಾರವಿದೆ. ಈ ಕಾಡನ್ನು ನಂಬಿ ಬದುಕು ಕಟ್ಟಿಕೊಂಡವರು ಸಾವಿರಾರು ಜನ ಇವತ್ತಿಗೂ ನೂರಾರು ವರ್ಷಗಳಿಂದ ಅಲ್ಲಿ ಬದುಕುತ್ತಿದ್ದರೂ, ತಾನು ನಿಂತ ನೆಲ ನನ್ನದೇ ಎಂದು ಹೇಳಲು ಸಾಧ್ಯವಿಲ್ಲ ಅನ್ನುವ ಸ್ಥಿತಿ ಉಂಟಾಗಿದೆ. ಜೀವ ಭದ್ರತೆಗಾಗಿ ಒಂದು ಅಧಿಕೃತ ದಾಖಲಾತಿ ಇಲ್ಲವಾಗಿದೆ. 94ಸಿ, 94ಸಿಸಿ, 5 ಮಂಜೂರಾತಿಗಾಗಿ ವಿವಿಧ ಫಾರಂ ಹಾಕಿಕೊಂಡು ಆದೇಶಕ್ಕಾಗಿ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ಎಲ್ಲದಕ್ಕೂ ಈ ಕಾಯ್ದೆಗಳನ್ನು ನೆಪವಾಗಿಟ್ಟುಕೊಂಡು, ಜನರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಈ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...