Homeಕರ್ನಾಟಕಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

ಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು: ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು. ಎಲೆ ಚುಕ್ಕಿ, ಹಳದಿ ಎಲೆರೋಗದ ಸಂಶೋಧನೆಗಾಗಿ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು ಹಾಗೂ ರೈತರಿಗೆ ಮಾರಕವಾಗಿರುವ ಅರಣ್ಯ ಕಾಯ್ದೆಯ ಸೆಕ್ಷನ್‌ 4(1) ರದ್ದು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಶಕ್ತಿ ಸಂಘಟನೆ ನೇತೃತ್ವದಲ್ಲಿ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶೃಂಗೇರಿ ಬಸ್‌ಸ್ಟಾಂಡ್‌ನಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಗಿದ್ದು, “ನಮ್ಮನ್ನಾಳುವ ಸರ್ಕಾರಗಳು ನಿರಂತರವಾಗಿ ಕೃಷಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಸಂಕಷ್ಟದಿಂದ ನರಳುತ್ತಿರುವ ರೈತಾಪಿ ಜನ, ಕೂಲಿಕಾರ್ಮಿಕರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಇದರ ಪರಿಣಾಮಗಳು ಎಲ್ಲ ಜನವರ್ಗಕ್ಕೂ ತಟ್ಟುತ್ತದೆ. ಈ ಜನವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲೆನಾಡಿನ ಜನರ ಕೈಯಲ್ಲಿ ಒಂದಷ್ಟು ಹಣ ಓಡಾಡುತ್ತಿದೆ ಎಂದರೆ ಅದಕ್ಕೆ ಕಾರಣ ಅಡಿಕೆ ಎಂಬ ವಾಣಿಜ್ಯ ಬೆಳೆ. ಇದಕ್ಕೆ ಎಷ್ಟು ಮೌಲ್ಯವಿತ್ತೋ ಅಷ್ಟೇ ಕಂಟಕ ಮೊದಲಿನಿಂದಲೂ ಎದುರಾಗಿದೆ. ಈಗ ಎದುರಾಗಿರುವ ಎಲೆ ಚುಕ್ಕಿ ರೋಗ ಬೆಳೆಗಾರರನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದೆ. ಅದರ ಜೊತೆಗೆ ಆಮದು ನೀತಿಯನ್ನು ರೂಪಿಸಿ ಸಂಕಷ್ಟಕ್ಕೆ ಸಿಲುಕಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

“ಎಲೆ ಚುಕ್ಕಿ, ಹಳದಿ ಎಲೆ ರೋಗದ ಸಂಶೋಧನೆಗಾಗಿ ತಕ್ಷಣವೇ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯು ರೈತರ ಭೂಮಿಯ ಮಣ್ಣು ಪರೀಕ್ಷೆ ಸೇರಿದಂತೆ ವೈಜ್ಞಾನಿಕ ಪರಿಹಾರಗಳ ಮತ್ತು ಉಪಯೋಗದ ಬಗ್ಗೆ ರೈತರಿಗೆ ಮಾಹಿತಿ ಕೊಡಬೇಕು” ಎಂದು ಒತ್ತಾಯಿಸಲಾಯಿತು.

ಕೊಳೆ ರೋಗ, ಎಲೆ ಚುಕ್ಕಿ ರೋಗದಿಂದ ಬಾಧಿತರಾದ ಎಲ್ಲಾ ರೈತರಿಗೂ ಪರಿಹಾರ ಕೊಡಬೇಕು. ಹಾಗೂ ಕಾರ್ಮಿಕ ಮತ್ತು ಬಡ ಕುಟುಂಬಕ್ಕೆ ವಿವಿಧ ಪ್ಯಾಕೇಟ್ ಘೋಷಿಸಬೇಕು. ಎಲ್ಲಾ ಮಂಜೂರಾತಿ ಹಾಗೂ ಅಭಿವೃದ್ಧಿ ಕೆಲಸಕ್ಕೆ ಮಾರಕವಾದ ಅರಣ್ಯ ಕಾಯ್ದೆಯ ಸೆಕ್ಷನ್ 4(1) ಹಾಗೂ ಇತರೆ ಅರಣ್ಯ ಕಾಯ್ದೆಗಳು ರದ್ದಾಗಬೇಕು. ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಲಾಯಿತು.

ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರಾತಿ ಮಾಡಬೇಕು. ಎಲ್ಲಾ ಹಳ್ಳಿಗಳ ರಸ್ತೆಗಳನ್ನು (ವೈಜ್ಞಾನಿಕವಾಗಿ, ಪರಿಸರಕ್ಕೆ ಪೂರಕವಾಗಿ) ದುರಸ್ಥಿಗೊಳಸಬೇಕು. ರೈತರ ಖಾತೆಗೆ ಜಮಾ ಆಗಬೇಕಿದ್ದ ಪಸಲ್ ಭೀಮಾ ವಿಮಾ ಯೋಜನೆಯ ಹಣವನ್ನು ಪೂರ್ಣ ಪ್ರಮಾಣದಲ್ಲಿ ತಕ್ಷಣವೇ ಬಿಡುಗಡೆ ಮಾಡಿ ಸರ್ಕಾರವೇ ನೇರವಾಗಿ ರೈತರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಸಂಘಟನೆ ತಿಳಿಸಿದೆ.

ಪ್ರತಿಭಟನೆಯಲ್ಲಿ ಆದಿವಾಸಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಕಲ್ಕುಳಿ ವಿಠಲ್ ಹೆಗ್ಡೆ, ಜನಶಕ್ತಿ ರಾಜ್ಯ ಕಾರ್ಯದರ್ಶಿ ಸುರೇಶ್, ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ ಅಶೋಕ್, ಜಿಲ್ಲಾ ಸಮಿತಿ ಗೌರವ ಅಧ್ಯಕ್ಷರಾದ ರಾಧಾ, ಕೌಳಿ ರಾಮು, ಹಾಗಲಾಗಂಚಿ ವೆಂಕಟೇಶ್, ಸರೋಜಾ, ಆನಂದ್, ರೈತ ಮುಖಂಡರಾದ ಕಂಬಳಗೆರೆ ರಾಜೇಂದ್ರ, ನವೀನ್ ಕರ್ವಾಲೆ ಇತರರು ಹಾಜರಿದ್ದರು.

ಏತಕ್ಕಾಗಿ ಈ ಹೋರಾಟ? ಸಂಘಟನೆ ಹೇಳುವುದೇನು?

ಕೊಳೆರೋಗವು ನಿನ್ನೆ ಮೊನ್ನೆ ಜನ್ಮ ತಾಳಿದವುಗಳಲ್ಲ. ಇದಕ್ಕೆ ಕಾರಣ ತೇವಾಂಶ ಜಾಸ್ತಿಯಾಗುವಿಕೆ. ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗೆ ಮನುಷ್ಯರಂತೆ ಸಕಲ ಜಲಚರ ಸಸ್ಯಗಳಿಗೂ ಮಾರಕ ರೋಗಗಳು ಬಾಧಿಸುತ್ತಲೇ ಇರುತ್ತವೆ.

ನಮ್ಮನ್ನಾಳುವ ಸರ್ಕಾರಗಳು ಈ ರೋಗದ ಬಗ್ಗೆ ನಿರಂತರವಾದ ಸಂಶೋಧನೆ ನಡೆಸಿ, ಬಾಧೆಗೊಳಗಾದ ಜನರಿಗೆ ಅವಶ್ಯಕ ಸಲಹೆ ಸೂಚನೆ, ಔಷಧಿ, ಪರಿಹಾರಗಳನ್ನು ನೀಡಬೇಕಿತ್ತು. ಅದನ್ನು ಬಿಟ್ಟು, ರೈತರ ಬಗ್ಗೆ ಒಂದಿನಿತೂ ಕಾಳಜಿಯಿಲ್ಲದ ಸರ್ಕಾರಗಳು ಇನ್ನಷ್ಟು ಕೃಷಿ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಉತ್ಸುಕವಾಗಿದೆ. ತೊಂಡೆರೋಗ, ಎಲೆ ಚುಕ್ಕಿ ರೋಗ, ಕೊಳೆ ರೋಗದ ಸಮಸ್ಯೆ ತಾಂಡವವಾಡುತ್ತಿದೆ. ಈಗ ಕೇಂದ್ರ ಸರ್ಕಾರ ಭೂತನ್ ಅಡಿಕೆಯನ್ನು ಸುಂಕರಹಿತವಾಗಿ ಆಮದು ಮಾಡಿಕೊಳ್ಳಲು ತಯಾರಿ ನಡೆಸಿದೆ. ಇದು ಇಲ್ಲಿನ ರೈತರ ಬದುಕಿಗೆ ಹಾಗೂ ಮಲೆನಾಡಿನ ಆರ್ಥಿಕ ಚಟುವಟಿಕೆಗೆ ಕೊಡಲಿ ಪೆಟ್ಟು ಕೊಡಲಿದೆ. 17,000 ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಹುನ್ನಾರದ ಹಿಂದೆ ಅಮಿತ್‌ ಶಾ ಮಗ ಜೈ ಶಾ, ಹಾಗೂ ಕ್ಯಾಂಪ್ಪೋ ಅಧ್ಯಕ್ಷರ ಮಗನ ಸಹಯೋಗದಲ್ಲಿ ನಡೆಯುತ್ತಿರುವ “ಗಣೇಶ್ ಟ್ರೇಡಿಂಗ್” ಎಂಬ ಕಂಪನಿಯ ಕೈಗಳಿವೆ, ಎನ್ನುವ ಆರೋಪವೂ ಕೇಳಿ ಬರುತ್ತಿದೆ.

ನಮ್ಮ ದೇಶದಲ್ಲಿ ಲಕ್ಷಾಂತರ ಎಕರೆ ಅಡಿಕೆ ತೋಟಗಳಿವೆ. 70 ಲಕ್ಷಕ್ಕೂ ಹೆಚ್ಚು ಅಡಿಕೆ ಕೃಷಿ ಕುಟುಂಬಗಳಿವೆ. ಹಾಗೆ ಇದನ್ನು ನಂಬಿ ತಮ್ಮ ಬದುಕನ್ನು ಕಟ್ಟಿಕೊಂಡ ಕೋಟ್ಯಂತರ ಕೂಲಿ ಕಾರ್ಮಿಕರಿದ್ದಾರೆ. ಸರ್ಕಾರ ಈ ಸುಂಕರಹಿತ ಆಮದು ನೀತಿಯಿಂದ ಹತ್ತಾರು ಕೋಟಿ ಕುಟುಂಬಗಳನ್ನು ಬೀದಿಗೆ ತಳ್ಳಲಿದೆ. ಮಲೆನಾಡ ಹಾಗೂ ಇತರೆ ಪ್ರದೇಶದ ಬೀದಿ ವ್ಯಾಪಾರಿಗಳು, ದಲ್ಲಾಳಿ ವ್ಯಾಪಾರಿಗಳು, ದಿನಸಿ ಅಂಗಡಿ ವ್ಯಾಪಾರಸ್ಥರಿಗೂ ಈ ನೀತಿ ದೊಡ್ಡ ಹೊಡೆತ ಕೊಡಲಿದೆ. ಅಷ್ಟೇ ಅಲ್ಲದೇ, ಮಿತ್ರರಾಷ್ಟ್ರವಾದ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ನೆಪದಲ್ಲಿ ಹಿಂಬಾಗಿಲಿನಿಂದ ಬರ್ಮಾ ದೇಶದ ಅಡಿಕೆ ತರಿಸುವ ಸಾಧ್ಯತೆಯೇ ಹೆಚ್ಚು.

ಇದನ್ನೂ ಓದಿರಿ: ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

ಭೂತಾನ್ ನಿಂದ ಭಾರತಕ್ಕೆ ಸಮುದ್ರ ಮಾರ್ಗವಿಲ್ಲ. ಬರ್ಮಾದಿಂದ ಕೊಲ್ಕತ್ತಾಗೆ ಸಮುದ್ರ ಮಾರ್ಗವಿದೆ ಮತ್ತು ಈ ಬಂದರಿನಲ್ಲಿ ಸುಂಕವಿಲ್ಲ. ಅಂದ್ರೆ ಭೂತಾನ್ ಅಡಿಕೆಯ ಹೆಸರಿನಲ್ಲಿ ಬರ್ಮಾ ದೇಶದ ಅಡಿಕೆ ನಮ್ಮ ದೇಶಕ್ಕೆ ಕಳ್ಳ ಮಾರ್ಗದಲ್ಲಿ ಬರುವುದರಲ್ಲಿ ಸಂಶಯವಿಲ್ಲ. ಅದರ ಪ್ರಮಾಣ ಕೂಡ 17,000 ಟನ್‌ಗೆ ಬದಲಾಗಿ ಲಕ್ಷಾಂತರ ಟನ್ ಭಾರತದ ಮಾರುಕಟ್ಟೆಯನ್ನು ಆವರಿಸುವ ಎಲ್ಲಾ ಸಾಧ್ಯತೆಗಳಿವೆ. ಈ ಸುಳ್ಳಿನ ಕವಚದೊಳಗೆ ರೈತರ ಮತ್ತು ಆರ್ಥಿಕ ವಹಿವಾಟಿನ ನೋವಿನ ಬದುಕಿದೆ. ಇದನ್ನು ಪ್ರಜ್ಞಾವಂತ ಜನರು ಬೀದಿಗಿಳಿದು ವಿರೋಧಿಸಬೇಕಲ್ಲವೇ?

ಹಾಗೆಯೇ ಮಲೆನಾಡಿನ ಜನರನ್ನು ಬಿಟ್ಟುಬಿಡದೆ ಬಾಧಿಸುತ್ತಿರುವ ಸಮಸ್ಯೆಗಳಲ್ಲಿ ಮತ್ತೊಂದು ಅರಣ್ಯ ಕಾಯ್ದೆಗಳು. ಇದರ ಭಾಗವಾಗಿ ಎಲ್ಲೆಡೆಯು ಜನರನ್ನ ಬಾಧಿಸುತ್ತಿರುವುದು ಸೆಕ್ಷನ್ 4(1). ಕಂದಾಯ ಭೂಮಿಯನ್ನು ಕರಾಳ ಸೆಕ್ಷನ್‌ಗಳ ಅಡಿಯಲ್ಲಿ ಮೀಸಲು ಅರಣ್ಯ ಮಾಡುವ ಹುನ್ನಾರವಿದೆ. ಈ ಕಾಡನ್ನು ನಂಬಿ ಬದುಕು ಕಟ್ಟಿಕೊಂಡವರು ಸಾವಿರಾರು ಜನ ಇವತ್ತಿಗೂ ನೂರಾರು ವರ್ಷಗಳಿಂದ ಅಲ್ಲಿ ಬದುಕುತ್ತಿದ್ದರೂ, ತಾನು ನಿಂತ ನೆಲ ನನ್ನದೇ ಎಂದು ಹೇಳಲು ಸಾಧ್ಯವಿಲ್ಲ ಅನ್ನುವ ಸ್ಥಿತಿ ಉಂಟಾಗಿದೆ. ಜೀವ ಭದ್ರತೆಗಾಗಿ ಒಂದು ಅಧಿಕೃತ ದಾಖಲಾತಿ ಇಲ್ಲವಾಗಿದೆ. 94ಸಿ, 94ಸಿಸಿ, 5 ಮಂಜೂರಾತಿಗಾಗಿ ವಿವಿಧ ಫಾರಂ ಹಾಕಿಕೊಂಡು ಆದೇಶಕ್ಕಾಗಿ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ಎಲ್ಲದಕ್ಕೂ ಈ ಕಾಯ್ದೆಗಳನ್ನು ನೆಪವಾಗಿಟ್ಟುಕೊಂಡು, ಜನರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಈ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...